ಅ.3 ರಂದು ಕಟ್ಟಡ ಸಾಮಾಗ್ರಿ ಸಾಗಾಟ ವಾಹನಗಳ ಮುಷ್ಕರ

ಉಡುಪಿ: ಕಟ್ಟಡ ಸಾಮಾಗ್ರಿ ಸಾಗಾಟ ವಾಹನಗಳು ಅ.3 ರಂದು ಮುಷ್ಕರ ಘೋಷಿಸಲು ನಿರ್ಧರಿಸಿವೆ. ಪರವಾನಗಿ ಸಮಸ್ಯೆಯಲ್ಲಿ ಸಿಲುಕಿರುವ ಲಾರಿ ಹಾಗೂ ಟೆಂಪೋ ಮಾಲೀಕರ ಸಂಘಟನೆಗಳ ಒಕ್ಕೂಟವು ಹಲವು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದೆ.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹಾಗೂ ಜಿಲ್ಲಾ ಎಸ್ಪಿ ಡಾ. ಅರುಣ್ ಕೆ ಸಮಕ್ಷಮದಲ್ಲಿ ಸಭೆ ನಡೆಸಿದ್ದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಒಕ್ಕೂಟದ 12 ವಲಯಾಧ್ಯಕ್ಷರು ಮತ್ತು ಪ್ರಮುಖರು ಶುಕ್ರವಾರ ಸಭೆ ನಡೆಸಿ ಅ.3 ರಂದು ಬಂದ್ ಗೆ ಕರೆ ನೀಡಿದ್ದಾರೆ.

ಬಂದ್ ಸಂಬಂಧ ಶನಿವಾರ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ.