ಸಮುದ್ರದಾಳದಲ್ಲಿ ಹಾರಾಡಿತು ತ್ರಿವರ್ಣ ಧ್ವಜ: ಕೆಚ್ಚೆದೆಯ ಭಾರತೀಯ ಕೋಸ್ಟ್ ಗಾರ್ಡ್ ಗಳಿಂದ ಧ್ವಜವಂದನೆ

ಚೆನ್ನೈ: ಭಾರತದ 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಭಾರತೀಯ ಕೋಸ್ಟ್ ಗಾರ್ಡ್ ಸದಸ್ಯರು ನೀರಿನ ಅಡಿಯಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ವಂದಿಸುವ ಮೂಲಕ ತಮ್ಮ ದೇಶಭಕ್ತಿಯ ಉತ್ಸಾಹವನ್ನು ಪ್ರದರ್ಶಿಸಿದರು. ತಮಿಳುನಾಡಿನ ರಾಮೇಶ್ವರಂ ಬಳಿ ಈ ಘಟನೆ ನಡೆದಿದ್ದು, ಈ ಮಹತ್ವದ ಕೃತ್ಯವನ್ನು ಸೆರೆಹಿಡಿಯುವ ವಿಡಿಯೋ ಆನ್ಲೈನ್ನಲ್ಲಿ ಜನಪ್ರಿಯತೆಯನ್ನು ಗಳಿಸಿದೆ. #WATCH | Underwater hoisting of national flag by Indian Coast Guard personnel near Rameshwaram, Tamil Nadu on Independence Day (Video […]
ಹಿಮಾಚಲ ಪ್ರದೇಶ: ವರುಣ ಪ್ರಕೋಪಕ್ಕೆ ದೇವಭೂಮಿ ತತ್ತರ; ಕನಿಷ್ಠ 66 ಜನ ಬಲಿ

ಶಿಮ್ಲಾ: ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಿರಂತರ ಮಳೆ ಮತ್ತು ಭೂಕುಸಿತದಿಂದ 66 ಜನರು ಸಾವನ್ನಪ್ಪಿದ್ದಾರೆ, ಗಾಯಾಳುಗಳನ್ನು ರಕ್ಷಿಸಲು ಮತ್ತು ಹಲವಾರು ಸ್ಥಳಗಳಲ್ಲಿ ಮನೆ ಕುಸಿತದಿಂದಾಗಿ ದೇಹಗಳನ್ನು ಹೊರತೆಗೆಯಲು ಕಾರ್ಯಾಚರಣೆ ಮುಂದುವರೆದಿದೆ. ಹಿಮಾಚಲ ಪ್ರದೇಶದಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ, ಆಗಸ್ಟ್ 13 ರಂದು ಭಾರೀ ಮಳೆ ಪ್ರಾರಂಭವಾದಾಗಿನಿಂದ 60 ಜನರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಮತ್ತು ಮುಂದಿನ ನಾಲ್ಕು ದಿನಗಳಲ್ಲಿ ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ […]
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 5 ನೇ ಪುಣ್ಯತಿಥಿ: ಗಣ್ಯರಿಂದ ಪುಷ್ಪ ನಮನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಎನ್ಡಿಎ ನಾಯಕರು ಮಾಜಿ ಪ್ರಧಾನಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ 5 ನೇ ಪುಣ್ಯತಿಥಿಯ ಅಂಗವಾಗಿ ಸದೈವ್ ಅಟಲ್ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಿದರು. ಉಪರಾಷ್ಟ್ರಪತಿ ಜಗದೀಪ್ ಧಂಖರ್, ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ರಾಜ್ಯಸಭಾ ಉಪ ಸಭಾಪತಿ ಹರಿವಂಶ್, ಪ್ರಫುಲ್ ಪಟೇಲ್, ಅರ್ಜುನ್ ರಾಮ್ ಮೇಘವಾಲ್, ಕೇಂದ್ರ ಸಚಿವ ಮತ್ತು ಅಪ್ನಾ […]
ಇನ್ನು ಎಂಟು ದಿನ ಬಾಕಿ: ಚಂದ್ರಯಾನ-3 ಕ್ಕೊಂದು ಬಾಹ್ಯಾಕಾಶದ ಪ್ರತಿಸ್ಪರ್ಧಿ ರಶ್ಯಾದ ಲೂನಾ-25!!

ಅನಿರೀಕ್ಷಿತ ಬಾಹ್ಯಾಕಾಶ ಓಟದಲ್ಲಿ, ಭಾರತ ಮತ್ತು ರಷ್ಯಾ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ವಿಶ್ವದ ಪ್ರಥಮ ರಾಷ್ಟ್ರವಾಗಲು ಪೈಪೋಟಿ ನಡೆಸುತ್ತಿವೆ. ರಷ್ಯಾ ಕಳೆದ ವಾರ ಲೂನಾ-25 ಮೂನ್ ಮಿಷನ್ ಅನ್ನು ಪ್ರಾರಂಭಿಸಿದ್ದು, ಇದು ಚಂದ್ರನನ್ನು ಭಾರತದ ಚಂದ್ರಯಾನ -3 ಕ್ಕೂ ಮುಂಚೆ ತಲುಪಬಹುದು ಎಂದು ಅಂದಾಜಿಸಲಾಗಿದೆ. ಚಂದ್ರಯಾನ-3 ರ ನಂತರ ಲೂನಾ-25 ಅನ್ನು ಉಡಾವಣೆ ಮಾಡಲಾಗಿದ್ದರೂ, ಅದು ಎರಡು ದಿನಗಳ ಮುನ್ನವೇ ಚಂದ್ರನ ಮೇಲೆ ಇಳಿಯಬಹುದು ಎನ್ನಲಾಗಿದೆ. ಲೂನಾ -25 ರ ನಿಗದಿತ ಲ್ಯಾಂಡಿಂಗ್ ಆಗಸ್ಟ್ […]
ಸ್ವಾತಂತ್ರ್ಯದ ಮುನ್ನಾ ದಿನ ಪಾಕಿಸ್ತಾನಕ್ಕೆ ಆಘಾತ: ಬಲೂಚಿಸ್ತಾನದಲ್ಲಿ ಚೀನಾ ಇಂಜಿನಿಯರ್ಗಳ ಬೆಂಗಾವಲು ವಾಹನದ ಮೇಲೆ ದಾಳಿ

ಬಲೀಚಿಸ್ತಾನ: ಆದಿತ್ಯವಾರದಂದು ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಚೀನಾದ ಇಂಜಿನಿಯರ್ಗಳ ಬೆಂಗಾವಲು ಪಡೆಯ ಮೇಲೆ ಸಶಸ್ತ್ರ ಬಂಡುಕೋರರು ಭಾನುವಾರ ದಾಳಿ ನಡೆಸಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಪಾಕಿಸ್ತಾನದ ಭದ್ರತಾ ಪಡೆಗಳು ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಂದಿದ್ದಾರೆ. ಗ್ವಾದರ್ನ ಫಕೀರ್ ಸೇತುವೆಯ ಮೇಲೆ ಚೀನಾದ ನಿರ್ಮಾಣ ಕಂಪನಿಯಲ್ಲಿ ಕೆಲಸ ಮಾಡುವ ಇಂಜಿನಿಯರ್ಗಳ ಬೆಂಗಾವಲು ವಾಹನದ ಮೇಲಿನ ದಾಳಿಯಲ್ಲಿ ಇಬ್ಬರು ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ಇತರ ಭಯೋತ್ಪಾದಕರು ಗಾಯಗೊಂಡ ಸ್ಥಿತಿಯಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ ಮತ್ತು […]