ಜಮ್ಮು ಮತ್ತು ಕಾಶ್ಮೀರ: ಹಣ್ಣಿನ ತೋಟದಲ್ಲಿ ಅಡಗಿರುವ ಲಷ್ಕರ್-ಎ-ತೊಯ್ಬಾ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೀಮಂದಾರ್–ಸೈದ್ಪೋರಾ ಪ್ರದೇಶದ ದಟ್ಟ ಹಣ್ಣಿನ ತೋಟದಲ್ಲಿ ಅಡಗಿರುವ ಇಬ್ಬರು ಲಷ್ಕರ್-ಎ-ತೊಯ್ಬಾ (LeT) ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ಮುಂದುವರಿದಿದೆ. ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸ್ ಹಾಗೂ ಸಿಆರ್‌ಪಿಎಫ್ ಜಂಟಿಯಾಗಿ ಬೃಹತ್ ಕಾರ್ಯಾಚರಣೆ ನಡೆಸುತ್ತಿದ್ದು, ಉಗ್ರರು ತಪ್ಪಿಸಿಕೊಳ್ಳದಂತೆ ಇಡೀ ಪ್ರದೇಶವನ್ನು ಸುತ್ತುವರಿದಿವೆ. ದಟ್ಟ ತೋಟವನ್ನು ಸಂಪೂರ್ಣವಾಗಿ ಮುತ್ತಿಗೆ ಹಾಕಿರುವ ಪಡೆಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಭದ್ರತಾ ಪಡೆಗಳ ಬಲೆಗೆ ಸಿಲುಕಿರುವ ಉಗ್ರರನ್ನು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮೂಲದ […]

ಮನೆಯಲ್ಲಿ ಚಿನ್ನ ಇಟ್ಟಿದ್ದೀರಾ? ಇನ್ನು ಬಡ್ಡಿಯೂ ಸಿಗಲಿದೆ! ಕೇಂದ್ರದ ಹೊಸ ‘ಗೋಲ್ಡ್ ಮಾನಿಟೈಸೇಷನ್’ ಯೋಜನೆ ಏನು?

ಮನೆಯಲ್ಲಿರುವ ಹಳೆಯ ಚಿನ್ನವನ್ನು ಮಾರದೇ, ಲಾಕರ್‌ನಲ್ಲಿ ಇಡದೇ ಅದರಿಂದಲೇ ಆದಾಯ ಗಳಿಸುವ ಅವಕಾಶವನ್ನು ಕೇಂದ್ರ ಸರ್ಕಾರ ಕಲ್ಪಿಸಲು ಮುಂದಾಗಿದೆ. ‘ಚಿನ್ನ ನಗದೀಕರಣ ಯೋಜನೆ’ (Gold Monetisation Scheme)ಗೆ ಹೊಸ ರೂಪ ನೀಡಲು ಸರ್ಕಾರ ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ. ದೇಶದಲ್ಲಿ ಚಿನ್ನದ ಆಮದು ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗುತ್ತಿದೆ. ಭಾರತೀಯರ ಮನೆಗಳಲ್ಲಿ ಅಪಾರ ಪ್ರಮಾಣದ ಚಿನ್ನ ಬಳಕೆಯಾಗದೆ ಉಳಿದಿದ್ದು, ಅದರ ಒಂದು ಭಾಗವನ್ನು ಆರ್ಥಿಕ ಚಟುವಟಿಕೆಗೆ ತರಲು ಸರ್ಕಾರ […]

ಕಾಲ್ನಡಿಗೆಯಲ್ಲೇ 3,550 ಮೆಟ್ಟಿಲೇರಿ ಹರಕೆ ಪೂರೈಸಿದ 116 ವರ್ಷದ ಲಕ್ಷ್ಮವ್ವ: ಕರ್ನಾಟಕದ ಈ ಛಲಗಾತಿ ಅಜ್ಜಿಯ ಸಾಹಸಕ್ಕೆ ಬೆರಗಾದ ಭಕ್ತರು

ತಿರುಪತಿ: ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು ಕರ್ನಾಟಕ ಮೂಲದ ಶತಾಯುಷಿ ವೃದ್ಧೆ ಲಕ್ಷ್ಮವ್ವ ಅವರು ತಮ್ಮ ಅಪರೂಪದ ಸಾಧನೆಯ ಮೂಲಕ ಸಾಬೀತುಪಡಿಸಿದ್ದಾರೆ. ಕುಟುಂಬ ಸದಸ್ಯರೊಂದಿಗೆ ತಿರುಮಲಕ್ಕೆ ಆಗಮಿಸಿದ ಅವರು, ಅಲಿಪಿರಿ ಮಾರ್ಗದ ಸುಮಾರು 3,550 ಮೆಟ್ಟಿಲುಗಳನ್ನು ಏರಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ತಲುಪಿರುವುದು ಭಕ್ತರಲ್ಲಿ ಆಶ್ಚರ್ಯ ಮೂಡಿಸಿದೆ. ಸ್ಥಳೀಯವಾಗಿ ಭೀಮವ್ವ ಎಂದೂ ಕರೆಯಲ್ಪಡುವ ಲಕ್ಷ್ಮವ್ವ ಅವರಿಗೆ ಕುಟುಂಬಸ್ಥರ ಮಾಹಿತಿ ಪ್ರಕಾರ 116 ವರ್ಷ ವಯಸ್ಸಾಗಿದೆ. ಅವರ ಅಧಿಕೃತ ವಯಸ್ಸಿನ ದಾಖಲೆಗಳು ಲಭ್ಯವಾಗದಿದ್ದರೂ, ಶತಾಯುಷಿಯಾಗಿರುವುದು ವಿಡಿಯೊಗಳಲ್ಲಿ […]

ಸಿನಿಮಾ, ವೆಬ್‌ಸಿರೀಸ್‌ಗಳ ಪೈರಸಿ, ಟೆಲಿಗ್ರಾಂಗೆ ನೋಟಿಸ್ ನೀಡಿದ ಕೇಂದ್ರ!

ನವದೆಹಲಿ: ಸಿನಿಮಾ ಹಾಗೂ ವೆಬ್‌ಸಿರೀಸ್‌ಗಳ ಪೈರಸಿ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಟೆಲಿಗ್ರಾಂಗೆ ನೋಟಿಸ್ ಜಾರಿಗೊಳಿಸಿದ್ದು, ಕಾನೂನುಬಾಹಿರವಾಗಿ ಹಂಚಲಾಗುತ್ತಿರುವ ಸಿನಿಮಾ ಮತ್ತು ಒಟಿಟಿ ಕಂಟೆಂಟ್ ವಿರುದ್ಧ ತಕ್ಷಣ ಕ್ರಮ ಕೈಗೊಂಡು 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ನೋಟಿಸ್ ನೀಡಿದ್ದು, ಟೆಲಿಗ್ರಾಂನ ವಿವಿಧ ಚಾನೆಲ್‌ಗಳು ಹಾಗೂ ಗುಂಪುಗಳ ಮೂಲಕ ಹೊಸ ಸಿನಿಮಾಗಳು, ಒಟಿಟಿ ವೇದಿಕೆಗಳ ವಿಷಯಗಳು ಮತ್ತು ಇತರೆ ಆಡಿಯೋ-ವಿಜುವಲ್ ಕೃತಿಗಳನ್ನು ಅನಧಿಕೃತವಾಗಿ ಹಂಚಲಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದ […]

ರಾಮಮಂದಿರದ ಬಳಿಕ ಇದೀಗ ಬದರಿನಾಥ ಧಾಮದಲ್ಲೂ ದೇಣಿಗೆ ದುರುಪಯೋಗ ಆರೋಪ: ತನಿಖೆಗೆ ಆದೇಶ

ಡೆಹ್ರಾಡೂನ್: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ ಬೆನ್ನಲ್ಲೇ ಇದೀಗ ಉತ್ತರಾಖಂಡದ ಪ್ರಸಿದ್ಧ ಬದರಿನಾಥ ಧಾಮದಲ್ಲೂ ಕಾಣಿಕೆ ದುರುಪಯೋಗದ ಆರೋಪ ಕೇಳಿಬಂದಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆಗೆ ಆದೇಶಿಸಲಾಗಿದೆ. ಬದರಿನಾಥ-ಕೇದರನಾಥ ದೇವಸ್ಥಾನ ಸಮಿತಿ (BKTC) ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು ಮಾಹಿತಿ ನೀಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೇಣಿಗೆ ದುರುಪಯೋಗದ ಆರೋಪಗಳನ್ನು ಸಮಿತಿ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ಪರಿಶೀಲಿಸಲು ತನಿಖಾ ಸಮಿತಿಯನ್ನು ರಚಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಕೆಲ […]