ಸಾಧಕ ವಿದ್ಯಾರ್ಥಿ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಪಿ.ಯು.ಸಿ ಯಿಂದ ವೃತ್ತಿಪರ ಕೋರ್ಸ್ಗಳು ಸೇರಿದಂತೆ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಕೇಂದ್ರ, ರಾಜ್ಯ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳ ಕ್ರೀಡಾಪಟುಗಳು ಹಾಗೂ ವಿಕಲಚೇತನ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ […]

ಪ್ರಗತಿಪರ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆ ದಿನ

ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಇವರ ವತಿಯಿಂದ ಶಿವಮೊಗ್ಗದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಪ್ರಗತಿಪರ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿಗೆ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಪ್ರಗತಿಯತ್ತ ಸಾಗುತ್ತಿರುವ ಜಿಲ್ಲೆಯ ಅರ್ಹ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಅಥವಾ ಜಂಟಿ ಕೃಷಿ ನಿರ್ದೇಶಕರ […]

ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆಯಲ್ಲಿ ಆಸಕ್ತಿ ಮೂಡಿಸಲು ವಿಜ್ಞಾನ ಮತ್ತು ಪದವಿ ವಿದ್ಯಾರ್ಥಿಗಳಿಗೆ ಡಾ.ಎಸ್.ಕೆ ಶಿವಕುಮಾರ್ ಪ್ರಶಸ್ತಿ, ವಿಜ್ಞಾನ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪ್ರೊ.ಯು.ಆರ್ ರಾವ್ ಪ್ರಶಸ್ತಿ ಹಾಗೂ ಜನಸಾಮಾನ್ಯರ ಆವಿಷ್ಕಾರಗಳಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ […]

ನೇಕಾರರ ಮಕ್ಕಳ ಉನ್ನತ ಶಿಕ್ಷಣಕ್ಕೆ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ವಿದ್ಯಾರ್ಥಿವೇತನ

ಉಡುಪಿ: ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ನೇಕಾರರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ರಾಜ್ಯದಲ್ಲಿ ನೋಂದಣಿಯಾದ ಶಿಕ್ಷಣ ಸಂಸ್ಥೆಗಳಲ್ಲಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಎ, ಬಿ.ಎಸ್ಸಿ, ಬಿ.ಕಾಂ, ಎಲ್.ಎಲ್.ಬಿ, ಪ್ಯಾರಾ ಮೆಡಿಕಲ್, ಬಿ.ಫಾರ್ಮಾ, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ ಹಾಗೂ ಎಂ.ಬಿ.ಬಿ.ಎಸ್, ಬಿ.ಇ, ಬಿ.ಟೆಕ್ ಮತ್ತು ಇತರೆ ಸ್ನಾತಕೋತ್ತರ ಕೋರ್ಸ್ಗಳನ್ನು ವ್ಯಾಸಾಂಗ ಮಾಡುತ್ತಿರುವ ನೇಕಾರರ ಮಕ್ಕಳಿಂದ ವಿದ್ಯಾರ್ಥಿವೇತನಕ್ಕೆ ಸೇವಾಸಿಂಧು ತಂತ್ರಾಂಶದ ಮೂಲಕ ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ವಿವರಗಳಿಗೆ […]

ಅ. 6 ರಿಂದ ಪ್ರಾಥಮಿಕ ಶಾಲಾ ಶಿಕ್ಷಕರ ನೇರ ನೇಮಕಾತಿಗಾಗಿ ದಾಖಲೆಗಳ ಪರಿಶೀಲನೆ

ಉಡುಪಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8 ನೇ ತರಗತಿ) ನೇರ ನೇಮಕಾತಿಗೆ ಸಂಬಂಧಿಸಿದಂತೆ 1:2 ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು schooleducation.kar.nic.in ನಲ್ಲಿ ಪ್ರಕಟಿಸಲಾಗಿರುತ್ತದೆ. ಸದರಿ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಕಾರ್ಯವು, ಮಣಿಪಾಲದ ರಜತಾದ್ರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಪಟ್ಟಿಯಲ್ಲಿನ ಸಮಾಜ ವಿಷಯದ 1 ರಿಂದ 40 ರ ವರೆಗಿನ ಕ್ರಮ ಸಂಖ್ಯೆಯ ಅಭ್ಯರ್ಥಿಗಳಿಗೆ ಅಕ್ಟೋಬರ್ 6 ರಂದು ಬೆಳಗ್ಗೆ ಹಾಗೂ 41 ರಿಂದ 100 […]