ಜ್ಞಾನಸುಧಾ ಸಂಸ್ಥಾಪಕರ ದಿನದ ಅಂಗವಾಗಿ ಆಗಸ್ಟ್ 21 ರಂದು ರಕ್ತದಾನ ಶಿಬಿರ

ಕಾರ್ಕಳ: ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಗಣಿತನಗರ ಕಾರ್ಕಳ, ನಾಗಬನ ಕ್ಯಾಂಪಸ್ ಉಡುಪಿ, ಜ್ಞಾನಸುಧಾ ಎನ್.ಸಿ.ಸಿ, ಎನ್.ಎಸ್.ಎಸ್ ಮತ್ತು ಹಳೆ ವಿದ್ಯಾರ್ಥಿ ಸಂಘ, ರೆಡ್ ಕ್ರಾಸ್ ಸೊಸೈಟಿ ಕಾರ್ಕಳ-ಕುಂದಾಪುರದ ಸಹಯೋಗದೊಂದಿಗೆ ಜ್ಞಾನಸುಧಾ ಸಂಸ್ಥಾಪಕರ ದಿನದ ಅಂಗವಾಗಿ ಆಗಸ್ಟ್ 21 ರಂದು ಗಣಿತ ನಗರ ಕ್ಯಾಂಪಸ್ ನಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.