ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಾತಿ: ಬನ್ನಂಜೆ ಕಚೇರಿ ಭಾನುವಾರವೂ ಕಾರ್ಯಾಚರಣೆ

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಉಡುಪಿಯ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಪ್ರವೇಶಾತಿಗಳು ನಡೆಯುತ್ತಿರುವ ಹಿನ್ನೆಲೆ, 2 ನೇ ಮತ್ತು 4ನೇ ಶನಿವಾರ ಹಾಗೂ ಭಾನುವಾರದಂದು ಬನ್ನಂಜೆಯಲ್ಲಿರುವ ಪ್ರಾದೇಶಿಕ ಕೇಂದ್ರ ಕಚೇರಿ ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ರಂಗಾಯಣ ನಾಟಕಗಳಿಗೆ ಅನುಭವಿ ಕಲಾವಿದರಿಂದ ಅರ್ಜಿ ಆಹ್ವಾನ

ಉಡುಪಿ: ಮೈಸೂರಿನ ರಂಗಾಯಣ ಸಂಸ್ಥೆಯ ವತಿಯಿಂದ ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ನಾಟಕ ಶಾಲೆಯ ಪದವಿ ಪಡೆದಿರುವ, ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಲ್ಲಿ ರಂಗಶಿಕ್ಷಣ ಪದವಿ ಅಥವಾ ಡಿಪ್ಲೋಮಾ ಪಡೆದಿರುವ 22 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನ. ಜುಲೈ 20 ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ರಂಗಾಯಣದಲ್ಲಿ ಸಂದರ್ಶನ ನಡೆಯಲಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ […]
ಪೈಪ್ ಲೈನ್ ಕಾಮಗಾರಿಗಾಗಿ ಮರಗಳ ತೆರವು: ಜುಲೈ 18 ರಂದು ಸಾರ್ವಜನಿಕ ಅಹವಾಲು ಸಭೆ

ಉಡುಪಿ: ಉಡುಪಿ ನಗರಕ್ಕೆ ವಾರಾಹಿ ನದಿಯಿಂದ ಕುಡಿಯುವ ನೀರು ಸರಬರಾಜು ಯೋಜನೆಯಡಿ ಮಣಿಪಾಲದ ಕಾಯಿನ್ ಸರ್ಕಲ್ನಿಂದ ಜೆ.ಎಲ್.ಎಸ್.ಆರ್ ವರೆಗೆ ಪೈಪ್ಲೈನ್ ಅಳವಡಿಸುವ ಕಾಮಗಾರಿಗೆ ಸಂಬಂಧಿಸಿದಂತೆ, ಕಾಮಗಾರಿಗೆ ಅಡಚಣೆಯಾಗುವ 58 ಗಿಡಗಳನ್ನು ತೆರವುಗೊಳಿಸುವ ಕುರಿತು ಜುಲೈ 18 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಗೆ ಹಾಜರಾಗಿ ಅಥವಾ ಸಭೆ ನಡೆಯುವ ದಿನಾಂಕದ ಒಳಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಉಪ ಸಂರಕ್ಷಣಾಧಿಕಾರಿಯವರ […]
ಅಮರನಾಥ ಯಾತ್ರೆ: ಜಿಲ್ಲಾ ಯಾತ್ರಾರ್ಥಿಗಳ ಸಂಬಂಧಿಕರು ಜಿಲ್ಲಾಡಳಿತದ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಮನವಿ

ಉಡುಪಿ: ಜಿಲ್ಲೆಯಿಂದ ಅಮರನಾಥ ಕ್ಷೇತ್ರ ಯಾತ್ರೆ ಕೈಗೊಂಡು, ಮೇಘಸ್ಪೋಟದ ಪ್ರವಾಹಕ್ಕೆ ಸಿಲುಕಿರುವ, ಸುರಕ್ಷಿತವಾಗಿರುವ ಯಾತ್ರಾರ್ಥಿಗಳು ಯಾರಾದರೂ ಇದ್ದಲ್ಲಿ ಇವರ ಸಂಬಂಧಿಕರು ಕೂಡಲೇ ಜಿಲ್ಲಾಡಳಿತದ ನಿಯಂತ್ರಣ ಕೊಠಡಿ ಟೋಲ್ ಫ್ರೀ ಸಂಖ್ಯೆ 1077 (0820-2574802) ಕರೆ ಮಾಡಿ ಸಂಬಂಧಪಟ್ಟ ಯಾತ್ರಾರ್ಥಿಗಳ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಕೋರಿದ್ದಾರೆ.
ದ್ವಿತೀಯ ಪಿ.ಯುಸಿ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಸ್ಕ್ಯಾನ್ ಮಾಡಲಾದ ಪ್ರತಿಯನ್ನು ವಿದ್ಯಾರ್ಥಿಗಳು ಡೌನ್ಲೋಡ್ ಮಾಡಿಕೊಳ್ಳಲು ಜುಲೈ 15 ರ ವರೆಗೆ ಹಾಗೂ ಮರುಮೌಲ್ಯಮಾಪನ ಮತ್ತು ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 18 ರ ವರೆಗೆ ವಿಸ್ತರಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.