ಮೇ 29 ರಂದು ಬೈಲೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕಾರ್ಕಳ: ಹಿಂದೂ ಜಾಗರಣ ವೇದಿಕೆ ಬೈಲೂರು ವಲಯ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್(ರಿ.), ಉಡುಪಿ, ರಕ್ತನಿಧಿ, ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ ಇವರ ಸಹಯೋಗದೊಂದಿಗೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಮೇ 29 ರವಿವಾರದಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರವರೆಗೆ ಬೈಲೂರಿನ ಸರಕಾರಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ದಾನಿಗಳು ಸ್ವಯಂ ಪ್ರೇರಣೆಯಿಂದ ರಕ್ತ ದಾನ ಮಾಡಿ ಜೀವ ಉಳಿಸಬೇಕಾಗಿ ಕೇಳಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸುರೇಶ್ ಸಾಲ್ಯಾನ್-9449281268, ದೀಪಕ್-7022918175, ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್-9986668476 ಮಾಣಿಪಾಲ್ ಇವರನ್ನು ಸಂಪರ್ಕಿಸಲು ಕೋರಲಾಗಿದೆ.