ಉದ್ಯಮಿ ನಡ್ಡೋಡಿ ಮಹಾಬಲ ಶೆಟ್ಟಿ ನಿಧನ

ಕಾರ್ಕಳ: ಉದ್ಯಮಿ, ನಲ್ಲೂರು ನಡ್ಡೋಡಿ ಮಹಾಬಲ ಶೆಟ್ಟಿ (89) ಅಸೌಖ್ಯದಿಂದ ಸ್ವಗೃಹದಲ್ಲಿ ಮೇ 16 ರಂದು ನಿಧನರಾದರು. ಇವರು ನಲ್ಲೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ನಲ್ಲೂರು ಶ್ರೀ ಮಹಾಗಣಪತಿ ಭಜನಾ ಮಂಡಳಿ ಸ್ಥಾಪಕ ಸದಸ್ಯರಾಗಿದ್ದರು. ನಲ್ಲೂರಿನಲ್ಲಿ ಸರಕಾರಿ ಪ್ರೌಢ ಶಾಲೆ ಆರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇವರು ಊರಿನ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು.

ಅವರು ಪತ್ನಿ, ಶ್ರೀಮಹಾಲಕ್ಷ್ಮೀ ದೇವಸ್ಥಾನ ಶ್ರೀಧಾಮ ಮಾಣಿಲ ಇಲ್ಲಿನ ಟ್ರಸ್ಟಿ ಭಾಸ್ಕರ ಶೆಟ್ಟಿ ಸಹಿತ ಆರು ಜನ ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.