ಆರೋಗ್ಯವೇ ಭಾಗ್ಯ: ನಿಮ್ಮ ಕುಟುಂಬಕ್ಕಾಗಿ ಸರಿಯಾದ ಆರೋಗ್ಯ ವಿಮೆಯನ್ನೇ ಆಯ್ಕೆ ಮಾಡಿಕೊಳ್ಳಿ

ಆರೋಗ್ಯವೇ ಭಾಗ್ಯ ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ಆರೋಗ್ಯವನ್ನು ಎಷ್ಟು ಸಾಧ್ಯವೋ ಅಷ್ಟು ಪ್ರಾಕೃತಿಕವಾಗಿ ಕಾಪಾಡಿಕೊಂಡರೆ ಒಳಿತು. ಆದಾಗ್ಯೂ, ಕೆಲವೊಮ್ಮೆ ಕೈಮೀರಿದ ಸಂದರ್ಭಗಳಲ್ಲಿ ಆರೋಗ್ಯ ಹದಗೆಟ್ಟು ಆಸ್ಪತ್ರೆ ಸೇರಬೇಕಾಗಿ ಚಿಕಿತ್ಸೆ ಪಡೆದುಕೊಂಡಾಗ ಕೈಗೆ ನೀಡಲಾಗುವ ಆಸ್ಪತ್ರೆ ಬಿಲ್ ಗಳನ್ನು ಕಂಡು ಮತ್ತೊಮ್ಮೆ ಆಸ್ಪತ್ರೆ ಸೇರುವ ಪರಿಸ್ಥಿತಿ ಎದುರಾದರೂ ಅಚ್ಚರಿಯಿಲ್ಲ. ಇಂತಹ ಪರಿಸ್ಥಿತಿಗಳನ್ನು ತಪ್ಪಿಸಿಕೊಳ್ಳಲು ಹೆಲ್ತ್ ಇನ್ಶೂರೆನ್ಸ್(ಆರೋಗ್ಯ ವಿಮೆ)ಗಳನ್ನು ಮಾಡಿಸಿಕೊಳ್ಳಬಹುದು. ಮಾರುಕಟ್ಟೆಯಲ್ಲಿ ತರಹೇವಾರಿ ಆರೋಗ್ಯ ವಿಮೆಗಳಿದ್ದು ಯಾವುದನ್ನು ಆಯ್ಕೆ ಮಾಡಲಿ ಎನ್ನುವ ಗೊಂದಲ ಎಲ್ಲರನ್ನೂ ಕಾಡುತ್ತವೆ. ಕಂಪನಿಗಳು ಕೂಡಾ […]
ಮನೆಯೊಳಗಿನ ರಾಸಾಯನಿಕಗಳನ್ನು ತೊಡೆದು ಗಾಳಿಯನ್ನು ಶುದ್ದೀಕರಿಸುವ ಕಡಿಮೆ ಖರ್ಚಿನ ಒಳಾಂಗಣ ಸಸ್ಯಗಳು

ಮನೆಯ ಒಳಾಂಗಣದಲ್ಲಿ ಬೆಳೆಸುವ ಗಿಡಗಳು ಗಾಳಿಯಿಂದ ಹಾನಿಕಾರಕ ವಿಷವನ್ನು ಹೀರಿಕೊಳ್ಳುತ್ತವೆ ಎಂದು ಅಮೇರಿಕಾದ ಬಾಹ್ಯಾಕಾಶ ಸಂಸ್ಥೆ ನಾಸಾ 1989 ರಲ್ಲಿ ಕಂಡುಕೊಂಡಿದೆ. ವಿಶೇಷವಾಗಿ ಕಡಿಮೆ ಗಾಳಿಯ ಹರಿವಿನೊಂದಿಗೆ ಸುತ್ತುವರಿದ ಸ್ಥಳಗಳಲ್ಲಿ ಈ ಗಿಡಗಳನ್ನು ಬೆಳೆಸುವುದು ಗಾಳಿಯನ್ನು ಶುದ್ದೀಕರಿಸುತ್ತದೆ ಎಂದು ನಾಸಾ ಕಂಡುಕೊಂಡಿದೆ. ಈ ಅಧ್ಯಯನವು ಒಳಾಂಗಣ ಸಸ್ಯಗಳು ಮತ್ತು ಅವುಗಳ ಗಾಳಿಯನ್ನು ಸ್ವಚ್ಛಗೊಳಿಸುವ ಸಾಮರ್ಥ್ಯಗಳ ಬಗ್ಗೆ ಹೊಸ ಅಧ್ಯಯನಗಳಿಗೆ ಆಧಾರವಾಗಿದೆ. ಸಸ್ಯಗಳು ಹೆಚ್ಚು ನೈಸರ್ಗಿಕ, ವೆಚ್ಚ ಪರಿಣಾಮಕಾರಿ ಮತ್ತು ಚಿಕಿತ್ಸಕ ವಾಯು ಶುದ್ದಿಕಾರಕಗಳಾಗಿವೆ. ಒಳಾಂಗಣ ಸಸ್ಯಗಳ ಪ್ರಯೋಜನಗಳು […]
ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯ ಕಾಪಾಡಲು ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ

ಡಿ.22 ರಂದು ಉತ್ತರಾಯಣವು ಆರಂಭವಾಗಿದ್ದು, ದೇಶದ ಹಲವು ರಾಜ್ಯಗಳು ಚಳಿಗಾಲವನ್ನು ಎದುರಿಸಲು ಸಜ್ಜಾಗುತ್ತಿವೆ. ಚಳಿಗಾಲದಲ್ಲಿ ಚರ್ಮ, ಕೂದಲು ಮತ್ತು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯ. ಮಾತ್ರವಲ್ಲದೆ, ವಿಶ್ವದಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ವರದಿಗಳು ಬರುತ್ತಿದ್ದು, ಭಾರತವೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಆಹಾರವನ್ನು ದಿನನಿತ್ಯದ ಆಹಾರಪದ್ದತಿಯಲ್ಲಿ ಅಳವಡಿಸಿಕೊಳ್ಳುವುದು ಕ್ಷೇಮ. ಚಳಿಗಾಲದಲ್ಲಿ ಸೇವಿಸಬಹುದಾದ ಆಹಾರಗಳು ಬೆಲ್ಲ ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದ ಭಾಗವಾಗಿಸುವುದು ಉಪಯುಕ್ತ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ, […]
ಭಾರತೀಯ ಆಯುರ್ವೇದ ಪರಂಪರೆಗೆ ಪಕೃತಿ ನೀಡಿದ ವರದಾನ: ‘ಅಮೃತಬಳ್ಳಿಯ’ ಅನನ್ಯ ಆರೋಗ್ಯ ಪ್ರಯೋಜನಗಳು

ವಿಶ್ವದಾದ್ಯಂತ ನಡೆಸಿದ ಅನೇಕ ಅಧ್ಯಯನಗಳ ಆಧಾರದಲ್ಲಿ ಭಾರತದ ಆಯುರ್ವೇದ ಚಿಕಿತ್ಸೆಯನ್ನು ಸರ್ವಶ್ರೇಷ್ಠ ಎಂದು ಪರಿಗಣಿಸಲಾಗಿದೆ. ಸಾವಿರಾರು ವರ್ಷಗಳಿಂದ ಭಾರತದಲ್ಲಿ ಆಯುರ್ವೇದ ಚಿಕಿತ್ಸೆಯನ್ನು ಪರಿಣಾಮಕಾರಿಯಾಗಿ ರೋಗ ಚಿಕಿತ್ಸೆಯಲ್ಲಿ ಬಳಸಿಕೊಳ್ಳಲಾಗಿದೆ. ಭಾರತದ ಆಯುರ್ವೇದ ಪರಂಪರೆಯಲ್ಲಿ ಪಕೃತಿ ವರವಾಗಿ ನೀಡಿರುವ ಮೂರು ಅಮೃತ ಸಸ್ಯಗಳಿವೆ. ಬೆಳ್ಳುಳ್ಳಿ, ಹರೀತಕಿ ಮತ್ತು ಅಮೃತಬಳ್ಳಿ ಇವೇ ಆ ಮೂರು ಸಸ್ಯಗಳು. ಹೆಸರೇ ಸೂಚಿಸುವಂತೆ ಸಾವಿನದವಡೆಯಲ್ಲಿರುವವರನ್ನೂ ಬದುಕಿಸುವ ಶಕ್ತಿ ಉಳ್ಳ ಸಸ್ಯವೇ ಅಮೃತ ಬಳ್ಳಿ. ಸಂಸ್ಕೃತದಲ್ಲಿ ಅಮೃತವಲ್ಲಿ, ಅಮೃತ, ಗುಡೂಚಿ ಮತ್ತು ಹಿಂದಿಯಲ್ಲಿ ಗಿಲೋಯ್ ಎಂದು ಕರೆಯಲ್ಪಡುವ […]
ಹೃದಯ ಸ್ತಂಭನ ಸಮಯದಲ್ಲಿ ಸಿಪಿಆರ್ ನೀಡಿ ವ್ಯಕ್ತಿಯ ಜೀವ ಉಳಿಸಿ: ಸಿಪಿಆರ್ ನೀಡುವ ವಿಧಾನದ ಬಗ್ಗೆ ತಿಳಿಯಿರಿ

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಮತ್ತು ಹೃದಯ ಸ್ತಂಭನಗಳು ಸಾಮಾನ್ಯವೆಂಬಂತಾಗಿದ್ದು, ಬಾಳಿ ಬದುಕಬೇಕಾಗಿರುವ ಎಳೆ ಜೀವಗಳು ತರಗೆಲೆಗಳಂತೆ ಧರೆಗುರುಳುತ್ತಿರುವ ದೃಶ್ಯಗಳು ಎಲ್ಲೆಲ್ಲೂ ಕಂಡುಬರುತ್ತಿದೆ. ಹೃದಯಾಘಾತ ಅಥವಾ ಹೃದಯಸ್ತಂಭನವಾದಾಗ ಹತ್ತಿರದಲ್ಲೇ ವ್ಯಕ್ತಿಗಳಿದ್ದರೂ ಈ ಸಂದರ್ಭದಲ್ಲಿ ಯಾವ ರೀತಿ ವರ್ತಿಸಬೇಕುನ್ನುವುದು ಬಹುತೇಕರಿಗೆ ತಿಳಿದಿರುವುದಿಲ್ಲ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಗಾಬರಿಯಾಗದೆ ಹೃದಯ ಸ್ತಂಭನವಾದ ವ್ಯಕ್ತಿಗೆ ತಕ್ಷಣ ಸಿಪಿಆರ್ ನೀಡಿದಲ್ಲಿ ವ್ಯಕ್ತಿಯ ಪ್ರಾಣ ಉಳಿಸಬಹುದು. ಸಿಪಿಆರ್ ಎಂದರೇನು ಮತ್ತು ನಾವು ಅದನ್ನು ಯಾವಾಗ ಬಳಸಬೇಕು? ಕಾರ್ಡಿಯೋಪಲ್ಮನರಿ ಪುನರುಜ್ಜೀವನ (ಸಿಪಿಆರ್) ಎನ್ನುವುದು ತುರ್ತು ವಿಧಾನವಾಗಿದ್ದು, ಉಸಿರಾಟ […]