ಅಫ್ಘಾನಿಸ್ತಾನ : ಭಾರತದಲ್ಲಿದ್ದ ತನ್ನ ರಾಯಭಾರ ಕಚೇರಿಯ ಕಾರ್ಯಾಚರಣೆ ಸ್ಥಗಿತ

ನವದೆಹಲಿ : ಭಾರತದಲ್ಲಿನ ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ಅಕ್ಟೋಬರ್ 1 ರಿಂದ ತನ್ನ ಕಾರ್ಯಾಚರಣೆಯನ್ನು ಮುಚ್ಚುವುದಾಗಿ ಘೋಷಿಸಿದೆ. ರಾಯಭಾರ ಕಚೇರಿ ಹೊರಡಿಸಿದ ಹೇಳಿಕೆಯಲ್ಲಿ ಈ ಮಾಹಿತಿ ನೀಡಲಾಗಿದೆ.ಭಾರತದಲ್ಲಿನ ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ಇಂದಿನಿಂದ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಿದೆ. ಸುಗಮ ಕಾರ್ಯನಿರ್ವಹಣೆಗೆ ಅಗತ್ಯವಾದ ಬೆಂಬಲ ಮತ್ತು ಸಂಪನ್ಮೂಲಗಳ ಕೊರತೆ ಸೇರಿದಂತೆ ಇತರೆ ಸಮಸ್ಯೆಗಳಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಬೇಕಾಯಿತು ಎಂದು ತಿಳಿಸಿದೆ. ಈ ಕುರಿತು ಅಧಿಕೃತ ಹೇಳಿಕೆಯಲ್ಲಿ ವಿಷಾದ ವ್ಯಕ್ತಪಡಿಸಿ, “ನವದೆಹಲಿಯಲ್ಲಿರುವ ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ತನ್ನ ಕಾರ್ಯಾಚರಣೆಯನ್ನು […]

ಪ್ರಕೃತಿಗೆ ಪೂರಕವಾದ ಪರಿಸರ ಸ್ನೇಹಿ ಪ್ರವಾಸ ಕೈಗೊಂಡು ಮುಂದಿನ ಪೀಳಿಗೆಗೆ ಸುಂದರ- ಸ್ವಸ್ಥ ಜಗತ್ತಿನ ಕೊಡುಗೆ ನೀಡಿ

ಲೇಖನ :ಶರೋನ್ ಶೆಟ್ಟಿ ಚಿತ್ರ : ಗುರು ಕಾಪು ವಿಶ್ವ ಪ್ರವಾಸೋದ್ಯಮ ಸಂಸ್ಥೆ (UNWTO) 1979 ರಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಪ್ರಾರಂಭಿಸಿತು. ಆದರೆ ಇದನ್ನು ಅಧಿಕೃತವಾಗಿ 1980 ರಲ್ಲಿ ಪ್ರಾರಂಭಿಸಲಾಯಿತು. ವಿಶ್ವ ಪ್ರವಾಸೋದ್ಯಮ ದಿನವನ್ನು ಪ್ರತಿ ವರ್ಷ ಸೆಪ್ಟೆಂಬರ್ 27 ರಂದು ಆಚರಿಸಲಾಗುತ್ತದೆ. 1997 ರ ಬಳಿಕ UNWTO ಪ್ರತಿ ವರ್ಷ ವಿವಿಧ ಆತಿಥೇಯ ದೇಶಗಳಲ್ಲಿ ಈ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ.    ಪ್ರಪಂಚದ ವಿವಿಧ ಭಾಗಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಈ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. […]

ವೈಲ್ಡ್​​ ಪೋಲಿಯೋ ವೈರಸ್ ಪಾಕಿಸ್ತಾನದಲ್ಲಿ ಪತ್ತೆ​; ದೃಢಪಡಿಸಿದ ಸಚಿವಾಲಯ

ಇಸ್ತಾಂಬುಲ್​: ಮಕ್ಕಳ ಭವಿಷ್ಯಕ್ಕೆ ಮಾರಕವಾಗುವ ಪೋಲಿಯೋ ವೈರಸ್​ ನಿರ್ಮೂಲನೆಗೆ ವಿಶ್ವಸಂಸ್ಥೆ ಪಣತೊಟ್ಟಿದ್ದು, ಇದಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದೆ. ಈ ನಡುವೆ ಪಾಕಿಸ್ತಾನದ ಕೊಳಚೆಯಲ್ಲಿ ವೈಲ್ಡ್​ ಪೋಲಿಯೋ ವೈರಸ್​ ಟೈಪ್​ 1 ಮಾದರಿ ಪತ್ತೆಯಾಗಿದೆ. ಪಾಕಿಸ್ತಾನದ ಎರಡು ವಿಭಿನ್ನ ಭಾಗದಲ್ಲಿ ಕೊಳಚೆ ನೀರಿನಲ್ಲಿ ಇದರ ಸುಳಿವು ಕಂಡುಬಂದಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.ಐದು ವರ್ಷದೊಳಗಿನ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಈ ಸೋಂಕು ಅವರಲ್ಲಿ ನರ ಸಮಸ್ಯೆ ಮತ್ತು ಶಾಶ್ವತ ಅಂಗವೈಕಲ್ಯತೆಗೆ ದೂಡುತ್ತದೆ. ಅಕ್ಟೋಬರ್​ನಿಂದ ಲಸಿಕೆ ಅಭಿಯಾನ: ಪಾಕಿಸ್ತಾನದಲ್ಲಿ ಐದು ವರ್ಷದೊಳಗಿನ […]

ಮೊರಾಕ್ಕೊದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪನ, ಲಕ್ಷಾಂತರ ಮಂದಿ ನಿರಾಶ್ರಿತ, ಸಾವಿರ ಮಂದಿ ಸಾವು..

ರಬತ್ (ಮೊರಾಕ್ಕೊ) : ಶುಕ್ರವಾರ ತಡರಾತ್ರಿ ಮೊರಾಕ್ಕೊದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಈವರೆಗೆ ಒಂದು ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ವಿದೇಶಾಂಗ ಸಚಿವಾಲಯ ತಿಳಿಸಿದೆ.ಮೊರಾಕ್ಕೊದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೂಕಂಪದಲ್ಲಿ ಈವರೆಗೆ ಕನಿಷ್ಠ 1000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವರದಿಯಾಗಿದೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.ಬೃಹತ್​ ಕಟ್ಟಡಗಳು ಸೇರಿದಂತೆ ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಹಾನಿಯಾಗಿದೆ. ಭೂಕಂಪನದ ವೇಳೆ ಸೆರೆ ಹಿಡಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ […]

ಲ್ಯಾಂಡರ್​ ಮತ್ತು ಎಕ್ಸ್​ ರೇ ಮಿಷನ್ ನೌಕೆ ಸೋಮವಾರ ಉಡಾವಣೆ ಸಾಧ್ಯತೆ: ಚಂದ್ರನತ್ತ ಜಪಾನ್​

ಟೋಕಿಯೊ: ಭಾರತದ ಚಂದ್ರಯಾನ-3 ಯಶಸ್ಸಿನ ನಂತರ ಈಗ ಜಪಾನ್​ ಚಂದ್ರನತ್ತ ನೌಕೆ ಕಳುಹಿಸಲು ಸಿದ್ಧತೆ ನಡೆಸಿದೆ. ಜಪಾನಿನ ಏರೋಸ್ಪೇಸ್ ಎಕ್ಸ್​ಪ್ಲೊರೇಶನ್ ಏಜೆನ್ಸಿಯ (ಜಾಕ್ಸಾ) ಎಸ್‌ಎಲ್‌ಐಎಂ ಅಥವಾ ಸ್ಲಿಮ್ (Smart Lander for Investigating Moon) ಸಣ್ಣ ಪ್ರಮಾಣದ ಹಗುರವಾದ ಸಂಶೋಧನಾ ಕಾರ್ಯಾಚರಣೆ ವ್ಯವಸ್ಥೆಯನ್ನು ಯಶಸ್ವಿಗೊಳಿಸುವ ಮತ್ತು ಭವಿಷ್ಯದ ಚಂದ್ರ ಶೋಧನೆಗಳಿಗೆ ಅಗತ್ಯವಾದ ಪಿನ್ ಪಾಯಿಂಟ್​ ಲ್ಯಾಂಡಿಂಗ್ ತಂತ್ರಜ್ಞಾನವನ್ನು ಸಾಧಿಸುವ ಗುರಿಯನ್ನು ಹೊಂದಿದೆ.ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೋಮವಾರ ಚಂದ್ರನ ಮೇಲ್ಮೈಗೆ ಲ್ಯಾಂಡರ್ ಮತ್ತು ಎಕ್ಸ್-ರೇ ಮಿಷನ್​ ನೌಕೆಯನ್ನು ಉಡಾವಣೆ […]