ಚುನಾವಣಾ ಆಯೋಗಕ್ಕೆ ಸಚಿನ್ ತೆಂಡೂಲ್ಕರ್ ‘ರಾಷ್ಟ್ರೀಯ ರಾಯಭಾರಿ’ : ಮತದಾನ ಹೆಚ್ಚಿಸಲು ಕ್ರಮ

ನವದೆಹಲಿ: 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಚಿನ್ ಮತದಾನ ಜಾಗೃತಿ ಮೂಡಿಸಲು ಕೇಂದ್ರ ಚುನಾವಣಾ ಆಯೋಗದೊಂದಿಗೆ ಕೈ ಜೋಡಿಸಿದ್ದಾರೆ. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ದೇಶದ ನಾಗರಿಕರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲಿದ್ದಾರೆ. ‘ಶತಕಗಳ ಶತಕ’ ಗಳಿಸಿದ ಮಹೋನ್ನತ ದಾಖಲೆ ಹೊಂದಿರುವ ಸಚಿನ್, ಮುಂದಿನ ಚುನಾವಣೆಯಲ್ಲಿ ಯುವ ಮತ್ತು ಮೊದಲ ವೋಟರ್ಗಳಿಗೆ ಸ್ಫೂರ್ತಿ ತುಂಬಲಿದ್ದಾರೆ.ಭಾರತ ಕ್ರಿಕೆಟ್ ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್ ಎಂಬುದೊಂದು ದೊಡ್ಡ ಅಧ್ಯಾಯ. ಕೋಟ್ಯಂತರ ಅಭಿಮಾನಿಗಳ ಕಣ್ಮಣಿ. ಸಚಿನ್ ಆಟವನ್ನು ನೋಡಿ ಬೆಳೆದವರು ಇಂದು […]
ಪ್ರಧಾನ ಮಂತ್ರಿ ಕಚೇರಿಯಿಂದ ಉನ್ನತ ಮಟ್ಟದ ಸಭೆ: ಹೊಸ ಕೋವಿಡ್ ಉಪತಳಿ ಪತ್ತೆ

ನವದೆಹಲಿ: ಕೋವಿಡ್ 19 ಬಳಿಕ ಅದರ ಉಪತಳಿಗಳು ಪತ್ತೆಯಾಗುತ್ತಲೇ ಇದೆ.ಇದೀಗ ಸಾರ್ಸ್ ಕೋವ್ 2ನ ಹೊಸ ಉಪತಳಿ ಪತ್ತೆಯಾಗಿದೆ. ಪ್ರಧಾನ ಮಂತ್ರಿ ಅವರ ಪ್ರಧಾನ ಕಾರ್ಯದರ್ಶಿಯಾದ ಪಿಕೆ ಮಿಶ್ರಾ, ನೇತೃತ್ವದಲ್ಲಿ ಸಂಬಂಧಿಸಿದ ಅಧಿಕಾರಿಗಳಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಜಾಗತಿಕ ಮತ್ತು ರಾಷ್ಟ್ರ ಮಟ್ಟದಲ್ಲಿನ ಕೋವಿಡ್ ಪರಿಸ್ಥಿತಿಗಳ ಕುರಿತು ಅವಲೋಕನ ನಡೆಸಲಾಯಿತು. ಇದೇ ವೇಳೆ, ಹೊಸ ಉಪ ತಳಿಯು ಸಾರ್ವಜನಿಕ ಆರೋಗ್ಯದ ಮೇಲೆ ಬೀರುವ ಪರಿಣಾಮ ಕುರಿತು ಚರ್ಚಿಸಲಾಯಿತು.ಬ್ರಿಟನ್, ಯುರೋಪ್ ಸೇರಿದಂತೆ ಹಲವೆಡೆ ಪತ್ತೆಯಾಗಿರುವ ಈ ಹೊಸ […]
ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರ ಆರೋಗ್ಯ ತೊಂದರೆ ಎದುರಾದ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

ನಾಗ್ಪುರ (ಮಹಾರಾಷ್ಟ್ರ): ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರ ಆರೋಗ್ಯ ಹಠಾತ್ ಹದಗೆಟ್ಟು ತೀವ್ರ ತೊಂದರೆ ಎದುರಾದ ಹಿನ್ನೆಲೆಯಲ್ಲಿ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಮುಂಬೈ – ರಾಂಚಿ ಇಂಡಿಗೋ ವಿಮಾನವನ್ನು ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಪ್ರಯಾಣಿಕರೊಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದರಿಂದ ಅವರು ಮೃತಪಟ್ಟಿದ್ದಾರೆ. ಮುಂಬೈನಿಂದ ರಾಂಚಿಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರು ರಕ್ತ ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ತುರ್ತು ಲ್ಯಾಂಡಿಂಗ್ ಅನಿವಾರ್ಯವಾಯಿತು. ಪ್ರಯಾಣಿಕನನ್ನು ದೇವಾನಂದ್ ತಿವಾರಿ ಎಂದು ಗುರುತಿಸಲಾಗಿದ್ದು, […]
ಉತ್ತರಾಖಂಡದಲ್ಲಿ ಭೀಕರ ಅಪಘಾತ : ಕಂದಕಕ್ಕೆ ಉರುಳಿ ಬಿದ್ದ ಯತ್ರಾರ್ಥಿಗಳ ಬಸ್

ಉತ್ತರಕಾಶಿ(ಉತ್ತರಾಖಂಡ): ಇಲ್ಲಿನ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗುಜರಾತ್ನಿಂದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಗಂಗೋತ್ರಿ ಹೆದ್ದಾರಿಯ ಗಂಗ್ನಾನಿ ಎಂಬಲ್ಲಿ ಆಳವಾದ ಕಮರಿಗೆ ಬಿದ್ದಿದೆ. ಬಸ್ ಗಂಗೋತ್ರಿಧಾಮದಿಂದ ಉತ್ತರಕಾಶಿ ಕಡೆಗೆ ಹೋಗುತ್ತಿತ್ತು. ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಇಲಾಖೆ ಖಚಿತಪಡಿಸಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಭಾನುವಾರ ಸಂಜೆ 4:15 ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.ಉತ್ತರಾಖಂಡದಲ್ಲಿ ಖಾಸಗಿ […]
ಅಡೋಬ್ ಸಹ-ಸಂಸ್ಥಾಪಕ ಜಾನ್ ವಾರ್ನಾಕ್ ವಿಧಿವಶ

ಸ್ಯಾನ್ ಫ್ರಾನ್ಸಿಸ್ಕೋ : ಚಾರ್ಲ್ಸ್ ಗೆಶ್ಕೆ ಅವರೊಂದಿಗೆ ಸೇರಿಕೊಂಡು ವಾರ್ನಾಕ್ 1982 ರಲ್ಲಿ ಅಡೋಬ್ ಅನ್ನು ಸಹ-ಸ್ಥಾಪಿಸಿದರು. ಇವರಿಬ್ಬರೂ ಅದಕ್ಕೂ ಮುನ್ನ ಜೆರಾಕ್ಸ್ ಕಂಪನಿಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಇವರು ಮೊದಲಿಗೆ ತಯಾರಿಸಿದ ಅಡೋಬ್ ಸ್ಕ್ರಿಪ್ಟ್ ಎಂಬ ಸಾಫ್ಟವೇರ್ ಡೆಸ್ಕ್ ಟಾಪ್ ಪಬ್ಲಿಶಿಂಗ್ನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಅದ್ಭುತ ತಂತ್ರಜ್ಞಾನವಾಗಿತ್ತು. ವಾರ್ನಾಕ್ 2000 ರವರೆಗೆ ಈ ಕಂಪನಿಯ ಸಿಇಒ ಆಗಿ ಸೇವೆ ಸಲ್ಲಿಸಿದರು ಮತ್ತು ಮಂಡಳಿಯ ಅಧ್ಯಕ್ಷರಾಗಿ ಮುಂದುವರೆದರು. ಸಾಫ್ಟ್ ವೇರ್ ವಲಯದ ದಿಗ್ಗಜ ಕಂಪನಿ […]