ಬೆಳ್ತಂಗಡಿ: ಶಾಲಾ ಬಾವಿ ನೀರು‌ ಕುಡಿದು ಎಂಟು ಮಕ್ಕಳು ಅಸ್ವಸ್ಥ

ಮಂಗಳೂರು: ಶಾಲೆಯ ಬಾವಿ ನೀರು ಕುಡಿದು ಎಂಟು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಪೆರ್ಲ ಸರಕಾರಿ ಶಾಲೆಯಲ್ಲಿ ನಡೆದಿದೆ.
7ನೇ ತರಗತಿ ವಿದ್ಯಾರ್ಥಿ ಚೇತನ್ ಕುಮಾರ್, 8ನೇ ತರಗತಿ ವಿದ್ಯಾರ್ಥಿಗಳಾದ ಸುದೀಶ್, ಯೋಗೀಶ್, ರಾಧಾಕೃಷ್ಣ, 6ನೇ ತರಗತಿಗಳಾದ ವಿದ್ಯಾರ್ಥಿ ಸುದೀಪ್, ರಾಜೇಶ್, ಮೋನಿಸ್ ಹಾಗೂ ಶ್ರವಣ್, ಅಸ್ವಸ್ಥಗೊಂಡವರು. ಶಾಲಾ ಮಕ್ಕಳು ಶಾಲಾ ತರಕಾರಿ ತೋಟಕ್ಕೆ ಬಾವಿಯಿಂದ ಪಂಪ್ ನಲ್ಲಿ ನೀರು ಹಾಕುತ್ತಿದ್ದರು. ಈ ಸಮಯ ಎಂಟು ವಿದ್ಯಾರ್ಥಿಗಳು ಅದೇ ನೀರನ್ನು ಕುಡಿದಿದ್ದರು. ನೀರು ಕುಡಿಯುತ್ತಲೇ ಈ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತು.
ವಿಷಯ ತಿಳಿದು ಶಾಲಾ ಮುಖ್ಯ ಶಿಕ್ಷಕಿ ಪರಿಶೀಲನೆ ಮಾಡಿದಾಗ ಬಾವಿ ಸಮೀಪ ಕ್ಯಾನ್ ಒಂದು ಕಂಡುಬಂದಿದೆ. ಈ ನಡುವೆ ಅಸ್ವಸ್ಥಗೊಂಡ 8 ವಿದ್ಯಾರ್ಥಿಗಳನನ್ನು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣ ನಾಲ್ಕು ಮಕ್ಕಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹಾಗೂ ನಾಲ್ಕು ಮಕ್ಕಳನ್ನು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾವಿಗೆ ಯಾರೋ ದುಷ್ಕರ್ಮಿಗಳು ವಿಷ ಸೇವಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೋಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.