ರಾಜ್ಯಸಭಾ ಚುನಾವಣೆ: 2 ರಾಜ್ಯಗಳಿಂದ ತಲಾ 4 ಸ್ಥಾನಗಳನ್ನು ಗೆದ್ದ ಬಿಜಿಪಿ, ಕಾಂಗ್ರೆಸ್; ಮಹಾರಾಷ್ಟ್ರ, ಹರಿಯಾಣದಲ್ಲಿ ಫಲಿತಾಂಶ ವಿಳಂಬ

ಬೆಂಗಳೂರು: ಜಿದ್ದಾಜಿದ್ದಿ ರಾಜ್ಯಸಭಾ ಚುನಾವಣಾ ಹೋರಾಟದಲ್ಲಿ ಕರ್ನಾಟಕದ ಆಡಳಿತಾರೂಢ ಬಿಜೆಪಿ ಪಕ್ಷದ ಮೂರೂ ಅಭ್ಯರ್ಥಿಗಳು ನಿರೀಕ್ಷೆಯಂತೆಯೆ ಗೆದ್ದಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಮತ್ತು ಲೆಹರ್ ಸಿಂಗ್ ಮೂರು ರಾಜ್ಯಸಭಾ ಸ್ಥಾನಗಳನ್ನು ಗೆದ್ದು ಗೆಲುವಿನ ನಗೆ ಬೀರಿದ್ದರೆ, ಕಾಂಗ್ರೆಸ್ ಒಂದು ಸ್ಥಾನವನ್ನು ಪಡೆದುಕೊಂಡಿದೆ ಮತ್ತು ಜನತಾ ದಳ ಶೂನ್ಯ ಸಂಪಾದನೆ ಮಾಡಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಮೂರು ಮತ್ತು ಬಿಜೆಪಿ ಒಂದು ಸ್ಥಾನವನ್ನು ಗೆದ್ದಿದೆ. ಏತನ್ಮಧ್ಯೆ, ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಶುಕ್ರವಾರ ರಾಜ್ಯಸಭಾ ಚುನಾವಣೆಯ ಮತ ಎಣಿಕೆ ವಿಳಂಬವಾಗಿದೆ.

ಶುಕ್ರವಾರ ಮತದಾನ ನಡೆದ ನಾಲ್ಕು ರಾಜ್ಯಗಳಿಂದ ಮೇಲ್ಮನೆಗೆ ಒಟ್ಟು 16 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಯ ದೃಷ್ಟಿಯಿಂದ ರಾಜ್ಯಸಭಾ ಚುನಾವಣೆ ನಿರ್ಣಾಯಕವಾಗಿದೆ.