ಮಂಡಿ ಕ್ಷೇತ್ರದಿಂದ ಕಂಗನಾ ರಣಾವತ್, ಮೀರತ್ ನಿಂದ ಅರುಣ್ ಗೋವಿಲ್ ಕಣಕ್ಕಿಳಿಸಿದ ಬಿಜೆಪಿ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯ ಇತ್ತೀಚಿನ ಅಭ್ಯರ್ಥಿಗಳ ಪಟ್ಟಿಯಲ್ಲಿ ಜನಪ್ರಿಯ ನಟರಾದ ಕಂಗನಾ ರಣಾವತ್ ಮತ್ತು ಅರುಣ್ ಗೋವಿಲ್ ಕಾಣಿಸಿಕೊಂಡಿದ್ದಾರೆ. ಜನಪ್ರಿಯ ಟಿವಿ ಧಾರಾವಾಹಿ ‘ರಾಮಾಯಣ’ದಲ್ಲಿ ರಾಮನ ಪಾತ್ರವನ್ನು ನಿರ್ವಹಿಸಿದ ಗೋವಿಲ್ ಅವರು ಮೀರತ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಮತ್ತು ಬಾಲಿವುಡ್ ನಟಿ ಕಂಗನಾ ತಮ್ಮ ತವರು ಹಿಮಾಚಲ ಪ್ರದೇಶದ ಮಂಡಿಯಿಂದ ಸ್ಪರ್ಧಿಸಲಿದ್ದಾರೆ. 37 ವರ್ಷದ ನಟಿ, ತಮ್ಮನ್ನು ಮಂಡಿಯಿಂದ ಲೋಕಸಭೆಯ ಅಭ್ಯರ್ಥಿಯಾಗಿ ಘೋಷಿಸಿದ್ದಕ್ಕಾಗಿ ಪಕ್ಷಕ್ಕೆ ಧನ್ಯವಾದ ಅರ್ಪಿಸಿದರು. ಪ್ರಸ್ತುತ ಕ್ಷೇತ್ರವನ್ನು ಕಾಂಗ್ರೆಸ್ ನಾಯಕಿ ಪ್ರತಿಭಾ […]

ರಷ್ಯಾದಲ್ಲಿ ಐಸಿಸ್ ಭಯೋತ್ಪಾದಕ ದಾಳಿ: ಕನಿಷ್ಠ 60 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

ಮಾಸ್ಕೋ: ಇಲ್ಲಿನ ಕ್ರೋಕಸ್ ಸಿಟಿ ಹಾಲ್‌ನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮವೊಂದಕ್ಕೆ ನುಗ್ಗಿದ ಅಪರಿಚಿತ ಶಸ್ತ್ರಧಾರಿಗಳ ಗುಂಪೊಂದು ಏಕಾಏಕಿ ಗುಂಡಿನ ಮಳೆಗರೆದಿದ್ದು, ಈ ಘಟನೆಯಲ್ಲಿ ಕನಿಷ್ಟ 60 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, 100 ಕ್ಕೂ ಅಧಿಕ ಮಂದಿ ತೀವ್ರ ಗಾಯಗೊಂಡಿದ್ದಾರೆ. ಐದು ಮಕ್ಕಳು ಸೇರಿದಂತೆ 115 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ರಷ್ಯಾದ ಆರೋಗ್ಯ ಸಚಿವ ಮಿಖಾಯಿಲ್ ಮುರಾಶ್ಕೊ ಹೇಳಿದ್ದಾರೆ. 110 ವಯಸ್ಕ ರೋಗಿಗಳಲ್ಲಿ 60 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಅವರು […]

IPL-2024: ಚೆನ್ನೈ ಸೂಪರ್ ಕಿಂಗ್ಸ್ ಶುಭಾರಂಭ; ಆರಂಭದಲ್ಲೇ ಎಡವಿದ ಆರ್.ಸಿ.ಬಿ

ಶುಕ್ರವಾರ ಮಾರ್ಚ್ 22 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2024 ರ 17 ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಆರು ವಿಕೆಟ್‌ಗಳಿಂದ ಜಯಗಳಿಸಿತು. ಗೆಲುವಿಗೆ 174 ರನ್‌ಗಳ ಗುರಿಯನ್ನು ಬೆನ್ನತ್ತಿದ ಸೂಪರ್ ಕಿಂಗ್ಸ್‌ನ ಎಲ್ಲಾ ಬ್ಯಾಟ್ಸ್‌ಮನ್‌ಗಳು ರಚಿನ್ ರವೀಂದ್ರ ಜೊತೆಯಾಟ ಆಡಿದರು. ಎಡಗೈ ಆಟಗಾರ ಕ್ವಿ 15 ಎಸೆತಗಳಲ್ಲಿ 37 ರನ್ ಗಳಿಸಿದರು. ತಂಡವು 110ಕ್ಕೆ […]

ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯ ಗೌರವಕ್ಕೆ ಭಾಜನರಾದ ಪ್ರಧಾನಿ ಮೋದಿ

ಥಿಂಪು: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ’ ಗೌರವವನ್ನು ಸ್ವೀಕರಿಸಿದ್ದಾರೆ. ಅವರು ಈ ಗೌರವವನ್ನು ಸ್ವೀಕರಿಸಿದ ಮೊದಲ ವಿದೇಶಿ ಪ್ರಧಾನಿಯಾಗಿದ್ದಾರೆ. ಭಾರತ-ಭೂತಾನ್ ಸಂಬಂಧಗಳ ಬೆಳವಣಿಗೆಗೆ ನೀಡಿದ ಮಹೋನ್ನತ ಕೊಡುಗೆ ಮತ್ತು ಭೂತಾನ್ ರಾಷ್ಟ್ರ ಮತ್ತು ಜನರಿಗೆ ವಿಶಿಷ್ಟ ಸೇವೆಗಾಗಿ ಪ್ರಧಾನಿ ಮೋದಿ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಭೂತಾನ್‌ನಿಂದ ‘ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ನಾನು ಅದನ್ನು 140 ಕೋಟಿ […]

ಅಬಕಾರಿ ನೀತಿ ಹಗರಣ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಜಾರಿ ನಿರ್ದೇಶನಾಲಯ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಕಾರ್ಯ ನಿರ್ವಹಿಸುತ್ತಿರುವಾಲೇ ಬಂಧನಕ್ಕೊಳಗಾದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂಗೆ ರಕ್ಷಣೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು. ಕಳೆದ ಕೆಲವು ದಿನಗಳಿಂದ ಜಾರಿನಿರ್ದೇಶನಾಲಯವು ಬರೋಬ್ಬರಿ 9 ಸಮನ್ಸ್ […]