ಮಧ್ಯಪ್ರಾಚ್ಯದಲ್ಲಿ ಯುದ್ದದ ಉದ್ವಿಗ್ನತೆ: ಉಡುಪಿ ಧರ್ಮಪ್ರಾಂತ್ಯದಲ್ಲಿ ಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಕೆ

ಉಡುಪಿ: ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ನೀಡದಂತೆ ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರ ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.ಭಾನುವಾರ ಬೆಳಗ್ಗಿನ ಬಲಿಪೂಜೆಯ ವೇಳೆ ಧರ್ಮಪ್ರಾಂತ್ಯ ವ್ಯಾಪ್ತಿಯ ಚರ್ಚುಗಳಲ್ಲಿ ಧರ್ಮಗುರುಗಳು ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಮಾಡಿದರು. ವಿವಿಧ ಚರ್ಚುಗಳಲ್ಲಿ ಬಲಿಪೂಜೆಗೂ ಮುನ್ನ ಪರಮಪ್ರಸಾದದ ಆರಾಧನೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಯುದ್ದದ ಭೀತಿ ಕಡಿಮೆಯಾಗಿ ಮಧ್ಯಪ್ರಾಚ್ಯ […]

ಕಾಫಿಗೂ ತಟ್ಟಿತು ಇರಾನ್-ಇಸ್ರೇಲ್ ಯುದ್ಧದ ಬಿಸಿ: ಜಾಗತಿಕ ಮಟ್ಟದಲ್ಲಿ ದುಬಾರಿಯಾಗಲಿದೆ ಕಾಫಿ! ಕಾಫಿ ಪ್ರಿಯರಿಗೆ ಶಾಕ್

ಮಧ್ಯಪ್ರಾಚ್ಯದಲ್ಲಿ ಉಂಟಾದ ಯುದ್ಧ ತೀವ್ರತೆ ಜಾಗತಿಕ ಮಾರುಕಟ್ಟೆಗಳಲ್ಲಿ ಅನಿಶ್ಚಿತತೆಯನ್ನು ಹೆಚ್ಚಿಸಿದೆ. ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದ ಹಾರ್ಮುಜ್ ಜಲಸಂಧಿಯಲ್ಲಿ ಸಾಗಣೆ ವ್ಯತ್ಯಯ ಉಂಟಾಗಿದೆ. ಈ ಜಲಸಂಧಿ ಜಾಗತಿಕ ತೈಲ ಸರಬರಾಜಿನ ಪ್ರಮುಖ ದ್ವಾರವಾಗಿರುವುದರಿಂದ, ಇಲ್ಲಿ ಉಂಟಾದ ಅಡಚಣೆ ಇಂಧನ ಮಾರುಕಟ್ಟೆಗೂ ಹಾಗೂ ಜಾಗತಿಕ ವ್ಯಾಪಾರಕ್ಕೂ ಹೊಡೆತ ನೀಡಿದೆ. ಇದರಿಂದ ತೈಲ ಮತ್ತು ಅನಿಲದ ಬೆಲೆಗಳು ಏರಿಕೆಯಾಗಿರುವುದರ ಜೊತೆಗೆ, ಕಾಫಿ ಸೇರಿದಂತೆ ಹಲವು ಕೃಷಿ ಉತ್ಪನ್ನಗಳ ದರಗಳಲ್ಲೂ ಗಣನೀಯ ಏರಿಕೆ ಕಂಡುಬಂದಿದೆ. ಸೋಮವಾರದ ವಹಿವಾಟಿನ […]

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕನಾಗಿ ಅಲಿರೆಜಾ ಅರಾಫಿ ನೇಮಕ

ಟೆಹರಾನ್​: ಇಸ್ರೇಲ್​ ಹಾಗೂ ಅಮೆರಿಕದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಖಮೇನಿ ಹತ್ಯೆ ಬೆನ್ನಲ್ಲೇ ಮುಂದಿನ ನಾಯಕ ಯಾರು ಎಂಬ ಪ್ರಶ್ನೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಖಮೇನಿ ಅವರ ಪುತ್ರ ಮೊಜ್ತಬಾ ಖಮೇನಿ ಅಧಿಕಾರಕ್ಕೇರಲಿದ್ದಾರೆ ಎಂಬ ಬಲವಾದ ಊಹಾಪೋಹಗಳ ನಡುವೆಯೂ, ಗಾರ್ಡಿಯನ್ ಕೌನ್ಸಿಲ್‌ನ ಧರ್ಮಗುರು ಅಯಾತೊಲ್ಲಾ ಅಲಿರೆಜಾ ಅರಾಫಿ ಅವರನ್ನು ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕರನ್ನಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯಾನ್‌ ಮತ್ತು ಮುಖ್ಯ ನ್ಯಾಯಮೂರ್ತಿ […]

ಇಸ್ರೇಲ್-ಇರಾನ್ ಸಂಘರ್ಷ: ಒಮಾನ್‌’ನಲ್ಲಿ 15 ಭಾರತೀಯರಿದ್ದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ; ನಾಲ್ವರಿಗೆ ಗಾಯ

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಬೆನ್ನಲ್ಲೇ ಇರಾನ್ ಕೆರಳಿದೆ. ತನ್ನ ಸಂಪೂರ್ಣ ಶಕ್ತಿಯೊಂದಿಗೆ ಪ್ರತಿಕಾರಕ್ಕೆ ಇಳಿದಿರುವ ಇರಾನ್ ಸೇನೆಯು, ಒಮಾನ್‌ನ ಮುಸಂದಮ್ ಪೆನಿನ್ಸುಲಾ ಬಳಿ ಸಂಚರಿಸುತ್ತಿದ್ದ ಪಲಾವ್ ಧ್ವಜದ ‘ಸ್ಕೈಲೈಟ್’ ಎಂಬ ತೈಲ ಟ್ಯಾಂಕರ್ ಅನ್ನು ಗುರಿಯಾಗಿಸಿ ದಾಳಿ ಮಾಡಿದೆ. ಈ ದಾಳಿಯಲ್ಲಿ ಕನಿಷ್ಠ ನಾಲ್ವರು ನಾವಿಕರು ಗಾಯಗೊಂಡಿದ್ದಾರೆ ಎಂದು ಒಮಾನ್‌ನ ಕಡಲ ಭದ್ರತಾ ಕೇಂದ್ರ (MSC) ದೃಢಪಡಿಸಿದೆ. ತೈಲ ಹಡಗಿನಲ್ಲಿ 15 ಭಾರತೀಯರು:ಈ ತೈಲ […]

ಟೆಹ್ರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ; ಇರಾನ್‌ ಸರ್ವೋಚ್ಛ ನಾಯಕ ಅಯತೊಲ್ಲಾ ಖಮೇನಿ ಹತ್ಯೆ.

ಟೆಹ್ರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಹಲವಾರು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ರಾಷ್ಟ್ರದ ಮೇಲೆ ಅಮೆರಿಕ-ಇಸ್ರೇಲಿ ಜಂಟಿ ದಾಳಿಯ ನಂತರ ಖಮೇನಿ ಕೊಲ್ಲಲ್ಪಟ್ಟರು ಎಂದು ಅಮೆರಿಕದ ಹೇಳಿಕೆಯ ನಂತರ ಈ ಘೋಷಣೆ ಹೊರಬಿದ್ದಿದೆ. ಇರಾನ್‌ ಘೋಷಣೆ ಮಾಡುವುದಕ್ಕೂ ಮೊದಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಖಮೇನಿಯನ್ನು ಹೊಡೆದುರುಳಿಸಿದ್ದೇವೆ ಎಂದು ತಿಳಿಸಿದ್ದರು. ಶನಿವಾರ ಬೆಳಿಗ್ಗೆ ಪ್ರಾರಂಭವಾದ ದಾಳಿಯಲ್ಲಿ ಖಮೇನಿ ಅವರ ಮಗಳು, ಮೊಮ್ಮಗಳು, ಸೊಸೆ […]