ಬೈಕ್ ಅಪಘಾತ: ಸವಾರ ಸಾವು

ಉದ್ಯಾವರ ಹಾಲಿಮಾ ಸಾಬ್ಜು  ಹಾಲ್ ಎದುರು ಜ. 21ರಂದು ರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಗಂಗೊಳ್ಳಿ ಮೊವಾಡಿ ನಿವಾಸಿ ಶಿವರಾಜ್(39) ಎಂದು ಗುರುತಿಸಲಾಗಿದೆ.
ಬೈಕ್ ಮಂಗಳೂರಿನಿಂದ ಉಡುಪಿ ಕಡೆ ಬರುತ್ತಿದ್ದ ವೇಳೆ ಅಪಘಾತಕ್ಕೀಡಾಗಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದ ಎನ್ನಲಾಗಿದೆ ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.