ಕಾರ್ಕಳ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿ ಕಾರ್ಯಕರ್ತರು

ಕಾರ್ಕಳ: ವಿಧಾನಸಭಾ ಕ್ಷೇತ್ರದ ರೆಂಜಾಳ ಗ್ರಾಮದ ಸುಮಾರು 17 ಜನ ಬಿಜೆಪಿ ಕಾರ್ಯಕರ್ತರು ರೆಂಜಾಳ ರಮೇಶ್ ಶೆಟ್ಟಿ , ಪ್ರವೀಣ್ ಶೆಟ್ಟಿ, ಜೀವನ್ ಶೆಟ್ಟಿ ಹಾಗೂ ಸಾಧಿಕ್ ರೆಂಜಾಳ ಇವರ ಮುಂದಾಳತ್ವದಲ್ಲಿ ಭಾನುವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ್ ಶೆಟ್ಟಿ, ಪಕ್ಷದ ಮುಖಂಡರಾದ ಪುರಸಭೆಯ ವಿಪಕ್ಷ ನಾಯಕ ಅಸ್ಪಾಕ್, ಸುಬೀತ್ ಎನ್.ಆರ್ ,ಪ್ರಚಾರ ಸಮಿತಿಯ ಅಧ್ಯಕ್ಷ ಸುಭೋದ್ ರಾವ್, ವಲೇರಿಯನ್ ಪಾಯಸ್, ಜಿಲ್ಲಾ ಕಾಂಗ್ರೆಸ್ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ನಗರ ಕಾಂಗ್ರೆಸ್ ಅಧ್ಯಕ್ಷ ಮಧುರಾಜ್ ಶೆಟ್ಟಿ, ಪುರಸಭೆ ಸದಸ್ಯರಾದ ಪ್ರತಿಮಾ ರಾಣೆ, ನಳಿನಿ ಆಚಾರ್ಯ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಕಾಂತಿ ಶೆಟ್ಟಿ ಹಾಜರಿದ್ದರು.