ಬಂಟಕಲ್: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ಕ್ರಾಸ್ ಘಟಕ, ರೋಟರ್ಯಾಕ್ಟ್ ಘಟಕ ವತಿಯಿಂದ ದಿನಾಂಕ 21 ಜೂನ್ 2025ರಂದು ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗದ ಬಗ್ಗೆ
ಉಪನ್ಯಾಸವನ್ನು ಮತ್ತು ಪ್ರಾತ್ಯಕ್ಷಿಕೆಯನ್ನು ಕಾಲೇಜಿನ
ಆವರಣದಲ್ಲಿ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕಾರ್ಕಳದ ಮನಶಾಸ್ತ್ರಜ್ಞ ಮತ್ತು
ಯೋಗ ತಜ್ಞರಾದ ಡಾ. ಪ್ರಸನ್ನ ಹೆಗ್ಡೆ, ಇವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಇವರು ಯೋಗವು ನಮ್ಮ ದೈನಂದಿನ ಜೇವನದಲ್ಲಿ ಹೇಗೆ ಮಹತ್ವವನ್ನು ಪಡೆದುಕೊಂಡಿದೆ. ಅದು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಸ್ಥಿತಿಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ವಿವರಿಸಿದರು. ಆಂತರಿಕ ಶಾಂತಿ ಕಾಪಡುವಲ್ಲಿ ಧ್ಯಾನದ ಮಹತ್ವವನ್ನು ತಿಳಿಸಿದರು.

ಇನ್ನೋರ್ವ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಸದಾಶಿವ ರಾವ್, ನಿವೃತ್ತ ಪ್ರಾಧ್ಯಾಪಕರು, ಪೂರ್ಣ ಪ್ರಜ್ಞಾ ಕಾಲೇಜು, ಉಡುಪಿ ಇವರು ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳು ನಿತ್ಯ ಯೋಗಾಭ್ಯಾಸ ಮಾಡುವುದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢತೆ ಹೊಂದಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಶ್ರೀ ಸದಾಶಿವ ರಾವ್ ಯೋಗ ಪ್ರಾರ್ಥನೆಯೊಂದಿಗೆ ಯೋಗ ಪ್ರಾತ್ಯಕ್ಷಿಕೆಗೆ ಚಾಲನೆ ನೀಡಿದರು. ಇವರು ತಾಡಾಸನ, ವೃಕ್ಷಾಸನ, ತ್ರಿಕೋನಾಸನ, ಭದ್ರಾಸನ, ವಕ್ರಾಸನ, ಶಶಾಂಕಾಸನ, ಭುಜಂಗಾಸನ, ಶವಾಸನ, ಪ್ರಾಣಾಯಾಮ, ಧ್ಯಾನ ಮುಂತಾದ ಆಸನಗಳನ್ನು ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗೆ ಪ್ರದರ್ಶಿಸಿ ಆ ಆಸನಗಳ ಮಹತ್ವವನ್ನು ವಿವರಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್,
ಯುವಕರು ಮತ್ತು ಮಕ್ಕಳು ತಮ್ಮ ಜೀವನದಲ್ಲಿ ಯೋಗದ
ಮಹತ್ವವನ್ನು ತಿಳಿದುಕೊಳ್ಳಲು ಯೋಗ ದಿನಾಚರಣೆಯನ್ನು
ಆಯೋಜಿಸಲಾಗುತ್ತದೆ ಎಂದು ತಿಳಿಸಿದರು. ದೇಹ ಮತ್ತು
ಮನಸ್ಸಿನ ಆರೋಗ್ಯಕ್ಕೆ ಯೋಗವನ್ನು ನಿಯಮಿತವಾಗಿ ಅಭ್ಯಾಸ
ಮಾಡಬೇಕೆಂದು ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ಕ್ರಾಸ್ ಘಟಕ,
ರೋಟರ್ಯಾಕ್ಟ್ ಘಟಕದ ಸಂಯೋಜಕರಾದ ಶ್ರೀ ಸಚಿನ್ ಪ್ರಭು, ಎನ್ಸಿಸಿ ಘಟಕದ ಸಂಯೋಜಕರು ಕಾರ್ಯಕ್ರಮವನ್ನು
ಸಂಯೋಜಿಸಿದರು.












