ವೈದ್ಯರ ನಿಸ್ವಾರ್ಥ ಸೇವೆಗೊಂದು ದೊಡ್ಡ ಸಲಾಂ: ಲಾವಣ್ಯ ಬರೆದ ಡಾಕ್ಟರ್ ಡೇ ಸ್ಪೆಷಲ್ ಬರಹ

  ಆರೋಗ್ಯವೇ ಭಾಗ್ಯ ಎನ್ನುವ ಮಾತು ಸರ್ವಕಾಲಿಕವಾದದ್ದು. ಆರೋಗ್ಯವನ್ನು ರಕ್ಷಿಸಿ ರೋಗಿಗಳ ಆರೋಗ್ಯಕ್ಕೆ ಮದ್ದು ನೀಡುವ ವೈದ್ಯರನ್ನು ದೇವರ ರೀತಿಯಲ್ಲಿ ಕಾಣುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಾನವರಾದ ನಾವುಗಳು ದೇವರನ್ನು ಪೂಜಿಸುತ್ತೇವೆ ಮತ್ತು ಭೂಮಿಯ ಮೇಲೆ ದೇವರನ್ನು ನೋಡಲು ಸಾಧ್ಯವಿಲ್ಲ ಎನ್ನುವುದು ಎಲ್ಲರಿಗೂ ತಿಳಿದಿರುವ ಸತ್ಯ. ನಮ್ಮ ಆರೋಗ್ಯವನ್ನು ಉತ್ತಮಗೊಳಿಸಿ ನಮ್ಮನ್ನು ಆರೈಕೆ ಮಾಡುವ ವೈದ್ಯರುಗಳೇ ದೇವರ ಶಕ್ತಿ ಪಡೆದು ಕಣ್ಣೆದುರಿಗೆ ನಿಲ್ಲುವ ದೇವರು ಎಂದರೆ ತಪ್ಪಾಗಲಾರದು. ಆದ್ದರಿಂದಲೇ “ವೈದ್ಯೋ ನಾರಾಯಣೋ ಹರಿಃ” ಎಂಬ ಮಾತು ಅಕ್ಷರಶಃ […]

ಜೀವ ಉಳಿಸೋ ವೈದ್ಯರಿಗೂ ಇವೆ ನೂರಾರು ಒತ್ತಡ: ಡಾ. ಶಫೀಕ್. ಎ ಎಂ ಬರೆದ ಡಾಕ್ಟರ್ ಡೇ ಬರಹ

ಭಾರತದಲ್ಲಿ ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತಿದೆ. ಇದು ವೈದ್ಯರನ್ನು ನೆನಪಿಸಿಕೊಳ್ಳುವ ದಿನವಾಗಿರುವುದಲ್ಲದೆ, ವೈಯಕ್ತಿಕವಾಗಿ ಮತ್ತು ಒಂದು ಸಮಾಜವಾಗಿ ನಮಗೆ ವೈದ್ಯರು ಸಲ್ಲಿಸುವ ಎಲ್ಲಾ ಸೇವೆಗಳಿಗೆ ಕೃತಜ್ಞತೆ ಸಲ್ಲಿಸುವಂತಹ ದಿನ ಇದಾಗಿರುತ್ತದೆ. ಆದರೆ, ಅವರು ಕೂಡ ಮನುಷ್ಯರು ಎಂಬುದನ್ನು ನಾವು ಎಷ್ಟು ಬಾರಿ ಅರ್ಥ ಮಾಡಿಕೊಂಡಿದ್ದೇವೆ? ಮತ್ತು ಇತ್ತೀಚೆಗೆ ದೀರ್ಘಕಾಲದ ಕೆಲಸದ ಗಂಟೆಗಳಿಂದ ಮತ್ತು ಸತತವಾಗಿ ಹೆಚ್ಚುತ್ತಿರುವ ರೋಗಿಗಳ ಒತ್ತಡದಿಂದ ವೈದ್ಯರು ತೀವ್ರ ರೀತಿಯಲ್ಲಿ ಭಾವನಾತ್ಮಕವಾಗಿ ಮತ್ತು ತೀವ್ರ ರೀತಿಯಲ್ಲಿ ದೈಹಿಕವಾಗಿ ಸುಸ್ತಿಗೆ ಒಳಗಾಗಿರುವ ಹಲವಾರು […]

5 ಕೋಟಿ ಯೂನಿಟ್‌ಗಳಷ್ಟು ರಕ್ತದ ಅವಶ್ಯಕತೆ ಇರುವ ಭಾರತದಲ್ಲಿ ಪೂರೈಕೆಯಾಗುವುದು 50% ಮಾತ್ರ

ಆರೋಗ್ಯ ಸೇವೆಯಲ್ಲಿ ರಕ್ತ ವರ್ಗಾವಣೆಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿರ್ದಿಷ್ಟವಾಗಿ ಮಹಿಳೆಯರು ಮತ್ತು ಮಕ್ಕಳನ್ನು ರಕ್ತದ ಕೊರತೆ ಕಾಡುತ್ತದೆ. ಭಾರತಕ್ಕೆ ಹಲವಾರು ವೈದ್ಯಕೀಯ ಅಸ್ವಸ್ಥತೆಗಳ ಚಿಕಿತ್ಸೆಗಾಗಿ ಸುಮಾರು 5 ಕೋಟಿ ಯೂನಿಟ್‌ಗಳಷ್ಟು ರಕ್ತದ ಬೃಹತ್ ಅವಶ್ಯಕತೆ ಇರುತ್ತದೆ. ಪೂರೈಕೆ ಮತ್ತು ಬೇಡಿಕೆಗಳ ನಡುವಿನ ಅಂತರ ಬಹುತೇಕ ಅರ್ಧದಷ್ಟು ಇದೆ. ವಾಸ್ತವವಾಗಿ ಪ್ರತಿ ಎರಡು ಸೆಕೆಂಡುಗಳಿಗೊಮ್ಮೆ ದೇಶದ ಯಾವುದೋ ಒಂದು ಸ್ಥಳದಲ್ಲಿ ರಕ್ತ ವರ್ಗಾವಣೆಯ ಅವಶ್ಯಕತೆ ಇರುತ್ತದೆ. ಅಂದರೆ ಪ್ರತಿ ದಿನ 35,000ಕ್ಕೂ ಹೆಚ್ಚಿನ ರಕ್ತದಾನಗಳ ಅಗತ್ಯವಿರುತ್ತದೆ ಎಂದು […]

ನೀವು ಧೂಮಪಾನ ಮಾಡ್ತೀರಾ?ಹಾಗಾದ್ರೆ ಭವಿಷ್ಯದಲ್ಲಿ ನಿಮ್ಮ ಮೊಮ್ಮಗಳು ದಢೂತಿಯಾಗ್ತಾರಂತೆ!

ನವದೆಹಲಿ: ನೀವು ಧೂಮಪಾನ ಮಾಡ್ತೀರಾ? ಹಾಗಾದ್ರೆ ಭವಿಷ್ಯದಲ್ಲಿ ನಿಮ್ಮ ಮೊಮ್ಮಗಳು ದಢೂತಿಯಾಗ್ತಾರಂತೆ! ಹೌದು. ಪ್ರೌಢಾವಸ್ಥೆಗೆ ಮುನ್ನ ಅಜ್ಜ ಅಥವಾ ಮುತ್ತಜ್ಜರು ಧೂಮಪಾನ ಮಾಡುತ್ತಿದ್ದರೆ ಅದು ಮಹಿಳೆಯರು ಮತ್ತು ಹುಡುಗಿಯರ ಮೇಲೆ ಪರಿಣಾಮ ಬೀರುತ್ತದಂತೆ. ಇದು  ಸ್ಥೂಲಕಾಯವಾಗುವಂತೆ ಮಾಡುತ್ತದೆ  ಎಂದು ಯುನೈಟೆಡ್ ಕಿಂಗ್‌ಡಂನಲ್ಲಿ ನಡೆದ ಅಧ್ಯಯನದಿಂದ ತಿಳಿದು ಬಂದಿದೆ. ಯುನೈಟೆಡ್ ಕಿಂಗ್‌ಡಂನಲ್ಲಿ 90ರ ದಶಕದ 30 ವರ್ಷದ ಮಕ್ಕಳ ಮೇಲೆ ನಡೆಸಿದ ಸಂಶೋಧನೆಯಲ್ಲಿ ಈ ಸಂಗತಿ  ಬಹಿರಂಗವಾಗಿದೆ. ಯೌವನಾವಸ್ಥೆಗೆ ಮೊದಲು ಕೆಲವು ರಾಸಾಯನಿಕ ಹಾಗೂ ಕೆಟ್ಟ ಅಭ್ಯಾಸಗಳಿಗೆ ಪುರುಷರು […]

ಕ್ಯಾನ್ಸರ್ ಗೆದ್ದ ಹುಡುಗಿಯ ಈ ಕತೆ ನಿಮಗೂ ಸ್ಪೂರ್ತಿಯಾಗಬಹುದು!:ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಬರಹ

ಸಾಮಾಜಿಕ ಜಾಲತಾಣದಲ್ಲಿ ಸುಮ್ಮನೆ ಕಾಲಹರಣಕ್ಕೆ ಕಣ್ಣಾಡಿಸುತ್ತಿದ್ದಾಗ ಅರುಣಿಮಾ ಅಂತ ಕ್ಯಾನ್ಸರಿಗೆ ಸವಾಲೆಸೆದ ಹುಡುಗಿಯ ಜೀವನ ಪ್ರೀತಿಯ ಬಗ್ಗೆ ಓದಿದೆ ಆಗ ಅಕಸ್ಮಾತಾಗಿ ನನ್ನ ಕಣ್ಣು ಅಲ್ಲೇ ಹತ್ತಿರದಲ್ಲೇ ಬರೆದಿದ್ದ ಮತ್ತೊಂದು ಲೇಖನದ ಮೇಲೆ ಬಿಟ್ಟು ಅದುವೇ “ಕ್ಯಾನ್ಸರ್ ಎಂಬ ಯಮನಿಗೆ ಸಡ್ಡು ಹೊಡೆದ ಗಟ್ಟಿಗಿತ್ತಿ ಶಿವಮೊಗ್ಗದ ಶ್ರುತಿ” ಅಂತ ತೃಪ್ತಿ ಹೆಗ್ಡೆ ಅನ್ನೋರು ಬರೆದ ಲೇಖನ ಅದನ್ನು ಓದುತ್ತ ಸಾಗಿದ ಹಾಗೆ “ಬದುಕ ದಿಕ್ಕು ಬದಲಿಸಿದ ಆಸ್ಟಿಯೋ ಸರ್ಕೋಮಾ” ಅನ್ನೋ ಪುಸ್ತಕದ ಬಗ್ಗೆ ತಿಳಿಯಿತು ಕುತೂಹಲ ಬೆಳೆಯಿತು. […]