ದಳಪತಿಗಳಿಗೆ ಬಿಗ್ ಶಾಕ್: ಜೆಡಿಎಸ್ ತೊರೆದು ಕೈ ಸೇರಿದ ಹಿರಿಯ ಮುಖಂಡ

ಬೀದರ್: ಬಸವಕಲ್ಯಾಣ ಉಪಚುನಾವಣೆ ಹೊಸ್ತಿಲಲ್ಲೇ ಜೆಡಿಎಸ್ ಗೆ ಆಘಾತ ಉಂಟಾಗಿದೆ. ಜೆಡಿಎಸ್ ಹಿರಿಯ ಮುಖಂಡ ಪಿಜಿಆರ್ ಸಿಂಧ್ಯಾ ಜೆಡಿಎಸ್ ಗೆ ಗುಡ್ ಬೈ ಹೇಳಿ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ.

ಇಂದು ಬಸವಕಲ್ಯಾಣ ಉಪಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿರೋ ಮಾಲಾ ಅವರು ನಾಮಪತ್ರ ಸಲ್ಲಿಸಿದ್ದು, ಇದಕ್ಕೂ ಮುನ್ನಕಾಂಗ್ರೆಸ್​ ನಾಯಕರಿಂದ ಬೃಹತ್ ಸಮಾವೇಶ ನಡೆಯಿತು.

ಈ ವೇಳೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿಪಕ್ಷನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸಿಂಧ್ಯಾ ಕಾಂಗ್ರೆಸ್ ಸೇರ್ಪಡೆಗೊಂಡರು.