ಹೊಕ್ಕಾಡಿ ಗೋಳಿ ಕಂಬಳದಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ಹೆಸರಿನಲ್ಲಿ ಪಾಲ್ಗೊಂಡವು ಓಟದ ಕೋಣಗಳು

ಬಂಟ್ವಾಳ:ತಾಲೂಕಿನ ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿ  ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ  ನಡೆಯುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ-ವಿಕ್ರಮ  ಜೋಡುಕರೆ ಬಯಲು ಕಂಬಳ ಮತ್ತು ಈ ವರ್ಷದ ಪ್ರಥಮ ಕಂಬಳದಲ್ಲಿ ಬೆಂಗಳೂರು ದೊಡ್ಮನೆ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗ ಹೆಸರಿನಲ್ಲಿ ಪಾಲ್ಗೊಂಡ ಓಟದ ಕೋಣಗಳು ಗಮನ ಸೆಳೆಯಿತು. ಕಿರಣ್ ಕುಮಾರ್ ಮಂಜಿಲ ಮತ್ತು ಯಶೋಧರ ಮಹಾಬಲ ಪೂಜಾರಿ ಸಹೋದರರು ನೇತೃತ್ವ ವಹಿಸಿದ್ದರು.

ಛಾಯಾ ವರದಿ-ಪುನೀತ್ ಸಿದ್ದಕಟ್ಟೆ