ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸಿ.ಎಂ.ಯಡಿಯೂರೂಪ್ಪ ಅವರಿಗೆ ಸಮ್ಮಾನ

ಧರ್ಮಸ್ಥಳ: ಪತ್ರಕರ್ತರಿಗೆ ಅರೋಗ್ಯ ಕಾರ್ಡ್ ಸೌಲಭ್ಯ ಹಾಗೂ ಪತ್ರಕರ್ತ ನಾಗೇಶ್  ಪಡು ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ಮುಖ್ಯಮಂತ್ರಿ  ಬಿ.ಯಸ್ ಯಡಿಯೂರಪ್ಪ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ  ಸಂಘದ ಅಧ್ಯಕ್ಷ ಶ್ರೀನಿವಾಸ್  ನಾಯಕ್ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸನ್ಮಾನಿಸಿದರು.

ಇದೇ ವೇಳೆ ಪತ್ರಕರ್ತರ ಸಂಘದ ವತಿಯಿಂದ ಡಿಸೆಂಬರ್ 22 ರಂದು ಸುಳ್ಯ ದಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಮಂಗಳೂರು ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಗೆ ಶೀಘ್ರವೇ ನೂತನ ಬಸ್ ಕೊಡಿಸುವಂತೆಯೂ ಮುಖ್ಯಮಂತ್ರಿ ಅವರಿಗೆ ವಿನಂತಿಸಲಾಯಿತು .

ಈ ವೇಳೆ  ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರ ಪುಷ್ಪರಾಜ್, ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು .