ಕ್ಯಾನ್ಸರ್ ಪತ್ತೆಗೆ ಹೊಸ ಕ್ರಾಂತಿ! ವಾಸನೆ ಹಿಡಿದು ರೋಗ ಗುರುತಿಸುತ್ತವೆ ಈ ಶ್ವಾನಗಳು

ಕ್ಯಾನ್ಸರ್ ಪತ್ತೆ ಮಾಡುವ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಆರಂಭವಾಗಿದೆ. ಮನೆಯ ಕಾವಲುಗಾರರೆಂದು ಪರಿಚಿತವಾಗಿರುವ ಶ್ವಾನಗಳು ಈಗ ಜೀವ ರಕ್ಷಿಸುವ ವೈದ್ಯರ ಪಾತ್ರವನ್ನು ನಿಭಾಯಿಸುತ್ತಿವೆ. ತಮ್ಮ ಅಸಾಧಾರಣ ವಾಸನೆ ಗ್ರಹಿಸುವ ಸಾಮರ್ಥ್ಯದ ಮೂಲಕ ಮನುಷ್ಯರಲ್ಲಿ ಕ್ಯಾನ್ಸರ್ ಇದೆಯೇ ಎಂಬುದನ್ನು ಪತ್ತೆ ಮಾಡುವಲ್ಲಿ ಅವು ಗಮನಾರ್ಹ ಯಶಸ್ಸು ಸಾಧಿಸಿವೆ. ಬೆಂಗಳೂರು ಮೂಲದ ಡಾಗ್ನೊಸಿಸ್ (Dognosis) ಸ್ಟಾರ್ಟ್‌ಅಪ್, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ನೆರವಿನಿಂದ 16 ಶ್ವಾನಗಳಿಗೆ ವಿಶೇಷ ತರಬೇತಿ ನೀಡಿದೆ. ಈ ಶ್ವಾನಗಳು ಮನುಷ್ಯರ ಉಸಿರಾಟದಲ್ಲಿರುವ ವೋಲಟೈಲ್ ಆರ್ಗ್ಯಾನಿಕ್ […]

ವೈದ್ಯರ ಬಳಿ ಈ ವಿಚಾರಗಳನ್ನು ಮುಕ್ತವಾಗಿ ಹೇಳಿಕೊಂಡರೆ ನಿಮಗೆ ಪರಿಹಾರ ಗ್ಯಾರಂಟಿ: ಡಾಕ್ಟರ್ಸ್ ಡೇ ಸ್ಪೆಷಲ್ ಲೇಖನ

ವೈದ್ಯರನ್ನು ದೇವರಿಗೆ ಹೋಲಿಸಲಾಗುತ್ತದೆ. ಅನಾರೋಗ್ಯದ ಸಂದರ್ಭದಲ್ಲಿ ವೈದ್ಯರ ಬಳಿಗೆ ಹೋಗುವಾಗ ನಮ್ಮ ಆರೋಗ್ಯದ ಬಗ್ಗೆ ಸಂಪೂರ್ಣ ಮತ್ತು ನಿಖರವಾದ ಮಾಹಿತಿಯನ್ನು ನೀಡುವುದು ಅತ್ಯಂತ ಮುಖ್ಯ. ಯಾವುದೇ ವಿಷಯವನ್ನು ಮುಚ್ಚಿಡುವುದು ಅಥವಾ ಸುಳ್ಳು ಹೇಳುವುದು ತಪ್ಪಾದ ರೋಗನಿರ್ಣಯಕ್ಕೆ ಕಾರಣವಾಗಬಹುದು. ಇದರಿಂದ ಚಿಕಿತ್ಸೆ ವಿಳಂಬವಾಗುವ ಅಥವಾ ಪರಿಣಾಮಕಾರಿಯಾಗದ ಸಾಧ್ಯತೆಯೂ ಇದೆ. ಆದ್ದರಿಂದ ವೈದ್ಯರೊಂದಿಗೆ ಪ್ರಾಮಾಣಿಕವಾಗಿ ಮಾತನಾಡುವುದು ಉತ್ತಮ ಆರೋಗ್ಯದ ಮೊದಲ ಹೆಜ್ಜೆಯಾಗಿದೆ. ವಯಸ್ಸಿನ ಬಗ್ಗೆ ಸುಳ್ಳು ಹೇಳಬೇಡಿ ಕೆಲವರು, ವಿಶೇಷವಾಗಿ ಮಹಿಳೆಯರು, ತಮ್ಮ ನಿಜವಾದ ವಯಸ್ಸನ್ನು ಹೇಳಲು ಹಿಂಜರಿಯುತ್ತಾರೆ. ಆದರೆ […]

ಇಂದು ರಾಷ್ಟ್ರೀಯ ವೈದ್ಯರ ದಿನ: ವೈದ್ಯರ ಸೇವೆಗೆ ಗೌರವ ಸಲ್ಲಿಸುವ ವಿಶೇಷ ದಿನವಿದು!

ಆರೋಗ್ಯವೇ ಮಹಾಭಾಗ್ಯ ಎಂಬ ಮಾತು ಎಲ್ಲ ಕಾಲಕ್ಕೂ ಅನ್ವಯಿಸುತ್ತದೆ. ಆರೋಗ್ಯವನ್ನು ಕಾಪಾಡುವುದು, ಅನಾರೋಗ್ಯಕ್ಕೆ ಚಿಕಿತ್ಸೆ ನೀಡಿ ರೋಗಿಯನ್ನು ಗುಣಪಡಿಸುವುದು ವೈದ್ಯರ ಪ್ರಮುಖ ಕರ್ತವ್ಯವಾಗಿದೆ. ಜೀವ ಉಳಿಸಿ ಹೊಸ ಬದುಕು ನೀಡುವ ವೈದ್ಯರನ್ನು “ವೈದ್ಯೋ ನಾರಾಯಣೋ ಹರಿ” ಎಂದು ಗೌರವಿಸುವ ಸಂಪ್ರದಾಯ ಭಾರತದಲ್ಲಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ವೈದ್ಯರ ಈ ಅಮೂಲ್ಯ ಸೇವೆಯನ್ನು ಸ್ಮರಿಸಿ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಪ್ರತಿವರ್ಷ ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಭಾರತದಲ್ಲಿ ರಾಷ್ಟ್ರೀಯ ವೈದ್ಯರ ದಿನವನ್ನು ಮೊದಲ […]

ಹಾಲಿನೊಂದಿಗೆ ಈ ಆಹಾರಗಳನ್ನು ಸೇವಿಸುತ್ತಿದ್ದೀರಾ?ಆರೋಗ್ಯ ಹಾಳಾಗುವ ಸಾಧ್ಯತೆ ಹೆಚ್ಚಿದೆ!

ಹಾಲು ಸಂಪೂರ್ಣ ಆಹಾರಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಇದರಲ್ಲಿ ಕ್ಯಾಲ್ಸಿಯಂ, ಪ್ರೋಟೀನ್, ವಿಟಮಿನ್‌ಗಳು ಹಾಗೂ ಹಲವು ಅಗತ್ಯ ಖನಿಜಾಂಶಗಳು ಸಮೃದ್ಧವಾಗಿದ್ದು, ಮೂಳೆಗಳ ಬಲವರ್ಧನೆ, ಸ್ನಾಯುಗಳ ಬೆಳವಣಿಗೆ ಮತ್ತು ದೇಹದ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ. ಅನೇಕರು ಪ್ರತಿದಿನ ಹಾಲನ್ನು ನೇರವಾಗಿ ಕುಡಿಯುವುದರ ಜೊತೆಗೆ ಚಹಾ, ಕಾಫಿ ಅಥವಾ ವಿವಿಧ ಪಾನೀಯಗಳ ರೂಪದಲ್ಲೂ ಸೇವಿಸುತ್ತಾರೆ. ಆದರೆ ಕೆಲವು ಆಹಾರಗಳೊಂದಿಗೆ ಹಾಲನ್ನು ಸೇವಿಸುವುದು ಜೀರ್ಣಕ್ರಿಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಹಾಗೂ ಆಯುರ್ವೇದ ತಜ್ಞರು ಎಚ್ಚರಿಸುತ್ತಾರೆ. […]

2030 ರ ವೇಳೆಗೆ ಪ್ರತಿ 9-10 ಭಾರತೀಯರಲ್ಲಿ ಒಬ್ಬರಿಗೆ ಕ್ಯಾನ್ಸರ್, ಶಾಕಿಂಗ್ ವರದಿಯಿದು: ಕ್ಯಾನ್ಸರ್ ತಡೆಗಟ್ಟಲು ನೀವು ಕೈಗೊಳ್ಳಲೇಬೇಕಾದ ಕ್ರಮಗಳೇನು?

ನವದೆಹಲಿ: ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ. ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಜ್ಞರ ವರದಿಗಳ ಪ್ರಕಾರ, 2030ರ ವೇಳೆಗೆ ಪ್ರತಿ 9 ರಿಂದ 10 ಭಾರತೀಯರಲ್ಲಿ ಒಬ್ಬರಿಗೆ ಕ್ಯಾನ್ಸರ್ ಬರುವ ಅಪಾಯ ಎದುರಾಗುವ ಸಾಧ್ಯತೆಯಿದೆ.ಇದೊಂದು ಶಾಕಿಂಗ್ ಸುದ್ದಿ. ತಜ್ಞರ ಪ್ರಕಾರ, ವಯಸ್ಸಾದ ಜನಸಂಖ್ಯೆಯ ಹೆಚ್ಚಳ, ಬದಲಾಗುತ್ತಿರುವ ಜೀವನಶೈಲಿ, ಪರಿಸರ ಮಾಲಿನ್ಯ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಮಾನಸಿಕ ಒತ್ತಡ ಕ್ಯಾನ್ಸರ್ ಪ್ರಕರಣಗಳು ಹೆಚ್ಚಲು […]