ನಾಳೆ(ನ.28) ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಉಡುಪಿ ನಗರಕ್ಕೆ ವಾಹನ ಪ್ರವೇಶ ನಿರ್ಬಂಧ.

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28ರಂದು ಶ್ರೀ ಕೃಷ್ಣಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದಿಂದ ನವೆಂಬರ್ 28 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧಿಸಿ ಮತ್ತು ಬದಲಿ ಮಾರ್ಗದಲ್ಲಿ ಸಂಚರಿಸುವ ಕುರಿತಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶ ಹೊರಡಿಸಿದ್ದಾರೆ. ಸಂಚಾರ ನಿಯಮ ಈ ಕೆಳಕಂಡಂತಿದೆ:ಕಾರ್ಯಕ್ರಮಕ್ಕೆ ಬರುವ ವಾಹನಗಳು:ಕುಂದಾಪುರದಿಂದ […]
ಪ್ರಧಾನಿ ಉಡುಪಿ ಭೇಟಿ ಹಿನ್ನೆಲೆ: ಕೃಷ್ಣನಗರಿಯಲ್ಲಿ ಪೊಲೀಸ್ ಸರ್ಪಗಾವಲು; ಶಾಲೆಗಳಿಗೆ ರಜೆ- ಅಂಗಡಿ ಮುಂಗಟ್ಟು ಬಂದ್ ಗೆ ಸೂಚನೆ!

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿಗೆ ಆಗಮಿಸುತ್ತಿದ್ದು ಅಕ್ಷರಶಃ ಉಡುಪಿ ಖಾಕಿ ಕೋಟೆಯಾಗಿ ಮಾರ್ಪಾಡಾಗಿದೆ. ಶುಕ್ರವಾರ ಬನ್ನಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದಿಂದ ಕಲ್ಸಂಕದ ವರೆಗೂ ಪ್ರಧಾನಿ ರೋಡ್ಶೋ ನಡೆಯಲಿದ್ದು ಇದಕ್ಕಾಗಿ ಎರಡು ಕಡೆಗಳಲ್ಲೂ ಬ್ಯಾರಿಕೇಡ್ ನಿರ್ಮಾಣ ಮಾಡಲಾಗಿದೆ. ಅಲ್ಲದೆ ಈ ರಸ್ತೆಯ ಎರಡೂ ಬದಿಗಳಲ್ಲಿರುವ ಅಂಗಡಿ ಮಾಲಕರಿಗೆ ಅಂದು ಅಂಗಡಿ ತೆರೆಯದಂತೆ ಸೂಚನೆಯನ್ನು ಜಿಲ್ಲಾಡಳಿತ ರವಾನಿಸಿದೆ.ಪ್ರಧಾನಿಯವರ ಆಗಮನದ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪರಿಪಾಲನೆಗೆ ಜಿಲ್ಲಾಡಳಿತ ಹೆಚ್ಚಿನ ಆದ್ಯತೆ ನೀಡಿದೆ. ಎಲ್ಲಿಯೂ ಯಾವುದೇ ರೀತಿಯಲ್ಲೂ ವ್ಯತ್ಯಾಸ, ಸಮಸ್ಯೆಗಳು […]
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ

ಮುಂಬೈ: ಬಾಲಿವುಡ್ನ ದಂತಕಥೆ ಹಿರಿಯ ನಟ ಧರ್ಮೇಂದ್ರ (89) ಇಂದು ಬೆಳಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿದ್ದ ಅವರ ಸ್ಥಿತಿ ಗಂಭೀರವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಧರ್ಮೇಂದ್ರ ಪತ್ನಿ ಹೇಮಾ ಮಾಲಿನಿ, ಪ್ರಕಾಶ್ ಕೌರ್ ಮಕ್ಕಳಾದ ಮಕ್ಕಳಾದ ಸನ್ನಿ ಡಿಯೋಲ್, ಬಾಬಿ ಡಿಯೋಲ್, ವಿಜೇತಾ, ಅಜೀತಾ, ಇಶಾ ಡಿಯೋಲ್ ಮತ್ತು ಅಹಾನಾ ಡಿಯೋಲ್ ಅವರನ್ನು ಅಗಲಿದ್ದಾರೆ. ಸಲ್ಮಾನ್ ಖಾನ್, ಶಾರುಖ್ ಖಾನ್, ಗೋವಿಂದ, […]
ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆಗೆ ಶರಣು!

ಹೈದರಾಬಾದ್: ಇರುವೆಗಳ ಮೇಲಿನ ಭಯದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಂಗಾರೆಡ್ಡಿ ಜಿಲ್ಲೆಯ ನಿವಾಸಿಯಾಗಿದ್ದ 25 ವರ್ಷದ ಮಹಿಳೆ ಇರುವೆಗಳನ್ನು ಕಂಡರೆ ಭಯಪಡುವ ಮಾನಸಿಕ ಸಮಸ್ಯೆಯಿಂದ (ಮೈರ್ಮೆಕೊಫೋಬಿಯಾ) ಬಾಲ್ಯದಿಂದಲೂ ಬಳಲುತ್ತಿದ್ದರು. 2022ರಲ್ಲಿ ಮದುವೆಯಾಗಿದ್ದ ಅವರಿಗೆ 3 ವರ್ಷದ ಹೆಣ್ಣು ಮಗುವೂ ಇತ್ತು. ನವೆಂಬರ್ 4ರಂದು ಮಹಿಳೆಯು, ಮನೆ ಶುಚಿಗೊಳಿಸಿದ ಬಳಿಕ ಮಗುವನ್ನು ಕರೆದುಕೊಂಡು ಹೋಗುವುದಾಗಿ ತಿಳಿಸಿ ಸಂಬಂಧಿಕರ ಮನೆಯಲ್ಲಿ ಮಗುವನ್ನು ಬಿಟ್ಟು ವಾಪಸಾಗಿದ್ದರು. ಆದರೆ, ಸಂಜೆ ಮಹಿಳೆಯ ಪತಿ ಮನೆಗೆ ಬಂದು ನೋಡುವಷ್ಟರಲ್ಲಿ ಆಕೆ ಮರಣಪತ್ರ ಬರೆದಿಟ್ಟು ನೇಣುಹಾಕಿಕೊಂಡಿದ್ದರು. […]
ಬ್ಯಾಂಕ್ ಖಾತೆ ಮತ್ತು ಲಾಕರ್ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಏನೆಲ್ಲಾ ಬದಲಾವಣೆ, ಹೊಸ ರೂಲ್ಸ್ ಏನು?

ನಮ್ಮ ಬ್ಯಾಂಕ್ ಖಾತೆ ಮತ್ತು ಲಾಕರ್ಗಳಿಗೆ ಸಂಬಂಧಿಸಿದಂತೆ ಒಂದು ದೊಡ್ಡ ಸುದ್ದಿ ಬಂದಿದೆ. ಮುಂದಿನ ತಿಂಗಳು, ಅಂದರೆ ನವೆಂಬರ್ 1ರಿಂದ, ಬ್ಯಾಂಕಿಂಗ್ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ. ಕೇಂದ್ರ ಸರ್ಕಾರವು “ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಕಾಯ್ದೆ, 2025” ಅಡಿಯಲ್ಲಿ ಈ ಹೊಸ ನಿಯಮಗಳನ್ನು ತರಲು ನಿರ್ಧರಿಸಿದೆ. ಖಾತೆಗೆ ನಾಲ್ಕು ನಾಮಿನಿ ಹಾಕಬಹುದು: ಇದುವರೆಗೂ ಬ್ಯಾಂಕ್ ಖಾತೆಗೆ ಕೇವಲ ಒಬ್ಬರ ಹೆಸರನ್ನು ಮಾತ್ರ ನಾಮಿನಿಯಾಗಿ ಸೇರಿಸಲು ಸಾಧ್ಯವಿತ್ತು. ಆದರೆ ಹೊಸ ನಿಯಮದ ಪ್ರಕಾರ, ಈಗಿನಿಂದ ನೀವು ನಿಮ್ಮ […]