ಡಾ. ವಿ. ಎಸ್. ಆಚಾರ್ಯ ಮತ್ತು ಉಡುಪಿ ನಗರ ಬಸ್ ನಿಲ್ದಾಣದಿಂದ ಸಾರಿಗೆ ಬಸ್ ಗಳ ವೇಳಾಪಟ್ಟಿ

ಉಡುಪಿ: ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆ.ಎಸ್.ಅರ್.ಟಿ.ಸಿ ನಿಗಮದ ಡಾ. ವಿ. ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಹಾಗೂ ಉಡುಪಿ ನಗರ ಬಸ್ ನಿಲ್ದಾಣದಿಂದ ಸಾರ್ವಜನಿಕ ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾ ವ್ಯಾಪ್ತಿಯ ಸ್ಥಳಗಳಾದ ನೆಲ್ಲಿಕಟ್ಟೆ, ಹೆಬ್ರಿ, ಹೊನ್ನಾಳ, ಮಂಚಕಲ್, ಕಾರ್ಕಳ, ಕೊಕ್ಕರ್ಣೆ, ಹೆರ್ಗ, ಶಿರ್ವ-ಮಂಚಕಲ್, ಹಂಪನಕಟ್ಟೆ, ಕೆಳಸಂಕ, ಮಲ್ಪೆಬೀಚ್, ಪಡುಕೆರೆ, ಇತ್ಯಾದಿ ಸ್ಥಳೀಯ ವಲಯಗಳಲ್ಲಿ ಕಾರ್ಯಾಚರಣೆಯಾಗುತ್ತಿರುವ ಸಾರಿಗೆಗಳ ವೇಳಾ ಪಟ್ಟಿ ಹೀಗಿದೆ. ಉಡುಪಿಯಿಂದ ಕಾರ್ಕಳಕ್ಕೆ 6:55, 10:02, 13:47, 16:51, 8:24, 11:32, 14:45, […]
ಜು.1 ರಿಂದ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ

ಉಡುಪಿ: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲೇಟ್, ಪ್ಲಾಸ್ಟಿಕ್ ಧ್ವಜ, ಪ್ಲಾಸ್ಟಿಕ್ ಕಪ್, ಪ್ಲಾಸ್ಟಿಕ್ ಸ್ಪೂನ್, ಅಂಟಿಕೊಳ್ಳುವ ಫಿಲ್ಮ್, ಎಲ್ಲಾ ದಪ್ಪದ ಡೈನಿಂಗ್ ಟೇಬಲ್ ನಲ್ಲಿ ಹರಡುವ ಬಳಸುವ ಪ್ಲಾಸ್ಟಿಕ್ ಹಾಳೆ, ಸ್ಟ್ರಾ, ಥರ್ಮಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳ ಜೊತೆಗೆ ಹೆಚ್ಚುವರಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಸ್ಟಿಕ್ಗಳೊಂದಿಗೆ ಇಯರ್ ಬಡ್, ಬಲೂನ್ಗೆ ಬಳಸುವ […]
ನಾಡಿನ ಕಲಾಪ್ರಕಾರಗಳ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಸಹಾಯಧನ ನೀಡಲು ಸೇವಾಸಿಂಧು Sevasindhu.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ www.kannadasiri.karnataka.gov.in ಮೊ.ನಂ: […]