ಯಶ್ಪಾಲ್ ಸುವರ್ಣಗೆ ಜೀವ ಬೆದರಿಕೆ ಪ್ರಕರಣ: ಅಪರಾಧಿಯನ್ನು ಬಂಧಿಸಿದ ಠಾಣಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ ಯುವಮೋರ್ಚಾ

ಕಾಪು: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಇವರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವಬೆದರಿಕೆ ಒಡ್ಡಿದ ಆರೋಪಿಯನ್ನು ಬಂಧಿಸುವಂತೆ ಬಿಜೆಪಿ ಯುವಮೋರ್ಚಾ ಕಾಪು ಮಂಡಲದಿಂದ ಕಾಪು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಮಂಡಲದ ವತಿಯಿಂದ ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವಾಗಿ ಆರೋಪಿಯನ್ನು ಬಂಧಿಸುವ ಮೂಲಕ ತಮ್ಮ ಕರ್ತವ್ಯ ಪ್ರಜ್ಞೆಯನ್ನು ತೋರ್ಪಡಿಸಿದ ಕಾಪು ವೃತ್ತ ನೀರಿಕ್ಷಕ ಹಾಗೂ ಠಾಣಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.