ಉಡುಪಿ:ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಾ ಕರ್ನಾಟಕ ಯೋಜನೆಯಡಿ ಪೂರ್ವ ಪ್ರಾಥಮಿಕತರಗತಿಯಿಂದ ಪದವಿ ಪೂರ್ವ ತರಗತಿವರೆಗಿನ ಶಾಲಾ ಶಿಕ್ಷಣ ಇಲಾಖೆಯ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರವು ಕಾರ್ಕಳ ವಲಯಕ್ಕೆ ನವೆಂಬರ್ 23 ರಂದು ಕಾರ್ಕಳ ಬಿ.ಆರ್.ಸಿ ಯಲ್ಲಿ, ಬೈಂದೂರು ಮತ್ತು ಕುಂದಾಪುರ ವಲಯದವರಿಗೆನವೆಂಬರ್ 25 ರಂದು ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಾಗೂ ಉಡುಪಿ ಮತ್ತು ಬ್ರಹ್ಮಾವರ ವಲಯದವರಿಗೆ ನವೆಂಬರ್ 26 ರಂದು ನಗರದ ಅಜ್ಜರಕಾಡು ಬಿ.ಆರ್.ಸಿಯಲ್ಲಿ ನಡೆಯಲಿದೆ. ಮಕ್ಕಳ ಅಗತ್ಯ […]

ಉಡುಪಿ: ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಹಾಗೂ ಶ್ರೀ ದುರ್ಗಾ ಮಹಿಳಾ ಮಂಡಲ (ರಿ) ಕೊಡವೂರು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕೊಡವೂರಿನ ವಿಪ್ರಶ್ರೀ ಸಭಾಭವನದಲ್ಲಿ ಡಾ. ಮಹಾಂತೇಶ ಶಿವಯೋಗಿಗಳ ಜನ್ಮದಿನ-ವ್ಯಸನಮುಕ್ತ ದಿನಾಚರಣೆ ಅಂಗವಾಗಿಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರವು ನಡೆಯಿತು. ಮಲ್ಪೆಯ ವೈದ್ಯಾಧಿಕಾರಿ ಡಾ. ಜೇಸ್ಮಾ ಸ್ಟೇಲ್ಲಾ ಪಿಕಾರ್ಡೊ […]

ಅಲೆವೂರು: ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಉಡುಪಿ: ನೆಹರೂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಅಲೆವೂರು, ಹೃದಯಮ್ ಫೌಂಡೇಷನ್ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಮಣಿಪಾಲದ ಕೆಎಂಸಿ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅಲೆವೂರಿನ ಸಿಎ ಬ್ಯಾಂಕ್‌ನ ಸಮೃದ್ಧಿ ಸಭಾಭವನದಲ್ಲಿ ಆಯೋಜಿಸಲಾಗಿತ್ತು. ಈ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಹೃದಯಮ್ ಫೌಂಡೇಷನ್‌ನ ಪ್ರವರ್ತಕ ಸುಭಾಷ್ ಸಾಲಿಯಾನ್ ಅವರು, ಜನರು ತಮ್ಮ ಆರೋಗ್ಯ ತಪಾಸಣೆ ನಡೆಸಲು ಅಸಡ್ಡೆ ತೋರಬಾರದು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡುವುದರಿಂದ ಉತ್ತಮ‌ ಆರೋಗ್ಯ ಕಾಪಾಡಿಕೊಳ್ಳಬಹುದು‌. ಸಂಘ […]

ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ಬೇಡ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಡೆಂಗ್ಯೂ ಅತ್ಯಂತ ದೊಡ್ಡ ರೋಗವೇನಲ್ಲ. ಆದರೆ ಡೆಂಗ್ಯೂನ ಬಗ್ಗೆ ನಿರ್ಲಕ್ಷ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ನಮ್ಮ ನಮ್ಮ ಮನೆಯ ಪರಿಸರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳ ಮೇಲೆ ವಿಶೇಷ ನಿಗಾ ವಹಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ. ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್, ರೋಟರಿ ಕ್ಲಬ್ ಉದ್ಯಾವರ ಮತ್ತು ಉದ್ಯಾವರ ಗ್ರಾಮ […]

ಜು.14ರಂದು ಅಜೆಕಾರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ. ನೂತನವಾಗಿ ಶುಭಾರಂಭ.

ಅಜೆಕಾರು: ನೂತನವಾಗಿ ಪ್ರಾರಂಭವಾದ ಅಜೆಕಾರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ. ಜು14ರಂದು ಬೆಳಗ್ಗೆ 9.05ಕ್ಕೆ ‘ಶಾಲೋಮ್‌ ಪ್ರಗತಿ’ ಕಾಂಪ್ಲೆಕ್ಸ್ ಮುಖ್ಯ ರಸ್ತೆ, ಅಜೆಕಾರಿನಲ್ಲಿ ಶುಭಾರಂಭಗೊಳ್ಳುತ್ತಿದೆ. ಈ ಉದ್ಘಾಟನ ಶುಭ ಸಂದರ್ಭದಲ್ಲಿ ನಿಟ್ಟೆ ಗಾಜ್ರಿಯ ಸ್ಪೆಷಾಲಿಟಿ ಹಾಸ್ಪಿಟಲ್ ಕಾರ್ಕಳ ಇವರಿಂದ ಉಚಿತ ಅರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಬೆಳಿಗ್ಗೆ ಗಂಟೆ 9-30 ರಿಂದ ಮಧ್ಯಾಹ್ನ 12-30ರ ವರೆಗೆ, ಅಜೆಕಾರು‌ ಲಾಲೋಮ್ ಪ್ರಗತಿ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ ನಡೆಸಲಾಗುವ ವೈದ್ಯಕೀಯ ತಪಾಸಣೆಗಳು:◼️ಸಾಮಾನ್ಯ ವೈದ್ಯಕೀಯ ಸೇವೆ◼️ಕಣ್ಣು ,ಕಿವಿ, ಮೂಗು ಚಿಕಿತ್ಸೆ◼️ಚರ್ಮರೋಗ […]