ರಾಜ್ಯದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿಸುದ್ದಿ ನೀಡಿದೆ. ಶಬರಿಮಲೆಗೆ ತೆರಳುವ ಯಾತ್ರಿಕರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ಆರಂಭಿಸಲಾಗಿದೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಪ್ರಯತ್ನದ ಫಲವಾಗಿ ಹುಬ್ಬಳ್ಳಿಯಿಂದ ಕೊಲ್ಲಂವರೆಗೆ 22 ಕೋಚ್ಗಳುಳ್ಳ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಸೆಪ್ಟಂಬರ್ 28ರಿಂದ ಸಂಚಾರ ಆರಂಭಿಸಲಾಗಿದೆ.
ರೈಲು ಸಂಚಾರ ಯಾವ ಮಾರ್ಗದಲ್ಲಿ?:
ರಾಜ್ಯದ ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಬೆಂಗಳೂರು ಮಾರ್ಗವಾಗಿ ಹಾಗೂ ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಇರೋಡ್, ತಿರುಪುರ, ಪೊದನೂರ, ತ್ರಿಶೂರು, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೇರಿ, ಚೆಂಗನ್ನೂರ್, ಕರುನಾಗಪಲ್ಲಿ, ಸಸ್ಥನಕೊಟ್ಟಾ ಮಾರ್ಗದಲ್ಲಿ ಈ ವಿಶೇಷ ರೈಲು ಸಂಚರಿಸಲಿದೆ.


















