ಆಗಸ್ಟ್ 17 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಸಮಾಲೋಚನಾ ಕಾರ್ಯಾಗಾರ

ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕಚೇರಿ ಉಡುಪಿ ಹಾಗೂ ಹೆಚ್.ಸಿ.ಎಲ್ ಟೆಕ್ನಾಲಜೀಸ್ ಇವರ ಸಹಯೋಗದೊಂದಿಗೆ ಹೆಚ್.ಸಿ.ಎಲ್ ಟೆಕ್ನಾಲಜೀಸ್ ಟೆಕ್ ಬಿ – ವೃತ್ತಿ ಸಮಾಲೋಚನಾ ಕಾರ್ಯಾಗಾರವು ಆಗಸ್ಟ್ 17 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ರ ವರೆಗೆ ನಗರದ ಮಹಾತ್ಮಾ ಗಾಂಧಿ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಲಿದೆ.

ದ್ವಿತೀಯ ಪಿ.ಯು.ಸಿ ಯಲ್ಲಿ ಗಣಿತ ಹಾಗೂ ವ್ಯವಹಾರ ಅಧ್ಯಯನ ವಿಷಯದಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ವೆಬ್‌ಸೈಟ್ https://bit.ly/hcltechbeeevent ನಲ್ಲಿ ನೋಂದಾಯಿಸಿಕೊಂಡು, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಪಿ.ಯು.ಸಿ ಪ್ರಥಮ ಹಾಗೂ ದ್ವಿತೀಯ ವರ್ಷದ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಯೊಂದಿಗೆ ಕಾರ್ಯಾಗಾರದಲ್ಲಿ ಭಾಗವಹಿಸಬಹುದಾಗಿದೆ. ಹಾಜರಾದ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆಯ ಮೂಲಕ, ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಉಡುಪಿ ಮೊ.ನಂ: 9845454471, 9739691294 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.