ಬೆಳ್ತಂಗಡಿ: ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಭಾಗದ ಕಾಂಗ್ರೆಸ್‌ ನಾಯಕರು ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷ ಜಯಂತ್‌ ಕೋಟ್ಯಾನ್‌ ಅವರ ಸಮ್ಮುಖದಲ್ಲಿ ಮೇ.5 ರಂದು ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಭಾಗದ ಕಾಂಗ್ರೆಸ್‌ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು.

ಕಾಂಗ್ರೆಸ್‌ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಸೆಬಾಸ್ಟಿನ್ ಮಿತ್ತಬಾಗಿಲು, ಬಾಲಕೃಷ್ಣ ಗೌಡ ಮಲವಂತಿಗೆ, ಪೂವಪ್ಪ ಪೂಜಾರಿ ಮಲವಂತಿಗೆ, ವನಿತಾ ಕಡಿರುದ್ಯಾವರ, ಬಾಲಕೃಷ್ಣ ಗೌಡ ಉದ್ದಾರೆ ಅವರನ್ನು ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಹರೀಶ್ ಪೂಂಜ ಅವರು ಬಿಜೆಪಿಗೆ ಬರಮಾಡಿಕೊಂಡರು.