232 ಪ್ಯಾಲೆಸ್ಟೀನ್ ಜನ ಸಾವು, ಹಮಾಸ್ ನಾಯಕನ ಮನೆ ಹೊಕ್ಕ ಫೈಟರ್ಜೆಟ್ : ಇಸ್ರೇಲ್ ಪ್ರತಿದಾಳಿ

ರಮಾಲ್ಲಾಹ (ಪ್ಯಾಲೆಸ್ಟೀನ್): ಪ್ಯಾಲೆಸ್ಟೀನ್ ಉಗ್ರಗಾಮಿ ಪಡೆಯ ಹಮಾಸ್ ದಾಳಿಗೆ ಇಸ್ರೇಲ್ ಪ್ರತೀಕಾರ ತೀರಿಸಿಕೊಳ್ಳುತ್ತಿದೆ. ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಡೆಸಿದ ಪ್ರತಿದಾಳಿಯಲ್ಲಿ ಸುಮಾರು 232 ಪ್ಯಾಲೆಸ್ಟೀನಿಯನ್ಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಲ್ಲದೇ, ಹಮಾಸ್ ನಾಯಕರನ್ನೂ ಇಸ್ರೇಲ್ ರಕ್ಷಣಾ ಪಡೆ ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದೆ.ಹಮಾಸ್ ಉಗ್ರಗಾಮಿಗಳ ದಾಳಿಗೆ ಇಸ್ರೇಲ್ ಪ್ರತಿದಾಳಿ ನಡೆಸುತ್ತಿದ್ದು, ಗಾಜಾ ಪಟ್ಟಿಯಲ್ಲಿ ಸುಮಾರು 232 ಪ್ಯಾಲೆಸ್ಟೀನಿಯನ್ಗಳು ಸಾವನ್ನಪ್ಪಿದ್ದಾರೆ ಅಲ್ಲದೇ, ಅನೇಕ ಇಸ್ರೇಲ್ ನಾಗರಿಕರು ಹಾಗೂ ಸೇನಾ ಸಿಬ್ಬಂದಿಯನ್ನು ಹಮಾಸ್ ಭಯೋತ್ಪಾದಕರು ಗಾಜಾಕ್ಕೆ ಅಪಹರಿಸಿದ್ದಾರೆ ಎಂದು ವರದಿಯಾಗಿದೆ. […]
ನರ್ಗಿಸ್ ಮೊಹಮ್ಮದಿ ಇರಾನ್ ಹೋರಾಟಗಾರ್ತಿಗೆ 2023ರ ನೊಬೆಲ್ ಶಾಂತಿ ಪ್ರಶಸ್ತಿ

ಒಸ್ಲೋ (ನಾರ್ವೆ): ಇರಾನ್ನಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ದಬ್ಬಾಳಿಕೆಯ ವಿರುದ್ಧದ ಹೋರಾಟ ಮತ್ತು ಸಮಾನ ಮಾನವ ಹಕ್ಕುಗಳು, ಸ್ವಾತಂತ್ರ್ಯವನ್ನು ಉತ್ತೇಜಿಸುವ ಅವಿರತ ಹೋರಾಟಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ. ನರ್ಗಿಸ್ ಮೊಹಮ್ಮದಿ ಸದ್ಯ ಇರಾನ್ನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ನಾರ್ವೇಜಿಯನ್ ನೊಬೆಲ್ ಸಮಿತಿಯು ಶುಕ್ರವಾರ 2023 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಇರಾನ್ ಹೋರಾಟಗಾರ್ತಿ ನರ್ಗಿಸ್ ಮೊಹಮ್ಮದಿ ಅವರಿಗೆ ಪ್ರಕಟಿಸಿತು. ಇರಾನ್ ದೇಶದ ಹೋರಾಟಗಾರ್ತಿ ನರ್ಗಿಸ್ ಮೊಹಮ್ಮದಿ ಅವರಿಗೆ 2023ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗಿದೆ. 1901ರಿಂದ ನೊಬೆಲ್ […]
ಆತ್ಮಾಹುತಿ ದಾಳಿಗೆ ಪ್ರತೀಕಾರ: 26 ಕುರ್ದಿಶ್ ಉಗ್ರರನ್ನು ಹತ್ಯೆಗೈದ ಟರ್ಕಿ

ಅಂಕಾರಾ : ಸಿರಿಯಾದ ಕುರ್ದಿಶ್ ಪೀಪಲ್ಸ್ ಡಿಫೆನ್ಸ್ ಯೂನಿಟ್ (ವೈಪಿಜಿ) ನಡೆಸಿದ ದಾಳಿಗೆ ಪ್ರತಿಯಾಗಿ ತನ್ನ ಪಡೆಗಳು 26 ಕುರ್ದಿಶ್ ಉಗ್ರರನ್ನು ಹತ್ಯೆಗೈದಿವೆ ಎಂದು ಟರ್ಕಿಯ ರಕ್ಷಣಾ ಸಚಿವಾಲಯ ಶುಕ್ರವಾರ ತಿಳಿಸಿದೆ. ಉತ್ತರ ಸಿರಿಯಾದಲ್ಲಿನ ಟರ್ಕಿಶ್ ಮಿಲಿಟರಿಯ ಯೂಫ್ರೆಟಿಸ್ ಶೀಲ್ಡ್ ಕಾರ್ಯಾಚರಣೆ ವಲಯದ ದಾಬಿಕ್ ಬೇಸ್ ಪ್ರದೇಶದ ಮೇಲೆ ವೈಪಿಜಿ ಗುರುವಾರ ತಡರಾತ್ರಿ ದಾಳಿ ನಡೆಸಿದ ನಂತರ ಅಂಕಾರಾ ಪ್ರತೀಕಾರ ಕೈಗೊಂಡಿದೆ ಎಂದು ಸಚಿವಾಲಯದ ಹೇಳಿಕೆಯನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಟರ್ಕಿ ಮಿಲಿಟರಿಯು 26 […]
ಅಫ್ಘಾನಿಸ್ತಾನ : ಭಾರತದಲ್ಲಿದ್ದ ತನ್ನ ರಾಯಭಾರ ಕಚೇರಿಯ ಕಾರ್ಯಾಚರಣೆ ಸ್ಥಗಿತ

ನವದೆಹಲಿ : ಭಾರತದಲ್ಲಿನ ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ಅಕ್ಟೋಬರ್ 1 ರಿಂದ ತನ್ನ ಕಾರ್ಯಾಚರಣೆಯನ್ನು ಮುಚ್ಚುವುದಾಗಿ ಘೋಷಿಸಿದೆ. ರಾಯಭಾರ ಕಚೇರಿ ಹೊರಡಿಸಿದ ಹೇಳಿಕೆಯಲ್ಲಿ ಈ ಮಾಹಿತಿ ನೀಡಲಾಗಿದೆ.ಭಾರತದಲ್ಲಿನ ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ಇಂದಿನಿಂದ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಿದೆ. ಸುಗಮ ಕಾರ್ಯನಿರ್ವಹಣೆಗೆ ಅಗತ್ಯವಾದ ಬೆಂಬಲ ಮತ್ತು ಸಂಪನ್ಮೂಲಗಳ ಕೊರತೆ ಸೇರಿದಂತೆ ಇತರೆ ಸಮಸ್ಯೆಗಳಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಬೇಕಾಯಿತು ಎಂದು ತಿಳಿಸಿದೆ. ಈ ಕುರಿತು ಅಧಿಕೃತ ಹೇಳಿಕೆಯಲ್ಲಿ ವಿಷಾದ ವ್ಯಕ್ತಪಡಿಸಿ, “ನವದೆಹಲಿಯಲ್ಲಿರುವ ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ತನ್ನ ಕಾರ್ಯಾಚರಣೆಯನ್ನು […]
ಪ್ರಕೃತಿಗೆ ಪೂರಕವಾದ ಪರಿಸರ ಸ್ನೇಹಿ ಪ್ರವಾಸ ಕೈಗೊಂಡು ಮುಂದಿನ ಪೀಳಿಗೆಗೆ ಸುಂದರ- ಸ್ವಸ್ಥ ಜಗತ್ತಿನ ಕೊಡುಗೆ ನೀಡಿ

ಲೇಖನ :ಶರೋನ್ ಶೆಟ್ಟಿ ಚಿತ್ರ : ಗುರು ಕಾಪು ವಿಶ್ವ ಪ್ರವಾಸೋದ್ಯಮ ಸಂಸ್ಥೆ (UNWTO) 1979 ರಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಪ್ರಾರಂಭಿಸಿತು. ಆದರೆ ಇದನ್ನು ಅಧಿಕೃತವಾಗಿ 1980 ರಲ್ಲಿ ಪ್ರಾರಂಭಿಸಲಾಯಿತು. ವಿಶ್ವ ಪ್ರವಾಸೋದ್ಯಮ ದಿನವನ್ನು ಪ್ರತಿ ವರ್ಷ ಸೆಪ್ಟೆಂಬರ್ 27 ರಂದು ಆಚರಿಸಲಾಗುತ್ತದೆ. 1997 ರ ಬಳಿಕ UNWTO ಪ್ರತಿ ವರ್ಷ ವಿವಿಧ ಆತಿಥೇಯ ದೇಶಗಳಲ್ಲಿ ಈ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ. ಪ್ರಪಂಚದ ವಿವಿಧ ಭಾಗಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಈ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. […]