ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರದಿಂದ ‘ದಸರಾ ಗಿಫ್ಟ್’: ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ? ಹಳೆಯ ದರ ಎಷ್ಟಿತ್ತು? ಇಲ್ಲಿದೆ ಮಾಹಿತಿ.!

ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ‘ದಸರಾ ಗಿಫ್ಟ್‌’ ಕೊಟ್ಟಿದೆ. ಇಂದಿನಿಂದಲೇ ಹೊಸ ಜಿಎಸ್‌ಟಿ ದರ ಜಾರಿಗೆ ಬರಲಿದೆ. ಇದರಿಂದ ಅದೆಷ್ಟೋ ದಿನಬಳಕೆ ವಸ್ತುಗಳ ಬೆಲೆ ಕೈಗೆಟುಕುವ ದರದಲ್ಲಿ ಸಿಗಲಿದೆ. ನಾವು ದಿನನಿತ್ಯ ಬಳಸುವ ಬಹುತೇಕ ವಸ್ತುಗಳ ಬೆಲೆ ಕಡಿಮೆಯಾಗಿದೆ. ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆಯಾಗಿದೆ? ಹಳೆಯ ದರ ಎಷ್ಟಿತ್ತು? ಇಲ್ಲಿದೆ ವಿವರ. ಯಾವ ಉತ್ಪನ್ನಗಳ ಬೆಲೆ ಎಷ್ಟು? * ವಿಕ್ಸ್ ಆಕ್ಷನ್ 500 ಅಡ್ವಾನ್ಸ್‌ & ವಿಕ್ಸ್‌ ಇನ್ಹೆಲರ್‌ ಹೊಸ ದರ […]

ನಿಟ್ಟೆಯಲ್ಲಿ ಸೆ.23 ಮತ್ತು ಸೆ.24 ರಂದು ‘ಎಐಇನ್ನೋವೇಶನ್ 2025 – ಕೋಡ್4ಭಾರತ್’ ಫೈನಲ್ಸ್

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಲುಂಕರ್ ಅವರ ನೇತೃತ್ವದಲ್ಲಿ ಕಿಂಡ್ರೆಲ್ ಹಾಗೂ ಮೈಕ್ರೋಸಾಫ್ಟ್ ಸಂಸ್ಥೆಗಳ ಸಹಯೋಗದೊಂದಿಗೆ 24 ಗಂಟೆಗಳ ಗ್ರ್ಯಾಂಡ್ ಫಿನಾಲೆ – ಕೋಡ್4ಭಾರತ್ ಹ್ಯಾಕಥಾನ್ ನ್ನು ಸೆ.23 ಮತ್ತು ಸೆ.24 ರಂದು ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಕಿಂಡ್ರೆಲ್ ಸಂಸ್ಥೆಯ ಇಂಡಿಯಾ ಡೆಲಿವರಿ ಲೀಡರ್ಶಿಪ್ ಉಪಾಧ್ಯಕ್ಷ ಶಂಕರ ಶ್ರೀನಿವಾಸನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.  ಕಿಂಡ್ರೆಲ್  ಸಂಸ್ಥೆಯ ನಿರ್ದೇಶಕ ಡಾ. ರಾಜ್ ಮೋಹನ್ ಸಿ ಮತ್ತು ಮೈಕ್ರೋಸಾಫ್ಟ್ ನ […]

ಮಗನ ಹುಟ್ಟುಹಬ್ಬದ ಗಿಫ್ಟ್ ವಿಚಾರದ ಜಗಳ, ಭೀಕರ ಕೊಲೆಯಲ್ಲಿ ಅಂತ್ಯ!

ರಾಷ್ಟ್ರ ರಾಜಧಾನಿ ದೆಹಲಿಯ ರೋಹಿಣಿಯಲ್ಲಿ ಮಗನ ಹುಟ್ಟುಹಬ್ಬದ ಕಾರ್ಯಕ್ರಮದ ವೇಳೆ ಕುಟುಂಬದಲ್ಲಿ ಉಡುಗೊರೆಗಳ ವಿಚಾರಕ್ಕೆ ಉಂಟಾದ ಜಗಳ, ಪತ್ನಿ ಮತ್ತು ಅತ್ತೆಯ ಕೊಲೆಯಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆ ಆಗಸ್ಟ್​ 30ರಂದು ನಡೆದಿದೆ. ಹತ್ಯೆಯಾದವರನ್ನು ಕುಸುಮ್​ ಸಿನ್ಹಾ (63) ಮತ್ತು ಆಕೆಯ ಮಗಳು ಪ್ರಿಯಾ ಸೆಹಗಲ್ (34) ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ 3.50ಕ್ಕೆ ಕೆಎನ್‌ಕೆ ಮಾರ್ಗ ಪೊಲೀಸ್ ಠಾಣೆಗೆ ಒಂದು ಕರೆಬಂದಿತು. ಕೊಲೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮನೆಯ ಒಳಗೆ ಹೋಗಿ […]

ಶಿಕ್ಷಕರಿಗೆ ನ್ಯಾಯಯುತ ವೇತನ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ!

ನವದೆಹಲಿ: ಶಿಕ್ಷಕರನ್ನು ಗೌರವದಿಂದ ನಡೆಸಿಕೊಳ್ಳದೇ ಇದ್ದರೆ ಅಥವಾ ಗೌರವಯುತ ವೇತನ ನೀಡದೇ ಇದ್ದರೆ ಅದು ದೇಶವು ಜ್ಞಾನಕ್ಕೆ ನೀಡುವ ಮೌಲ್ಯವನ್ನು ಕಡಿಮೆಗೊಳಿಸಿದಂತೆ ಆಗುತ್ತದೆ. ಅಲ್ಲದೆ ಅದು ಬೌದ್ಧಿಕ ಬಂಡವಾಳ ನಿರ್ಮಿಸುವ ಜವಾಬ್ದಾರಿ ಹೊಂದಿರುವವರ ಪ್ರೇರಣೆಯನ್ನೂ ಹಾಳುಗೆಡವುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುರುಬ್ರಹ್ಮ ಗುರುವಿಷ್ಣು, ಗುರುದೇವೋ ಮಹೇಶ್ವರಃ ಎಂದು ಪಠಿಸುವುದು ಸಾಕಾಗುವುದಿಲ್ಲ. ಈ ಘೋಷಣೆಗೆ ತಕ್ಕಂತೆ ದೇಶವು ಶಿಕ್ಷಕರನ್ನು ನಡೆಸಿಕೊಳ್ಳಬೇಕು’ ಎಂದು ನ್ಯಾಯಮೂರ್ತಿಗಳಾದ ಪಿ.ಎಸ್‌.ನರಸಿಂಹ ಮತ್ತು ಜೊಯಮಲ್ಯ ಬಾಗ್ಚಿ ಅವರ ಪೀಠ ಕಿವಿಮಾತು ಹೇಳಿತು. […]

ಫುಡ್ ಡೆಲಿವರಿಗೂ ಬಂತು‌ 15 ಕಿ.ಮೀ ವೇಗದಲ್ಲಿ ಸಂಚರಿಸುವ ರೋಬೋ ಶ್ವಾನ!

ರೋಬಾಟ್​ಗಳು ಈಗ ಎಲ್ಲಾ ಕ್ಷೇತ್ರಗಳಿಗೂ ಕಾಲಿಡುತ್ತಿದ್ದು, ಹೊಸ ಪ್ರಯೋಗವೊಂದರಲ್ಲಿ ರೋಬೋ ಶ್ವಾನವನ್ನು ಬಳಸಿ ಫುಡ್ ಡೆಲಿವರಿ ಮಾಡುವಲ್ಲಿ ಆಹಾರ ವಿತರಣಾ ಕಂಪನಿ ಯಶಸ್ವಿಯಾಗಿದೆ. ಡಚ್ ಮೂಲದ ಬಹುರಾಷ್ಟ್ರೀಯ ಆಹಾರ ವಿತರಣಾ ಕಂಪನಿ ಜಸ್ಟ್ ಈಟ್ ಟೇಕ್​ಅವೇ ಡಾಟ್ ಕಾಮ್ ಸ್ವಿಟ್ಜರ್​ಲ್ಯಾಂಡ್​ನ ರೋಬೋಟಿಕ್ಸ್ ಕಂಪನಿಯ ಸಹಯೋಗದೊಂದಿಗೆ ಸ್ವಿಟ್ಜರ್​ಲ್ಯಾಂಡ್​ನ ಜ್ಯೂರಿಚ್​ನಲ್ಲಿ ಪ್ರಾಯೋಗಿಕವಾಗಿ ಫುಡ್ ಡೆಲಿವರಿ ಆರಂಭಿಸಿದೆ. ಕೃತಕ ಬುದ್ಧಿಮತ್ತೆಯನ್ನು ಆಧರಿಸಿ ಕಾರ್ಯನಿರ್ವಹಿಸುವ ಈ ರೋಬೋ ಶ್ವಾನಗಳ ಕಾಲುಗಳಿಗೆ ಚಕ್ರ ಅಳವಡಿಸಲಾಗಿದ್ದು, ಇವು ಗಂಟೆಗೆ 15 ಕಿ.ಮೀ. ವೇಗದಲ್ಲಿ ಸಂಚರಿಸುತ್ತವೆ ಮತ್ತು […]