ಪ್ರಧಾನಿ ಮೋದಿ ಹುಟ್ಟುಹಬ್ಬ: ಬಿಜೆಪಿ ಕಾರ್ಯಕರ್ತರಿಂದ ಹೆಜಮಾಡಿ ಬೀಚ್ ಸ್ವಚ್ಛತೆ

ಉಡುಪಿ: ಬಿಜೆಪಿ ಯುವ ಮೋರ್ಚಾ ಕಾಪು ವಲಯ ಮತ್ತು ಯುವ ಮೋರ್ಚಾ ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಜಂಟಿ ಆಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 70 ನೇ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಸಪ್ತಹಾ ಕಾರ್ಯಕ್ರಮದ ಅಂಗವಾಗಿ ಹೆಜಮಾಡಿ ಕಡಲ ಕಿನಾರೆಯಲ್ಲಿ ಇಂದು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್ .ಮೆಂಡನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾಪು ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಮಂಗಳೂರು ಬಿಜೆಪಿ ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಕಾಪು ಬಿಜೆಪಿ ಪ್ರಭಾರಿ ಯಶ್ ಪಾಲ್ ಸುವರ್ಣ, ಕಾಪು ಕ್ಷೇತ್ರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರು, ಜಿಪಂ ಸದಸ್ಯ ಶಶಿಕಾಂತ್ ಪಡುಬಿದ್ರಿ, ಪಡುಬಿದ್ರಿ ಯುವ ಮೋರ್ಚಾ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕೀರ್ತನ್ ಪೂಜಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕ್ಷೇತ್ರ ಮಹಿಳಾ ಮೋರ್ಚಾ ಅಧ್ಯಕ್ಷ ಸುಮಾ ಶೆಟ್ಟಿ.

ಪಕ್ಷದ ಪದಾಧಿಕಾರಿಗಳಾದ ಪ್ರಕಾಶ ಶೆಟ್ಟಿ ಪಾದೆಬೆಟ್ಟು, ಕೇಶವ ಮೊಯ್ಲಿ, ಶಿವಪ್ರಸಾದ್ ಶೆಟ್ಟಿ, ವಿಶಾಲಾಕ್ಷಿ ಪುತ್ರನ್, ಸುಧಾಕರ್ ಕರ್ಕೇರ, ಸುಧಾಮ ಶೆಟ್ಟಿ, ಗಂಗಾಧರ್ ಸುವರ್ಣ, ಕೇಸರಿ ಯುವರಾಜ್, ಯತೀಶ್ ಕುಮಾರ್ ಮಟ್ಟು, ಕಿಶನ್ ಅಲೆವೂರ್, ಪ್ರಸನ್ನ ಕಾಮತ್, ಸನತ್ ಮಣಿಪುರ, ಕಿರಣ್ ಮೊಗವೀರ, ಪ್ರವೀಣ್ ಅಡ್ವೆ, ಪ್ರವೀಣ್ ಪೂಜಾರಿ, ವಿಜೇತ್ ಪಡುಬಿದ್ರಿ,ನಾಗರಾಜ್ ಆಚಾರ್ಯ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೆಜಮಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಶರಣ್ ಕುಮಾರ ಮಟ್ಟು ಕಾರ್ಯಕ್ರಮ ನಿರೂಪಿಸಿದರು.