ಇಂದಿನಿಂದಲೇ ಶಾಲೆ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ ಫುಡ್‌ಗೆ ಬ್ರೇಕ್:ಯಾಕೆ ಈ ಮಹತ್ವದ ನಿರ್ಧಾರ?

ಬೆಂಗಳೂರು: ರಾಜ್ಯದ ಶಾಲೆ, ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ 50 ಮೀಟರ್ ವ್ಯಾಪ್ತಿಯಲ್ಲಿ ಹೆಚ್ಚಿನ ಕೊಬ್ಬು, ಸಕ್ಕರೆ ಮತ್ತು ಉಪ್ಪು (HFSS) ಹೊಂದಿರುವ ಆಹಾರಗಳ ಮಾರಾಟ, ಉಚಿತ ವಿತರಣೆ, ಜಾಹೀರಾತು ಮತ್ತು ಪ್ರಚಾರಕ್ಕೆ ವಿಧಿಸಿರುವ ನಿಷೇಧವನ್ನು ಆಗಸ್ಟ್‌ 1ರಿಂದ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಇಲಾಖೆ ತಿಳಿಸಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಈ ಕುರಿತು ಮಾಹಿತಿ ನೀಡಿ, ಮಕ್ಕಳಲ್ಲಿ ಆರೋಗ್ಯಕರ ಆಹಾರ ಪದ್ಧತಿಯನ್ನು ಬೆಳೆಸುವುದು ಹಾಗೂ ಜಂಕ್‌ […]

ರುಚಿಗಾಗಿ ತಿನ್ನೋ ಫಾಸ್ಟ್‌ಫುಡ್ ನಿಮ್ಮ ಆರೋಗ್ಯಕ್ಕೆ ಮುಳುವಾಗಬಹುದು! ಈ ಅಪಾಯಗಳ ಬಗ್ಗೆ ಗೊತ್ತಾ?

ಇಂದಿನ ವೇಗದ ಜೀವನಶೈಲಿಯಲ್ಲಿ ಫಾಸ್ಟ್‌ಫುಡ್ ಅನೇಕ ಜನರ ದಿನನಿತ್ಯದ ಆಹಾರದ ಭಾಗವಾಗಿದೆ. ಕೆಲಸದ ಒತ್ತಡ, ಸಮಯದ ಅಭಾವ ಮತ್ತು ಸುಲಭವಾಗಿ ಸಿಗುವ ಕಾರಣಕ್ಕೆ ಪಿಜ್ಜಾ, ಬರ್ಗರ್, ಫ್ರೆಂಚ್ ಫ್ರೈಸ್, ನೂಡಲ್ಸ್ ಸೇರಿದಂತೆ ವಿವಿಧ ರೀತಿಯ ಫಾಸ್ಟ್‌ಫುಡ್‌ಗಳನ್ನು ಸೇವಿಸುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ಇಂತಹ ಆಹಾರಗಳನ್ನು ಪದೇ ಪದೆ ಸೇವಿಸುವುದು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಫಾಸ್ಟ್‌ಫುಡ್ ತಕ್ಷಣಕ್ಕೆ ರುಚಿಯಾಗಿರಬಹುದು. ಆದರೆ, ಇವುಗಳಲ್ಲಿ ಸಾಮಾನ್ಯವಾಗಿ ಹೆಚ್ಚಿನ ಕ್ಯಾಲೊರಿ, ಉಪ್ಪು, ಸಕ್ಕರೆ ಮತ್ತು ಅನಾರೋಗ್ಯಕರ ಕೊಬ್ಬು ಇರುತ್ತದೆ. ಇಂತಹ […]

ಮನೆಯಲ್ಲಿ ಸೊಳ್ಳೆ ಬತ್ತಿ ಹಚ್ಚೋ ಅಭ್ಯಾಸ ಇದ್ಯಾ? ಈ ಎಲ್ಲಾ ಸಮಸ್ಯೆಗಳಿಗೆ ಕಾರಣ ಆಗ್ಬೋದು ಎಚ್ಚರವಿರಲಿ

ಮಳೆಗಾಲ ಆರಂಭವಾಗುತ್ತಿದ್ದಂತೆ ಸೊಳ್ಳೆಗಳ ಕಾಟವೂ ಹೆಚ್ಚಾಗುತ್ತದೆ. ಸೊಳ್ಳೆಗಳಿಂದ ತಪ್ಪಿಸಿಕೊಳ್ಳಲು ಅನೇಕರು ರಾತ್ರಿ ಮಲಗುವಾಗ ಸೊಳ್ಳೆ ಬತ್ತಿ ಹಚ್ಚುತ್ತಾರೆ. ಆದರೆ, ಸೊಳ್ಳೆ ಬತ್ತಿಯಿಂದ ಹೊರಬರುವ ಹೊಗೆಯನ್ನು ದೀರ್ಘಕಾಲ ಉಸಿರಾಡುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಸೊಳ್ಳೆಗಳನ್ನು ನಿಯಂತ್ರಿಸಲು ಬಳಸುವ ಸೊಳ್ಳೆ ಬತ್ತಿಗಳಲ್ಲಿ ವಿವಿಧ ರಾಸಾಯನಿಕ ಪದಾರ್ಥಗಳಿರುತ್ತವೆ. ಬತ್ತಿ ಉರಿಯುವಾಗ ಬಿಡುಗಡೆಯಾಗುವ ಹೊಗೆ ಮನೆಯೊಳಗೆ ಹರಡುತ್ತದೆ. ವಿಶೇಷವಾಗಿ ಬಾಗಿಲು, ಕಿಟಕಿಗಳನ್ನು ಮುಚ್ಚಿಕೊಂಡು ಸೊಳ್ಳೆ ಬತ್ತಿ ಹಚ್ಚಿ ಮಲಗಿದರೆ ಕೋಣೆಯೊಳಗೆ ಹೊಗೆ ಹೆಚ್ಚಾಗಿ ಸಂಗ್ರಹವಾಗುವ ಸಾಧ್ಯತೆಯಿದೆ. ಶ್ವಾಸಕೋಶಕ್ಕೆ ತೊಂದರೆ ಉಂಟಾಗಬಹುದು […]

ನಿಮ್ಮ ಮಕ್ಕಳ ಭವಿಷ್ಯ ಚೆನ್ನಾಗಿರಬೇಕೇ? ಇಂದಿನಿಂದಲೇ ಹೀಗೆ ಮಾಡಿ

ಜು.28 ವಿಶ್ವ ಪ್ರಕೃತಿ ಸಂರಕ್ಷಣಾ ದಿನ: ಪ್ರಕೃತಿಯನ್ನು ಉಳಿಸುವುದು ಇಂದು ಆಯ್ಕೆಯಲ್ಲ, ನಮ್ಮೆಲ್ಲರ ಜವಾಬ್ದಾರಿ! ನಮ್ಮ ಮುಂದಿನ ಪೀಳಿಗೆ ನೆಮ್ಮದಿಯಿಂದ ಬದುಕಬೇಕೆಂದರೆ, ಅವರಿಗೆ ಸ್ವಚ್ಛ ಗಾಳಿ, ನೀರು ದೊರೆಯಬೇಕಾದರೆ ನಾವು ಇಂದು ಎಚ್ಚೆತ್ತುಕೊಳ್ಳಬೇಕಿದೆ. ಪ್ರಕೃತಿ ಎಂದರೆ ಕೇವಲ ಕಾಡು, ಬೆಟ್ಟ, ನದಿ, ಸಮುದ್ರಗಳಲ್ಲ. ನಾವು ಉಸಿರಾಡುವ ಗಾಳಿ, ಕುಡಿಯುವ ನೀರು, ತಿನ್ನುವ ಆಹಾರದಿಂದ ಹಿಡಿದು ನಮ್ಮ ಬದುಕಿನ ಪ್ರತಿಯೊಂದು ಹೆಜ್ಜೆಯಲ್ಲೂ ಪ್ರಕೃತಿಯ ಕೊಡುಗೆ ಇದೆ. ಆದರೆ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಅತಿಯಾದ ನಗರೀಕರಣ, ಕಾಡುಗಳ ನಾಶ, ಪ್ಲಾಸ್ಟಿಕ್ […]

ಪುರುಷರೇ ಮಳೆಗಾಲದಲ್ಲಿ ಈ ಒಂದು ತಪ್ಪು ಮಾಡ್ಬೇಡಿ, ಕೂದಲು ಹೀಗಾಯ್ತು ಅಂತ ಆ ಮೇಲೆ ಗೋಳಾಗಬೇಡಿ!

ಇತ್ತೀಚಿನ ದಿನಗಳಲ್ಲಿ ಯುವಕ-ಯುವತಿಯರಲ್ಲಿ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತಿದ್ದು, ವಿಶೇಷವಾಗಿ ಮಳೆಗಾಲದಲ್ಲಿ ಈ ಸಮಸ್ಯೆ ಮತ್ತಷ್ಟು ತೀವ್ರವಾಗುತ್ತದೆ. ಜೀವನಶೈಲಿಯ ಕೆಲವು ತಪ್ಪು ಅಭ್ಯಾಸಗಳು ಕೂದಲು ಉದುರುವಿಕೆಗೆ ಪ್ರಮುಖ ಕಾರಣವಾಗುತ್ತವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಎಂಬಿಬಿಎಸ್ ವೈದ್ಯೆ ಡಾ. ಅಪರಾಜಿತಾ ಲಂಬಾ ಅವರ ಪ್ರಕಾರ, ಮಳೆಗಾಲದಲ್ಲಿ ಕೂದಲಿಗೆ ಹೆಚ್ಚು ಸಮಯ ಎಣ್ಣೆ ಹಚ್ಚಿಕೊಂಡಿರುವುದು ಹಾಗೂ ಅತಿಯಾಗಿ ಎಣ್ಣೆ ಬಳಸುವುದು ಕೂದಲಿನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದರಿಂದ ನೆತ್ತಿಯಲ್ಲಿ ತೇವಾಂಶ ಹೆಚ್ಚಾಗಿ ಕೂದಲಿನ ಕಿರುಚೀಲಗಳಿಗೆ ಹಾನಿಯಾಗುವ ಸಾಧ್ಯತೆ ಇದೆ. […]