ಬೆಳ್ತಂಗಡಿ: ಎಸ್.ಡಿ.ಎಂ ಶಾಲೆಯ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ವರ್ಚುವಲ್ ಮೂಲಕ ಗಾಂಧಿ ಜಯಂತಿ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಧೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿಧ್ಯಾರ್ಥಿಗಳಿಂದ ವರ್ಚುವಲ್ ಮೂಲಕ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಸ್ಕೌಟ್ಸ್ ಗೈಡ್ಸ್ ವಿಧ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆಯನ್ನು ಕೈಗೊಂಡು ಗಾಂಧಿ ಆದರ್ಶವನ್ನು ತಮ್ಮಲ್ಲಿ ಆಳವಡಿಸಿ ಉತ್ತಮ ಪ್ರಜೆಗಳಾಗಿ ಪರಿವರ್ತಿತರಾಗುತ್ತೇವೆ ಎಂಬ ಮನೋಭಾವನೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೋಲಿಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಸವಿತಾ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಸ್ಕೌಟ್ಸ್ ಗೈಡ್ಸ್ ನಿಂದ ಉತ್ತಮ ಪ್ರಜೆಗಳು ಸಮಾಜಕ್ಕೆ ದೊರಕುವುದು ಖಚಿತ. ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಲು ಸಾಧ್ಯ ಎಂದರು.

ಗೈಡ್ ವಿದ್ಯಾರ್ಥಿನಿ ಪ್ರತೀಕ್ಷ ನಿರೂಪಿಸಿ, ಗೈಡ್ ವಿದ್ಯಾರ್ಥಿನಿ ಕವನ ವಂದಿಸಿದರು. ಎಸ್ ಡಿ ಎಮ್ ನ ಕ್ಯಾಪ್ಟನ್ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು.