ಬಿಜೆಪಿಯ 11 ಸದಸ್ಯರ ಸಂಸದೀಯ ಮಂಡಳಿ ಪ್ರಕಟ: ನಿತಿನ್ ಗಡ್ಕರಿ, ಶಿವರಾಜ್ ಚೌಹಾಣ್ ಗಿಲ್ಲ ಅವಕಾಶ; ಬಿ.ಎಸ್.ಯಡಿಯೂರಪ್ಪ, ಬಿ.ಎಲ್ ಸಂತೋಷ್ ಗೆ ಸ್ಥಾನ

ನವದೆಹಲಿ: ಬುಧವಾರ, ಭಾರತೀಯ ಜನತಾ ಪಕ್ಷವು11 ಸದಸ್ಯರ ಸಂಸದೀಯ ಮಂಡಳಿಯನ್ನು ಘೋಷಿಸಿತು. ಹೊಸದಾಗಿ ರಚಿಸಲಾದ ಮಂಡಳಿಯು ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ನೇತೃತ್ವದಲ್ಲಿರುತ್ತದೆ ಮತ್ತು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒಳಗೊಂಡಿರುತ್ತದೆ.

ಬಿಜೆಪಿಯ ನೂತನ ಸಂಸದೀಯ ಮಂಡಳಿ ಸದಸ್ಯರು

ಬಿಎಸ್ ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ ಲಕ್ಷ್ಮಣ್, ಸುಧಾ ಯಾದವ್, ಬಿಎಲ್ ಸಂತೋಷ್, ಸತ್ಯನಾರಾಯಣ್ ಜಟಿಯಾ, ಇಕ್ಬಾಲ್ ಸಿಂಗ್ ಲಾಲ್ಪುರ ಮುಂತಾದ ಹೊಸ ಸೇರ್ಪಡೆಗಳನ್ನು ಸಂಸದೀಯ ಮಂಡಳಿಯಲ್ಲಿ ಮಾಡಲಾಗಿದೆ. ಏತನ್ಮಧ್ಯೆ, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಈ ಬಾರಿ ಅವಕಾಶ ನೀಡಲಾಗಿಲ್ಲ.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸದಸ್ಯರು

ಈ ಹೊತ್ತಿನಲ್ಲಿ ಪಕ್ಷವು 15 ಸದಸ್ಯರ ಕೇಂದ್ರ ಚುನಾವಣಾ ಸಮಿತಿಯನ್ನು ಸಹ ರಚಿಸಿದೆ, ಅದು ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಪ್ರಧಾನಿ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ಬಿಎಸ್ ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ ಲಕ್ಷ್ಮಣ್, ಸುಧಾ ಯಾದವ್, ಬಿಎಲ್ ಸಂತೋಷ್, ಸತ್ಯನಾರಾಯಣ್ ಜಾಟಿಯಾ, ಇಕ್ಬಾಲ್ ಸಿಂಗ್ ಲಾಲ್ಪುರ, ಭೂಪೇಂದ್ರ ಯಾದವ್, ದೇವೇಂದ್ರ ಫಡ್ನವಿಸ್, ಓಂ ಮಾಥುರ್ ಅವರನ್ನು ಒಳಗೊಂಡಿದೆ.