ಬ್ರಹ್ಮಾವರ: ಗೋಡೆ ಕುಸಿದು ಮಹಿಳೆ ಮೃತ್ಯು

ಉಡುಪಿ: ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಮಣ್ಣಿನ ಗೋಡೆ ಕುಸಿದ ಮೈಮೇಲೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಗುರುವಾರ ಉಡುಪಿ ಜಿಲ್ಲೆಯ ಬ್ರಹ್ಮಾವರದ ಚೇರ್ಕಾಡಿ ಗ್ರಾಮದ ಬೆನಗಲ್ ಎಂಬಲ್ಲಿ ಸಂಭವಿಸಿದೆ.
ಕೊರಗ ಮರಕಾಲ ಎಂಬವರ ಪತ್ನಿ ಗಂಗಾ ಮರಕಾಲ್ತಿ(52) ಮೃತಪಟ್ಟವರು.
ನಿರಂತರ ಮಳೆಯಿಂದಾಗಿ‌ ಕೊಟ್ಟಿಗೆಯ ಮಣ್ಣಿನ ಗೋಡೆ ಹಠಾತ್ ಕುಸಿದು ಬಿದಿದ್ದೆ. ಈ ವೇಳೆ ದನದ ಹಾಲು ಕರೆಯುತ್ತಿದ್ದ ಗಂಗಾ ಅವರು ಗೋಡೆಯ ಅವಶೇಷಗಳಡಿ ಸಿಲುಕಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪೇತ್ರಿಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಘಟನಾ ಸ್ಥಳಕ್ಕೆ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ಗ್ರಾಪಂ ಅಧ್ಯಕ್ಷರು ಭೇಟಿ ಪರಿಶೀಲನೆ ನಡೆಸಿದ್ದಾರೆ.