ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನುಟರ್ಮಿನಲ್ 2ರಲ್ಲಿ ತಾಂತ್ರಿಕ ಕಾರಣಗಳಿಂದ ಮುಂದೂಡಿಕೆ

ದೇವನಹಳ್ಳಿ : ಅಂತಾರಾಷ್ಟ್ರೀಯ ಕಾರ್ಯಾಚರಣೆ ಸ್ಥಳಾಂತರದ ಅಂತಿಮ ಹಂತದ ಸಿದ್ಧತೆ ಮತ್ತು ಪರೀಕ್ಷಾ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸೂಕ್ತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ನಿಟ್ಟಿನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದ್ದರಿಂದ, ಮುಂದಿನ ಸೂಚನೆ ಪ್ರಕಟ ಆಗುವವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯು ಟರ್ಮಿನಲ್ 1 ರಿಂದಲೇ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಂದು ಟರ್ಮಿನಲ್ 2 ಕ್ಕೆ ಸ್ಥಳಾಂತರಗೊಳ್ಳಬೇಕಿದ್ದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಕಾರಣಾಂತರಗಳಿಂದ ಮುಂದೂಡಿರುವ ಬಗ್ಗೆ ಬಿಐಎಎಲ್ ವಕ್ತಾರರು ಪತ್ರಿಕಾ […]
4 ವಿಮಾನಗಳಿಗೆ ಹಾನಿ : ರಷ್ಯಾದ ವಿಮಾನ ನಿಲ್ದಾಣದ ಮೇಲೆ ಉಕ್ರೇನ್ ಡ್ರೋನ್ ದಾಳಿ

ಕೀವ್ : ಉಕ್ರೇನಿಯನ್ ಡ್ರೋನ್ಗಳು ರಷ್ಯಾದ ಭೂಪ್ರದೇಶಕ್ಕೆ ಬಂದು ಅಪ್ಪಳಿಸಿವೆ.ರಷ್ಯಾದ ಪ್ಸ್ಕೋವ್ ನಗರದ ವಿಮಾನ ನಿಲ್ದಾಣದ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆದಿದ್ದು, 4 ವಿಮಾನಗಳಿಗೆ ಹಾನಿಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಆದರೆ ಈ ಬಗ್ಗೆ ಖಚಿತವಾಗಿಲ್ಲ. ರಷ್ಯಾದ ಬೆಲ್ಗೊರೊಡ್ ಪ್ರದೇಶದ ಗಡಿಯಾಚೆಗೆ ಮತ್ತು ಮಾಸ್ಕೋ ಕಡೆಗೆ ಡ್ರೋನ್ಗಳ ಉಡಾವಣೆ ಮತ್ತು ಆಕ್ರಮಣಗಳು ಅತಿಯಾಗಿದೆ. ಈ ಡ್ರೋನ್ ದಾಳಿಯಿಂದಾಗಿ ನಾಲ್ಕು Il-76 ವಿಮಾನಗಳು ಹಾನಿಗೊಳಗಾಗಿವೆ. ದಿಢೀರ್ […]
ಚೆಸ್ ಚತುರ ಪ್ರಜ್ಞಾನಂದಗೆ ತಮಿಳುನಾಡು ಸರ್ಕಾರದಿಂದ ₹30 ಲಕ್ಷದ ಚೆಕ್ !

ಚೆನ್ನೈ: ಇತ್ತೀಚೆಗೆ ನಡೆದ ಫಿಡೆ ಚೆಸ್ ವಿಶ್ವಕಪ್ ಫೈನಲ್ನಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಪ್ರಜ್ಞಾನಂದ ಅವರು ವಿಶ್ವದ ನಂ.1 ಶ್ರೇಯಾಂಕಿತ ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ವೀರೋಚಿತ ಸೆಣಸಾಟ ನಡೆಸಿ ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದರು.ಅಜರ್ಬೈಜಾನ್ನ ಬಾಕುವಿನಲ್ಲಿ ನಡೆದ ಸ್ಪರ್ಧೆಯಲ್ಲಿ ರನ್ನರ್ ಅಪ್ ಆದ ಪ್ರಗ್ಗುಗೆ ತಮಿಳುನಾಡು ಸರ್ಕಾರದ ವತಿಯಿಂದ ಸ್ಮರಣಿಕೆಯೊಂದಿಗೆ 30 ಲಕ್ಷ ರೂ. ಚೆಕ್ ನೀಡಿ ಗೌರವಿಸಲಾಯಿತು.ಫಿಡೆ ಚೆಸ್ ವಿಶ್ವಕಪ್ ರನ್ನರ್ ಅಪ್ ಪ್ರಜ್ಞಾನಂದ ಅವರಿಂದು ತವರು ರಾಜ್ಯ ತಮಿಳುನಾಡಿಗೆ ಆಗಮಿಸಿದರು. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು […]
CET-NEET 2023 ರ 2 ನೇ ಸುತ್ತಿನ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ, KEA ಕರ್ನಾಟಕ CET, NEET 2023 ರ 2 ನೇ ಸುತ್ತಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರವೇಶಕ್ಕಾಗಿ 2 ನೇ ಸುತ್ತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು KEA ಯ ಅಧಿಕೃತ ಸೈಟ್ kea.kar.nic.in ನಲ್ಲಿ ವೇಳಾಪಟ್ಟಿಯನ್ನು ಪರಿಶೀಲಿಸಬಹುದು. ಅಧಿಕೃತ ವೇಳಾಪಟ್ಟಿಯ ಪ್ರಕಾರ, ಸೀಟ್ ಮ್ಯಾಟ್ರಿಕ್ಸ್ನ ಪ್ರದರ್ಶನವನ್ನು ಆಗಸ್ಟ್ 30, 2023 ರಂದು ಮಾಡಲಾಗುತ್ತದೆ. ಆಯ್ಕೆಗಳ ಮರುಜೋಡಣೆ-ಮಾರ್ಪಡಿಕೆ/ ಅಳಿಸುವಿಕೆ/ ಮರು-ಆರ್ಡರ್ ಆಯ್ಕೆಗಳು ಯಾವುದಾದರೂ ಇದ್ದರೆ ಅರ್ಹ ಅಭ್ಯರ್ಥಿಗಳು ಆಗಸ್ಟ್ 30 ರಿಂದ […]
ರಕ್ಷಾಬಂಧನದಂದು ಗೃಹಿಣಿಯರಿಗೆ ಕೇಂದ್ರದಿಂದ ಭರ್ಜರಿ ಉಡುಗೊರೆ: ಗ್ಯಾಸ್ ಸಿಲಿಂಡರ್ ಬೆಲೆ 200ರೂ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರವು ಮಂಗಳವಾರ ಗೃಹಬಳಕೆಯ ಅಡುಗೆ ಅನಿಲ (LPG) ದ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 200 ರೂ. ಇಳಿಕೆ ಮಾಡಿ ಗೃಹಿಣಿಯರಿಗೆ ರಕ್ಷಾಬಂಧನದ ಉಡುಗೊರೆ ನೀಡಿದೆ. ಬುಧವಾರದಿಂದ ಜಾರಿಗೆ ಬರಲಿರುವ ಈ ನಿರ್ಧಾರವು ದ್ರವೀಕೃತ ಪೆಟ್ರೋಲಿಯಂ ಅನಿಲದ (ಎಲ್ಪಿಜಿ) ಎಲ್ಲಾ 33 ಕೋಟಿ ದೇಶೀಯ ಗ್ರಾಹಕರಿಗೆ ಪ್ರಯೋಜನವಾಗಲಿದೆ. ಉಜ್ವಲ ಯೋಜನೆಯಡಿ ಒಳಪಡುವ ಸುಮಾರು 10 ಕೋಟಿ ಬಡ ಕುಟುಂಬಗಳಿಗೆ, ಪ್ರತಿ ಸಿಲಿಂಡರ್ಗೆ 200 ರೂ.ಗಳ ಸಬ್ಸಿಡಿಗೆ ಹೆಚ್ಚುವರಿಯಾಗಿ ಬೆಲೆ ಕಡಿತಗೊಳಿಸಲಾಗಿದ್ದು, ಇದರ ಪರಿಣಾಮವಾಗಿ ಪ್ರತಿ ಸಿಲಿಂಡರ್ಗೆ […]