ಭಾರತೀಯ ಜನತಾ ಪಕ್ಷದ ಅಂತಿಮ ಪಟ್ಟಿ ಬಿಡುಗಡೆ: ಜಗದೀಶ್ ಶೆಟ್ಟರ್ ವಿರುದ್ದ ಮಹೇಶ್ ತೆಂಗಿನಕಾಯಿ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ 10 ಅಭ್ಯರ್ಥಿಗಳ ಮೂರನೇ ಮತ್ತು ಕೊನೆಯ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಮೇ 10 ರಂದು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳು ಮತ್ತು ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಪಕ್ಷವು ತನ್ನ ಅನುಭವಿ ನಾಯಕ ಅರವಿಂದ ಲಿಂಬಾವಳಿಯನ್ನು ಮಹದೇವಪುರ ಕ್ಷೇತ್ರದಿಂದ ಕೈಬಿಟ್ಟಿದ್ದು ಈ ಸ್ಥಾನದಲ್ಲಿ ಅವರ ಪತ್ನಿ ಮಂಜುಳಾ ಅರವಿಂದ್ ಲಿಂಬಾವಳಿಯನ್ನು ಕಣಕ್ಕಿಳಿಸಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸ್ಪರ್ಧಿಸಲು ಬಯಸಿದ್ದ ಹುಬ್ಬಳ್ಳಿ-ಧಾರವಾಡ- ಕ್ಷೇತ್ರದಿಂದ ಪಕ್ಷ ತನ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಅವರನ್ನು ಇಳಿಸಿದೆ.