ಬೇಸಿಗೆಯಲ್ಲಿ ಕೋಲ್ಡ್ ವಾಟರ್ ಕುಡಿಯೋ ಅಭ್ಯಾಸ ನಿಮಗಿದೆಯೇ? ಹಾಗಾದ್ರೆ ಇದೆಷ್ಟೆ ಡೇಂಜರ್ ನೋಡಿ

ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆ, ಜನರು ದೇಹವನ್ನು ತಂಪಾಗಿಡಲು ತಣ್ಣೀರು ಸೇವನೆಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಆದರೆ ನಿತ್ಯ ಫ್ರಿಡ್ಜ್ನಲ್ಲಿರುವ ಕೋಲ್ಡ್ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದೇ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಬೇಸಿಗೆಯಲ್ಲಿ ನೀರಿನ ಮಹತ್ವ ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಾಪಾಡಿಕೊಳ್ಳುವುದು ಅತ್ಯಗತ್ಯ. ಶಾಖದ ಹೊಡೆತ ಮತ್ತು ನಿರ್ಜಲೀಕರಣದಿಂದ ತಪ್ಪಿಸಿಕೊಳ್ಳಲು ಸಾಕಷ್ಟು ನೀರು ಕುಡಿಯಬೇಕು. ಆದರೆ ಅತಿಯಾಗಿ ತಣ್ಣೀರು ಸೇವನೆ ಮಾಡುವುದು ಕೆಲ ಸಮಸ್ಯೆಗಳಿಗೆ ಕಾರಣವಾಗಬಹುದು. ಫ್ರಿಡ್ಜ್ ನಲ್ಲಿಟ್ಟ ಕೋಲ್ಡ್ ವಾಟರ್ ಕುಡಿಯುವುದರಿಂದ […]
ಉರಿ ಮೂತ್ರ, ಮೂತ್ರನಾಳದ ಸೋಂಕು ಎಂದಿಗೂ ಕಡೆಗಣಿಸಬೇಡಿ: ಇಲ್ಲಿದೆ ಉಪಯುಕ್ತ ಮಾಹಿತಿ

ಮೂತ್ರನಾಳದ ಸೋಂಕು Urinary Tract Infection(UTI), ಮೂತ್ರ ವ್ಯವಸ್ಥೆಯ ಯಾವುದೇ ಭಾಗದಲ್ಲಿ ಮೂತ್ರಪಿಂಡ, ಮೂತ್ರಾಶಯ (Bladder), ಮೂತ್ರನಾಳ (Urethra) ಗಳಲ್ಲಿ ಉಂಟಾಗುವ ಬ್ಯಾಕ್ಟೀರಿಯಾ ಸೋಂಕಾಗಿದೆ. ಇದು ಮಹಿಳೆಯರಲ್ಲಿ ಹೆಚ್ಚು ಸಾಮಾನ್ಯವಾಗಿದ್ದರೂ, ಪುರುಷರು ಮತ್ತು ಮಕ್ಕಳಲ್ಲೂ ಇದು ಕಾಣಿಸಿಕೊಳ್ಳಬಹುದು. ಪ್ರಮುಖ ಕಾರಣಗಳು ಮೂತ್ರನಾಳದ ಸೋಂಕು ಸಾಮಾನ್ಯವಾಗಿ ಬ್ಯಾಕ್ಟೀರಿಯಾಗಳಿಂದ ಉಂಟಾಗುತ್ತದೆ. ಲಕ್ಷಣಗಳು ತಡೆಗಟ್ಟುವಿಕೆ ಕ್ರಮಗಳು UTI ಸಾಮಾನ್ಯ ಸಮಸ್ಯೆಯಾದರೂ, ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ ಲಕ್ಷಣಗಳನ್ನು ನಿರ್ಲಕ್ಷಿಸದೆ ತಕ್ಷಣ ವೈದ್ಯಕೀಯ ಸಲಹೆ […]
ಕರಾವಳಿಯಲ್ಲಿ ಹೆಚ್ಚುತ್ತಿದೆ ಬಿಸಿ ಗಾಳಿ, ಎ. 27 ರ ವರೆಗೂ ಉರಿ ಉರಿ ಧಗೆ: ಈ ಬಿಸಿಲಿಗೆ ಹೆಚ್ಚು ನೀರು ಕುಡೀರಿ, ಅನಾರೋಗ್ಯದಿಂದ ದೂರವಿರಿ!

ಕರಾವಳಿಯಲ್ಲಿ ಬಿಸಿಗಾಳಿ ಮುಂದಿನ ಎರಡು-ಮೂರು ದಿನಗಳಲ್ಲಿ ಜಾಸ್ತಿಯಾಗಲಿದೆ ಎನ್ನುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೆಚ್ಚಾಗಿ ಮಧ್ಯಾಹ್ನದ ಹೊತ್ತು ಹೊರಗೆ ಕೆಲಸ ಮಾಡದಂತೆ ಸೂಚನೆ ನೀಡಿದೆ. ಇಂತಹ ಬಿರುಬೇಸಿಗೆಯಲ್ಲಿಯೇ ನಿರ್ಜಲೀಕರಣದ ಸಮಸ್ಯೆ ನಮ್ಮಲ್ಲಿ ಜಾಸ್ತಿಯಾಗುತ್ತದೆ. ಕಡಿಮೆ ನೀರು ಕುಡಿಯುದರಿಂದ ಈ ಸಮಸ್ಯೆ ಜಾಸ್ತಿಯಾಗುತ್ತದೆ. ಬೇಸಿಗೆಯ ತಾಪಮಾನ ಹೆಚ್ಚಾದಂತೆ ದೇಹದಲ್ಲಿ ಬೆವರುವಿಕೆ ಹೆಚ್ಚಾಗಿ, ನಿರ್ಜಲೀಕರಣ (Dehydration) ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚುತ್ತದೆ. ದೇಹದಲ್ಲಿ ನೀರಿನ ಕೊರತೆಯಿಂದ ತಲೆನೋವು, ತಲೆತಿರುಗುವಿಕೆ ಹಾಗೂ ಆಯಾಸ ಕಾಣಿಸಿಕೊಳ್ಳಬಹುದು. ಸಾಕಷ್ಟು ನೀರು ಕುಡಿಯದಿದ್ದರೆ ಮೂತ್ರಪಿಂಡದ […]
ಮನಸ್ಸಿಗೆ ಒತ್ತಡವೇ ಚಿಂತೆ ಬಿಡಿ? ನಿಮ್ಹಾನ್ಸ್ ತಯಾರಿಸಿರುವ “ಮೈಂಡ್ ನೋಟ್” ಆಪ್ ನಲ್ಲಿದೆ ಪರಿಹಾರ

ವೈದ್ಯರನ್ನು ನೇರವಾಗಿ ಭೇಟಿ ಮಾಡಲು ಹಿಂಜರಿಯುವವರಿಗೆ ಇದು ಉತ್ತಮ ಪರ್ಯಾಯ ಬೆಂಗಳೂರು: ಖಿನ್ನತೆ, ಆತಂಕ ಮತ್ತು ಒತ್ತಡದಂತಹ ಮಾನಸಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿ, ಸ್ವ-ಮೌಲ್ಯಮಾಪನಕ್ಕೆ ನೆರವಾಗಲು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ‘ಮೈಂಡ್ ನೋಟ್’ ಆಪ್ ಅನ್ನು ಅಭಿವೃದ್ಧಿಪಡಿಸಿದೆ. ಈ ಆಪ್ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಲಭ್ಯವಿದೆ. ಸ್ವ-ಮೌಲ್ಯಮಾಪನಕ್ಕೆ ಸರಳ ವೇದಿಕೆ ಹಲವರಿಗೆ ತಮ್ಮ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟ ಅರಿವು ಇರುವುದಿಲ್ಲ. ‘ಮೈಂಡ್ ನೋಟ್’ ಆಪ್ ಬಳಕೆದಾರರಿಗೆ ಪ್ರಶ್ನಾವಳಿ, […]
ಬೇಸಿಗೆಗೆ ಇಡ್ಲಿ, ದೋಸೆ, ವಡೆ ತಿನ್ನುವ ಮೊದಲು ಎಚ್ಚರಿಕೆ ಬೇಕೇ ಬೇಕು: ಇಡ್ಲಿ ತಿಂದು ಉದ್ಯೋಗಿಗಳು ಅಸ್ವಸ್ಥರಾದ ಪ್ರಕರಣ, ಈಗ ಹಲವು ಚರ್ಚೆಗೆ ಕಾರಣ!

ಬೆಂಗಳೂರು: ನಗರದ ಖಾಸಗಿ ಕಂಪನಿಯ ಕ್ಯಾಂಟೀನ್ನಲ್ಲಿ ಇಡ್ಲಿ, ವಡೆ ಹಾಗೂ ಸಾಂಬಾರ್-ಅನ್ನ ಸೇವಿಸಿದ ಬಳಿಕ 97 ಮಂದಿ ಉದ್ಯೋಗಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಈ ಘಟನೆಯ ಬಳಿಕ ಹುದುಗಿಸಿದ (fermented) ಆಹಾರಗಳ ಸುರಕ್ಷತೆ ಕುರಿತು ಚರ್ಚೆಗಳು ಮತ್ತೆ ಜೋರಾಗಿದೆ. ಸಾಮಾನ್ಯವಾಗಿ ಇಡ್ಲಿ, ದೋಸೆ, ವಡೆಯಂತಹ ಹುದುಗಿಸಿದ ಆಹಾರ ಪದಾರ್ಥಗಳನ್ನು ಕರುಳಿನ ಆರೋಗ್ಯಕ್ಕೆ ಉತ್ತಮ, ಸುಲಭವಾಗಿ ಜೀರ್ಣವಾಗುವ ಆಹಾರವೆಂದು ಪರಿಗಣಿಸಲಾಗುತ್ತದೆ. ಆದರೆ ಬೇಸಿಗೆಯ ಹೆಚ್ಚಿನ ತಾಪಮಾನದಲ್ಲಿ ಇವುಗಳನ್ನು ಸರಿಯಾದ ರೀತಿಯಲ್ಲಿ ಸಂರಕ್ಷಿಸದಿದ್ದರೆ ಅಪಾಯ ಉಂಟಾಗಬಹುದು […]