3,289 ಕೋಟಿ ಮೌಲ್ಯದ ಆರ್ಡರ್ ಪಡೆದ ಬಿಇಎಲ್: ಚಂದ್ರಯಾನ-3ರ ಎಫೆಕ್ಟ್

ಬೆಂಗಳೂರು: ನವರತ್ನ ರಕ್ಷಣಾ ಸಾರ್ವಜನಿಕ ವಲಯದ ಉದ್ಯಮ ಭಾರತ್ ಎಲೆಕ್ಟ್ರಿಕಲ್ ಲಿಮಿಟೆಡ್ (ಬಿಇಎಲ್) ಈ ವರ್ಷದ ಅಂದರೆ 2023 ಜುಲೈ ಮತ್ತು ಆಗಸ್ಟ್ನಲ್ಲಿ 3,289 ಕೋಟಿ ಮೊತ್ತದ ಹೊಸ ರಕ್ಷಣ ಮತ್ತು ರಕ್ಷಣೆತ್ತರ ಆರ್ಡರ್ ಅನ್ನು ಪಡೆಯುವ ಮೂಲಕ ಸಾಧನೆ ಮಾಡಿದೆ. ಉದ್ಯಮದ ವಿವಿಧ ರೀತಿಯ ಎಲೆಕ್ಟ್ರಾನಿಕ್ ಸಾಧನಗಳ ಪೂರೈಕೆಯನ್ನು ಈ ಆರ್ಡರ್ ಹೊಂದಿದೆ. ಇದರಲ್ಲಿ ಕಡಿಮೆ ಮಟ್ಟದ ಲೈಟ್ ವೈಟ್ ರಾಡಾರ್, ಸೋನಾರ್ಸ್, ಐಎಫ್ಎಫ್ ವ್ಯವಸ್ಥೆ, ಸ್ಟಾಟ್ಕೊಮ್ ವ್ಯವಸ್ಥೆ, ಇಒ/ಐಆರ್ ಪೇಲೋಡ್, ಟಿಆರ್ಎಂ/ಡಿಟಿಆರ್ಎಂಗಳು, ಜಾಮರ್, ಎನಕ್ರಿಪ್ಟರ್ಸ್, […]
ಪುನಲೂರು-ಮದುರೈ ಎಕ್ಸ್ಪ್ರೆಸ್ನಲ್ಲಿ ಗ್ಯಾಸ್ ಸಿಲಿಂಡರ್ ಅಕ್ರಮ ಸಾಗಣೆ: ಬೋಗಿಯಲ್ಲಿ ಹೊತ್ತಿಕೊಂಡ ಬೆಂಕಿ; ಕನಿಷ್ಠ ಎಂಟು ಸಾವು

ಚೆನ್ನೈ: ಇಂದು ಬೆಳಗ್ಗೆ 5:15 ಕ್ಕೆ ಪುನಲೂರು-ಮದುರೈ ಎಕ್ಸ್ಪ್ರೆಸ್ನ ಖಾಸಗಿ/ವೈಯಕ್ತಿಕ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ನಡೆದಾಗ ರೈಲು ಮದುರೈ ಯಾರ್ಡ್ನಲ್ಲಿತ್ತು. ಆ ಕೂಡಲೇ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದು, ಮತ್ತೊಂದು ಬೋಗಿಗೆ ಯಾವುದೇ ಹಾನಿಯಾಗದಂತೆ ತಡೆದಿದ್ದಾರೆ. ಪ್ರಯಾಣಿಕರು ಗ್ಯಾಸ್ ಸಿಲಿಂಡರ್ ಅನ್ನು ಕಳ್ಳಸಾಗಣೆ ಮಾಡುತ್ತಿದ್ದುದೇ ಬೆಂಕಿಗೆ ಕಾರಣ ಎಂದು ದಕ್ಷಿಣ ರೈಲ್ವೆ ಅಧಿಕಾರಿ ತಿಳಿಸಿದ್ದಾರೆ. ಘಟನೆಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದರು ಮತ್ತು ಏಳು ಮಂದಿ ಗಾಯಗೊಂಡಿರುವುದಾಗಿ ಮಾಧ್ಯಮ ವರದಿಯಾಗಿದೆ. #WATCH | Tamil […]
ಪ್ರಧಾನಿ ಮೋದಿ ಇಸ್ರೋ ಭೇಟಿ: ವಿಕ್ರಮ್ ಲ್ಯಾಂಡರ್ನ ಟಚ್ಡೌನ್ ಪಾಯಿಂಟ್ ಗೆ ‘ಶಿವಶಕ್ತಿ’ ಹೆಸರು; ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಣೆ

ಬೆಂಗಳೂರು: ಯಶಸ್ವಿ ಚಂದ್ರಯಾನ-3 (Chandrayan-3) ಮಿಷನ್ ಹಿಂದೆ ಹಗಲಿರುಳೆನ್ನದೆ ದುಡಿದ ಇಸ್ರೋ(ISRO) ತಂಡವನ್ನು ಇಂದು ಬೆಳಿಗ್ಗೆ ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ವಿಕ್ರಮ್ ಲ್ಯಾಂಡರ್ನ ಟಚ್ಡೌನ್ ಪಾಯಿಂಟ್ ಅನ್ನು ಇನ್ನು ಮುಂದೆ ‘ಶಿವಶಕ್ತಿ’ (ShivaShakti) ಎಂದು ಕರೆಯಲಾಗುವುದು ಮತ್ತು ಚಂದ್ರಯಾನ-2 ರ ಚಂದ್ರನ ಲ್ಯಾಂಡಿಂಗ್ ಪಾಯಿಂಟ್ ಅನ್ನು ‘ತಿರಂಗ’ (Tiranga) ಎಂದು ಕರೆಯಲಾಗುವುದು ಎಂದು ಘೋಷಿಸಿದರು. ವಿಕ್ರಮ್ ಲ್ಯಾಂಡರ್ (VIkram Lander) ಚಂದ್ರನ ಮೇಲೆ ಇಳಿದ ಆಗಸ್ಟ್ 23 ಅನ್ನು ‘ರಾಷ್ಟ್ರೀಯ […]
19,300ಕ್ಕಿಂತ ಕೆಳಗಿಳಿದ ನಿಫ್ಟಿ: ಬಿಎಸ್ಇ ಸೆನ್ಸೆಕ್ಸ್ 365 ಪಾಯಿಂಟ್ ಕುಸಿತ

ಮುಂಬೈ : ಭಾರತದ ಷೇರು ಮಾರುಕಟ್ಟೆಗಳು ಇಂದು (ಶುಕ್ರವಾರ) ಇಳಿಕೆಯೊಂದಿಗೆ ವಹಿವಾಟು ಕೊನೆಗೊಳಿಸಿವೆ. ಸೆನ್ಸೆಕ್ಸ್ನಲ್ಲಿ ಲಾರ್ಸೆನ್ ಆಂಡ್ ಟರ್ಬೋ, ಜೆಎಸ್ಡಬ್ಲ್ಯೂ ಸ್ಟೀಲ್, ಇಂಡಸ್ಇಂಡ್ ಬ್ಯಾಂಕ್, ಪವರ್ ಗ್ರಿಡ್, ಐಟಿಸಿ, ಮಹೀಂದ್ರಾ & ಮಹೀಂದ್ರಾ, ಎನ್ಟಿಪಿಸಿ, ಎಚ್ಡಿಎಫ್ಸಿ ಬ್ಯಾಂಕ್, ಐಟಿಸಿ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಟಾಟಾ ಮೋಟಾರ್ಸ್ ಪ್ರಮುಖವಾಗಿ ಕುಸಿತ ಕಂಡವು.ದೇಶೀಯ ಬೆಂಚ್ ಮಾರ್ಕ್ ಬಿಎಸ್ಇ ಸೆನ್ಸೆಕ್ಸ್ 365 ಪಾಯಿಂಟ್ಗಳಷ್ಟು ಕುಸಿದಿದೆ ಮತ್ತು ನಿಫ್ಟಿ ಶುಕ್ರವಾರದ ಅಸ್ಥಿರ ವಹಿವಾಟಿನಲ್ಲಿ 19,300 ಮಟ್ಟಕ್ಕಿಂತ ಕೆಳಗಿಳಿದಿದೆ.ಶುಕ್ರವಾರದ ವಹಿವಾಟಿನಲ್ಲಿ ಭಾರತೀಯ ಷೇರು ಮಾರುಕಟ್ಟೆಗಳು […]
FIDE ಚೆಸ್ ವಿಶ್ವಕಪ್ ನಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ ಆರ್. ಪ್ರಗ್ನಾನಂದ: ಮ್ಯಾಗ್ನಸ್ ಕಾರ್ಲ್ಸೆನ್ ಗೆ ವಿಶ್ವ ಕಪ್ ಕಿರೀಟ

ಬಾಕು: ಅಜರ್ಬೈಜಾನ್ ನಲ್ಲಿ ನಡೆದ FIDE ಚೆಸ್ ವಿಶ್ವಕಪ್ನಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಆರ್ ಪ್ರಗ್ನಾನಂದ ಅವರ ಕನಸಿನ ಓಟಕ್ಕೆ ವಿಶ್ವ ನಂ. 1 ಮ್ಯಾಗ್ನಸ್ ಕಾರ್ಲ್ಸೆನ್ ಕೊನೆ ಹಾಡಿದ್ದಾರೆ. ಫೈನಲ್ ಪಂದ್ಯಗಳಲ್ಲಿ ಡ್ರಾ ಸಾಧಿಸಿದ ಬಳಿಕ ಗುರುವಾರ ನಡೆದ ಟೈ-ಬ್ರೇಕ್ನಲ್ಲಿ 1.5-0.5 ರಿಂದ ಪ್ರಗ್ನಾನಂದನನ್ನು ಸೋಲಿಸಿ ವಿಶ್ವಕಪ್ ಪಟ್ಟ ತನ್ನದಾಗಿಸಿಕೊಂಡಿದ್ದಾರೆ. ಆದಾಗ್ಯೂ, 18 ವರ್ಷದ ಪ್ರಗ್ನಾನಂದ ರನ್ನರ್ ಅಪ್ ಸ್ಥಾನವನ್ನು ಗಳಿಸಿ ಭಾರತೀಯರೆಲ್ಲರೂ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಆರ್. ಪ್ರಗ್ನಾನಂದ ಅವರ ಈ ಸಾಧನೆಗೆ ಪ್ರಧಾನಿ ಮೋದಿ […]