ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರ ಆರೋಗ್ಯ ತೊಂದರೆ ಎದುರಾದ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

ನಾಗ್ಪುರ (ಮಹಾರಾಷ್ಟ್ರ): ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರ ಆರೋಗ್ಯ ಹಠಾತ್ ಹದಗೆಟ್ಟು ತೀವ್ರ ತೊಂದರೆ ಎದುರಾದ ಹಿನ್ನೆಲೆಯಲ್ಲಿ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಮುಂಬೈ – ರಾಂಚಿ ಇಂಡಿಗೋ ವಿಮಾನವನ್ನು ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಪ್ರಯಾಣಿಕರೊಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದರಿಂದ ಅವರು ಮೃತಪಟ್ಟಿದ್ದಾರೆ. ಮುಂಬೈನಿಂದ ರಾಂಚಿಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರು ರಕ್ತ ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ತುರ್ತು ಲ್ಯಾಂಡಿಂಗ್ ಅನಿವಾರ್ಯವಾಯಿತು. ಪ್ರಯಾಣಿಕನನ್ನು ದೇವಾನಂದ್ ತಿವಾರಿ ಎಂದು ಗುರುತಿಸಲಾಗಿದ್ದು, […]
ಉತ್ತರಾಖಂಡದಲ್ಲಿ ಭೀಕರ ಅಪಘಾತ : ಕಂದಕಕ್ಕೆ ಉರುಳಿ ಬಿದ್ದ ಯತ್ರಾರ್ಥಿಗಳ ಬಸ್

ಉತ್ತರಕಾಶಿ(ಉತ್ತರಾಖಂಡ): ಇಲ್ಲಿನ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗುಜರಾತ್ನಿಂದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಗಂಗೋತ್ರಿ ಹೆದ್ದಾರಿಯ ಗಂಗ್ನಾನಿ ಎಂಬಲ್ಲಿ ಆಳವಾದ ಕಮರಿಗೆ ಬಿದ್ದಿದೆ. ಬಸ್ ಗಂಗೋತ್ರಿಧಾಮದಿಂದ ಉತ್ತರಕಾಶಿ ಕಡೆಗೆ ಹೋಗುತ್ತಿತ್ತು. ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಇಲಾಖೆ ಖಚಿತಪಡಿಸಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಭಾನುವಾರ ಸಂಜೆ 4:15 ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.ಉತ್ತರಾಖಂಡದಲ್ಲಿ ಖಾಸಗಿ […]
ಅಡೋಬ್ ಸಹ-ಸಂಸ್ಥಾಪಕ ಜಾನ್ ವಾರ್ನಾಕ್ ವಿಧಿವಶ

ಸ್ಯಾನ್ ಫ್ರಾನ್ಸಿಸ್ಕೋ : ಚಾರ್ಲ್ಸ್ ಗೆಶ್ಕೆ ಅವರೊಂದಿಗೆ ಸೇರಿಕೊಂಡು ವಾರ್ನಾಕ್ 1982 ರಲ್ಲಿ ಅಡೋಬ್ ಅನ್ನು ಸಹ-ಸ್ಥಾಪಿಸಿದರು. ಇವರಿಬ್ಬರೂ ಅದಕ್ಕೂ ಮುನ್ನ ಜೆರಾಕ್ಸ್ ಕಂಪನಿಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಇವರು ಮೊದಲಿಗೆ ತಯಾರಿಸಿದ ಅಡೋಬ್ ಸ್ಕ್ರಿಪ್ಟ್ ಎಂಬ ಸಾಫ್ಟವೇರ್ ಡೆಸ್ಕ್ ಟಾಪ್ ಪಬ್ಲಿಶಿಂಗ್ನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಅದ್ಭುತ ತಂತ್ರಜ್ಞಾನವಾಗಿತ್ತು. ವಾರ್ನಾಕ್ 2000 ರವರೆಗೆ ಈ ಕಂಪನಿಯ ಸಿಇಒ ಆಗಿ ಸೇವೆ ಸಲ್ಲಿಸಿದರು ಮತ್ತು ಮಂಡಳಿಯ ಅಧ್ಯಕ್ಷರಾಗಿ ಮುಂದುವರೆದರು. ಸಾಫ್ಟ್ ವೇರ್ ವಲಯದ ದಿಗ್ಗಜ ಕಂಪನಿ […]
ರಾಹುಲ್ ಗಾಂಧಿ ಜಾಲಿ ಬೈಕ್ ರೈಡ್ :ಲೇಹ್ನಿಂದ ಪ್ಯಾಂಗಾಂಗ್ ಸರೋವರದವರೆಗೆ

ಲೇಹ್ (ಲಡಾಖ್): ಬೈಕ್ ರೈಡಿಂಗ್ಗೆ ಪ್ರಸಿದ್ಧಿಯಾಗಿರುವ ಲಡಾಖ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಬೈಕ್ ಓಡಿಸಿ ಗಮನ ಸೆಳೆದರು. ಲಡಾಖ್ ಪ್ರವಾಸದಲ್ಲಿರುವ ಕಾಂಗ್ರೆಸ್ ಸಂಸದ ಕೆಟಿಎಂ 390 ಡ್ಯೂಕ್ ಬೈಕ್ ಅನ್ನು ಸವಾರಿ ಮಾಡಿದರು. ಇದರ ಚಿತ್ರಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಲೇಹ್ನಿಂದ ಪ್ಯಾಂಗಾಂಗ್ ಸರೋವರದವರೆಗೆ ಡ್ಯೂಕ್ ಬೈಕ್ ಓಡಿಸಿದರು. ಭಾನುವಾರ ಪ್ಯಾಂಗಾಂಗ್ ಸರೋವರದಲ್ಲಿ ನಡೆಯುವ ರಾಜೀವ್ ಗಾಂಧಿ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ, ಕಾರ್ಗಿಲ್ಗೆ ಭೇಟಿ ನೀಡಿ […]
‘ಜಿ20 ಡಿಜಿಟಲ್ ಇನೋವೇಶನ್ ಅಲೈಯನ್ಸ್ ಶೃಂಗಸಭೆ : ಭಾರತಕ್ಕೆ ಗೇಮ್ ಚೇಂಜರ್

ಬೆಂಗಳೂರು: ಜಿ20 ಡಿಜಿಟಲ್ ಇನೋವೇಶನ್ ಅಲೈಯನ್ಸ್ ಶೃಂಗಸಭೆ ಭಾರತಕ್ಕೆ ಗೇಮ್ ಚೇಂಜರ್ ಆಗಲಿದೆ. ಬೆಂಗಳೂರಿನ ಅರಮನೆ ಆವರಣದಲ್ಲಿ ನಡೆಯುತ್ತಿರುವ ಜಿ20 ಡಿಜಿಟಲ್ ಇನ್ನೋವೇಶನ್ ಅಲೈಯನ್ಸ್ ಶೃಂಗಸಭೆಯ ಕುರಿತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟಾರ್ಟ್ಅಪ್ ಭಾರತದ ಭವಿಷ್ಯವಾಗಿದೆ. ಹೊಸ ಪೀಳಿಗೆಯು ತಂತ್ರಜ್ಞಾನದ ಸ್ಟಾರ್ಟ್ಅಪ್ಗಳು ಭಾರತವನ್ನು ಮುನ್ನಡೆಸಲಿವೆ. ಅವರಿಗೆ ತಾಂತ್ರಿಕ ಸಹಾಯ ಮತ್ತು ಸರಬರಾಜು ಸರಪಳಿಯನ್ನು ಸರಿಪಡಿಸುವುದು ಮುಖ್ಯವಾಗಿದೆ. ವಾಸ್ತವದಲ್ಲಿ ಸ್ಟಾರ್ಟ್ ಅಪ್ಗಳಿಗೆ ಕನಸುಗಳಿವೆ. ಇದರ ಬಗ್ಗೆ ಕಾಳಜಿ ವಹಿಸುವ ಅಗತ್ಯವಿದೆ. ಇವು ಎಲ್ಲವನ್ನು ಜಿ20 ಡಿಜಿಟಲ್ ಇನ್ನೋವೇಶನ್ ಅಲೈಯನ್ಸ್ […]