ತಿರಸ್ಕೃತ ಬೆಳೆ ವಿಮೆ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳ ಒಳಗಾಗಿ ಪೂರಕ ದಾಖಲೆ ಸಲ್ಲಿಸಿ
![](https://udupixpress.com/wp-content/uploads/2021/09/981723-farmer-reuters-1024x576.jpg)
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 2021-22 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿಯಾದ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆಯಾಗದ ಪ್ರಸ್ತಾವನೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳು ಪರಿಶೀಲಿಸಿ, ಅಂತಿಮವಾಗಿ ವಿಮಾ ಸಂಸ್ಥೆಯವರು ವಿಮೆ ನೋಂದಾಯಿಸಿದ ಬೆಳೆಗೂ ಹಾಗೂ ಬೆಳೆ ಸಮೀಕ್ಷಾ ವರದಿಗೂ ತಾಳೆಬಾರದಿರುವ ಹಿನ್ನೆಲೆ ತಿರಸ್ಕರಿಸಿರುತ್ತಾರೆ. ಈ ತಿರಸ್ಕೃತ ಪ್ರಕರಣಗಳ ಪಟ್ಟಿಯನ್ನು ಉಡುಪಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಬ್ರಹ್ಮಾವರ ರೈತ ಸಂಪರ್ಕ ಕೇಂದ್ರ ಹಾಗೂ ಸಂಬಂಧಪಟ್ಟ […]
ಏ. 3 ರಿಂದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸಿ.ಇ.ಟಿ, ನೀಟ್ ಹಾಗೂ ಜೆ.ಇ.ಇ ಕ್ರಾಶ್ ಕೋರ್ಸ್ ತರಬೇತಿ
![](https://udupixpress.com/wp-content/uploads/2023/03/JEE-Neet.png)
ಉಡುಪಿ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿರುವ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸಿ.ಇ.ಟಿ, ನೀಟ್ ಹಾಗೂ ಜೆ.ಇ.ಇ ಕ್ರಾಶ್ ಕೋರ್ಸ್ ತರಬೇತಿಯು ಏಪ್ರಿಲ್ 3 ರಿಂದ ಈ ಕೆಳಕಂಡ ಕಾಲೇಜುಗಳಲ್ಲಿ ನಡೆಯಲಿದೆ. ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ […]
ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ
![](https://udupixpress.com/wp-content/uploads/2022/06/UGC-net.png)
ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕ ಸಹಾಯಕರ (ಜೆ.ಆರ್.ಎಫ್), ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಹಾಗೂ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 8 ರ ಒಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ […]
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಕರಕುಶಲಕರ್ಮಿಗಳಿಗೆ ಸಾಲ-ಸಹಾಯಧನ ಲಭ್ಯ
![](https://udupixpress.com/wp-content/uploads/2023/01/artisans.png)
ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ವಿವಿಧ ವರ್ಗದ ಕುಶಲಕರ್ಮಿಗಳಿಗೆ ತಲಾ 50,000 ರೂ. ವರೆಗೆ ಸಾಲ-ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ವಾಣಿಜ್ಯ ಬ್ಯಾಂಕ್, ಸಹಕಾರ ಬ್ಯಾಂಕ್ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಪತ್ತಿನ ಸಹಕಾರ ಸಂಘಗಳನ್ನು ಹೊರತುಪಡಿಸಿ) ಗಳಿಂದ ಮಂಜೂರಾದ ಸಾಲದ ಮೇಲೆ ಇಲಾಖೆ ವತಿಯಿಂದ ಶೇ. 30 ರಷ್ಟು ಗರಿಷ್ಠ 15,000 ರೂ. ವರೆಗೆ ಸಹಾಯಧನ ನೀಡಲಾಗುವುದು. ಜಿಲ್ಲೆಯ 18 ವರ್ಷ ಮೇಲ್ಪಟ್ಟ ಕಮ್ಮಾರಿಕೆ, ಮರಗೆಲಸ, ಬುಟ್ಟಿ ಹೆಣೆಯುವವರು, ಗೋಲ್ಡ್ ಸ್ಮಿತ್ (ಆಭರಣ ತಯಾರಿಕೆ), […]
ಡಿ.ದೇವರಾಜ ಅರಸು ನಿಗಮದ ವತಿಯಿಂದ ಹೊಲಿಗೆ ಯಂತ್ರ ಸೌಲಭ್ಯ
![](https://udupixpress.com/wp-content/uploads/2022/08/devaraj-aras.png)
ಉಡುಪಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.dbcdc.karnataka.gov.in, ದೂ.ಸಂಖ್ಯೆ: 080-22374832, 8050770004, 7090400100 ಹಾಗೂ 0820-2574882 ಅನ್ನು ಸಂಪರ್ಕಿಸಬಹುದಾಗಿದೆ […]