ಭಾರತದಲ್ಲಿ ಹೈ ಅಲರ್ಟ್ ಘೋಷಿಸಿದ ಕೇಂದ್ರ ಆರೋಗ್ಯ ಇಲಾಖೆ: ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರಸ್ ಪತ್ತೆ

ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಔಷಧಗಳು, ಇನ್ಫ್ಲುಯೆನ್ಸಾ ಲಸಿಕೆಗಳು, ಆಕ್ಸಿಜನ್, ಆಯಂಟಿಬಯೊಟಿಕ್, ವೈಯಕ್ತಿಕ ಸುರಕ್ಷತೆಯ ಸಾಧನಗಳು ಇತರೇ ಪರೀಕ್ಷಾ ಕಿಟ್ಗಳಂತಹ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆಯು (Central Health Department) ಭಾರತದಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ತಕ್ಷಣವೇ ಪರಿಶೀಲಿಸುವಂತೆ ರಾಜ್ಯ ಸರ್ಕಾರಗಳಿಗೆ ಖಡಕ್ ಸೂಚನೆ ಕೊಟ್ಟಿದೆ. […]
ಸ್ವದೇಶಿ ನಿರ್ಮಿತ ತೇಜಸ್ ಯುದ್ದ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್ ನಲ್ಲಿ ಹಾರಾಟ ನಡೆಸಿದರು. ಶನಿವಾರ ಬೆಂಗಳೂರು ಮೂಲದ ರಕ್ಷಣಾ ಪಿಎಸ್ಯು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ತೇಜಸ್ನಲ್ಲಿನ ವಿಹಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಅನುಭವವು ನಂಬಲಾಗದಷ್ಟು ಸಮೃದ್ಧವಾಗಿದೆ, ನಮ್ಮ ದೇಶದ ಸ್ಥಳೀಯ ಸಾಮರ್ಥ್ಯಗಳಲ್ಲಿ ನನ್ನ ವಿಶ್ವಾಸವನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಮತ್ತು ನಮ್ಮ ರಾಷ್ಟ್ರೀಯ ಸಾಮರ್ಥ್ಯದ […]
ಉತ್ತರಕಾಶಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಕ್ಕೆ ಮತ್ತೊಂದು ಅಡಚಣೆ: ಲೋಹದ ವಸ್ತುವಿಗೆ ಅಪ್ಪಳಿಸಿದ ಕೊರೆಯುವ ಯಂತ್ರ

ನವದೆಹಲಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಶುಕ್ರವಾರ ಹದಿಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮತ್ತೊಂದು ಹಿನ್ನಡೆ ಎದುರಿಸಿದೆ. ಅಧಿಕಾರಿಗಳು ತಾಂತ್ರಿಕ ಅಡಚಣೆಯನ್ನು ಪರಿಹರಿಸಿ ಕೊರೆಯುವಿಕೆಯನ್ನು ಪುನರಾರಂಭಿಸಿದ ಸ್ವಲ್ಪ ಸಮಯದ ನಂತರ, ಡ್ರಿಲ್ಲಿಂಗ್ ಯಂತ್ರವು ಸಂಜೆ ಲೋಹದ ವಸ್ತುವಿಗೆ ಅಪ್ಪಳಿಸಿದ್ದು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಎರಡು ದಿನಗಳಲ್ಲಿ ಅಂತಹ ಎರಡನೇ ಹಿನ್ನಡೆಯಲ್ಲಿ, 41 ಕಾರ್ಮಿಕರು ಸಿಕ್ಕಿಬಿದ್ದಿರುವ ಉತ್ತರಾಖಂಡದ ಸುರಂಗದಲ್ಲಿ ಶುಕ್ರವಾರ ಸಂಜೆ ಕೊರೆಯುವ ಯಂತ್ರವು ಲೋಹದ ವಸ್ತುವನ್ನು ಎದುರಿಸಿದ ನಂತರ ಕೊರೆಯುವುದನ್ನು ನಿಲ್ಲಿಸಬೇಕಾಯಿತು. […]
ಕಾಂಗ್ರೆಸ್ನಿಂದ ಪೊಲೀಸರಿಗೆ ದೂರು: ರಾಹುಲ್ ಗಾಂಧಿ ವಿರುದ್ಧ “ಆಕ್ಷೇಪಾರ್ಹ” ಪೋಸ್ಟ್

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರೊಬ್ಬರು ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರೊಬ್ಬರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ರಾಜಸ್ಥಾನದಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.
ಕಾರ್ಮಿಕರ ರಕ್ಷಣಾ ಕಾರ್ಯ ಸ್ಥಗಿತ : ಉತ್ತರಕಾಶಿ: ಮತ್ತೊಂದು ತಾಂತ್ರಿಕ ದೋಷ

ಉತ್ತರಕಾಶಿ (ಉತ್ತರಾಖಂಡ): ಗುರುವಾರ ರಾತ್ರಿ ತಾಂತ್ರಿಕ ದೋಷ ಕಾಣಿಸಿಕೊಂಡು ಹಲವು ಗಂಟೆಗಳ ಕಾಲ ಸ್ಥಗಿತಗೊಂಡಿದ್ದ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿಕೊಂಡಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಕ್ಕೆ ತಂಡ ತಯಾರಿ ಮಾಡಿಕೊಂಡಿತ್ತು. ಆದರೆ ಡ್ರಿಲ್ಲಿಂಗ್ ಪ್ರಾರಂಭಿಸುವ ಹೊತ್ತಿಗೆ ಮತ್ತೆ ಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.ದುರಸ್ತಿಗೊಂಡಿದ್ದ ಅಗರ್ ಯಂತ್ರದಲ್ಲಿ ಇದೀಗ ಮತ್ತೊಮ್ಮೆ ತಾಂತ್ರಿಕ ದೋಷ ಎದುರಾಗಿದ್ದು, ಡ್ರಿಲ್ಲಿಂಗ್ ಅನ್ನು ಸ್ಥಗಿತಗೊಳಿಸಿ, ಯಂತ್ರವನ್ನು ಹೊರತರಲಾಗುತ್ತಿದೆ.ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಕಾರ್ಯಾಚರಣೆಯನ್ನು ಪರಿಶೀಲಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಕೊನೆಯ ಹಂತವನ್ನು ತ್ವರಿತ ಗತಿಯಲ್ಲಿ ಹಾಗೂ ಸಂಪೂರ್ಣ […]