ಕಾಶ್ಮೀರದ ನಿವೃತ್ತ ನ್ಯಾಯಮೂರ್ತಿ ನೀಲಕಂಠ ಗಂಜೂ ಹತ್ಯೆ ಪ್ರಕರಣದ ಮರು ತನಿಖೆ

ಶ್ರೀನಗರ: ಮೂರು ದಶಕಗಳ ಹಿಂದೆ ನಿವೃತ್ತ ನ್ಯಾಯಮೂರ್ತಿ ನೀಲಕಂಠ ಗಂಜೂ ಅವರ ಹತ್ಯೆಯ ಹಿಂದಿನ ದೊಡ್ಡ ಕ್ರಿಮಿನಲ್ ಪಿತೂರಿಯನ್ನು ಬಯಲಿಗೆಳೆಯುವ ಸಲುವಾಗಿ ರಾಜ್ಯ ತನಿಖಾ ಸಂಸ್ಥೆ (ಎಸ್‌ಐಎ), ಈ ಕೊಲೆ ಪ್ರಕರಣದ ಸತ್ಯ ಅಥವಾ ಸಂದರ್ಭಗಳ ಪರಿಚಯವಿರುವ ಎಲ್ಲ ವ್ಯಕ್ತಿಗಳಿಗೆ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದೆ. ತತ್‌ಕ್ಷಣದ ಪ್ರಕರಣದ ತನಿಖೆಯ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪ್ರಭಾವ ಬೀರುವ ಘಟನೆಗಳ ಯಾವುದೇ ವಿವರಗಳನ್ನು ಹಂಚಿಕೊಳ್ಳಲು ಮುಂದೆ ಬರುವಂತೆ ಹೇಳಿದೆ. ಅಂತಹ ಎಲ್ಲಾ ವ್ಯಕ್ತಿಗಳ ಗುರುತನ್ನು ಸಂಪೂರ್ಣವಾಗಿ […]

ಹರಿಯಾಣದಲ್ಲಿ ನಡೆದ ಹಿಂಸಾಚಾರ ಪ್ರಕರಣದ ಹಿನ್ನೆಲೆ : 156 ಜನರ ಬಂಧನ

ನುಹ್ (ಹರಿಯಾಣ): ಹಿಂಸಾಚಾರದಲ್ಲಿ ಇದುವರೆಗೆ 6 ಜನರು ಮೃತಪಟ್ಟಿದ್ದು, 88 ಜನ ಗಾಯಗೊಂಡಿರುವುದಾಗಿ ಇಲ್ಲಿನ ಅಧಿಕಾರಿಗಳು ಖತಪಡಿಸಿದ್ದಾರೆ. ಹರಿಯಾಣದ ನುಹ್ ಜಿಲ್ಲೆಯಲ್ಲಿ ವಾರದ ಹಿಂದೆ ನಡೆದ ಹಿಂಸಾಚಾರ ಮತ್ತು ಗಲಭೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 156 ಜನರನ್ನು ಬಂಧಿಸಲಾಗಿದ್ದು 56 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 156 ಜನರನ್ನು ಬಂಧಿಸಲಾಗಿದೆ.ಹಿಂಸಾಚಾರದಲ್ಲಿ ಇದುವರೆಗೆ 6 ಜನರು ಮೃತಪಟ್ಟಿದ್ದು, 88 ಜನ ಗಾಯಗೊಂಡಿರುವುದಾಗಿ ಇಲ್ಲಿನ ಅಧಿಕಾರಿಗಳು ಖತಪಡಿಸಿದ್ದಾರೆ. ಜಿಲ್ಲೆ ಪುನಃ ಸಹಜಸ್ಥಿತಿಗೆ ಬರುತ್ತಿರುವುದರಿಂದ 144 ಜಾರಿಯನ್ನು […]

ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರದ ಅಫಿಡವಿಟ್​ : ಚೀತಾಗಳ ಪ್ರಾಣ ಉಳಿಸಲು ಶತಪ್ರಯತ್ನ

ನವದೆಹಲಿ: ಭಾರತದಲ್ಲಿ ನಶಿಸಿ ಹೋಗಿರುವ ಚೀತಾಗಳ ಮರುಜನ್ಮಕ್ಕೆ ಶತಪ್ರಯತ್ನ ಮಾಡಲಾಗುತ್ತಿದೆ. ಈ ನಡುವೆ ಕಳೆದ 6 ತಿಂಗಳಲ್ಲಿ 6 ಚೀತಾಗಳು ಸಾವನ್ನಪ್ಪಿವೆ. ಆಫ್ರಿಕಾದಿಂದ ಎರವಲು ತಂದಿರುವ ಚೀತಾಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ. ಹೀಗಾಗಿ ಅವುಗಳು ಸಾವನ್ನಪ್ಪುತ್ತಿವೆ ಎಂದು ದೂರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಪಿ.ಎಸ್.ನರಸಿಂಹ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ಪೀಠ, ಈ ಬಗ್ಗೆ ಉತ್ತರ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಹೀಗಾಗಿ ಇಂದು ಕೇಂದ್ರ ಅಫಿಡವಿಟ್​​ ಸಲ್ಲಿಸಿದೆ. ಇಲ್ಲಿಯೇ […]

ಬೆಂಗೇರಿಯಲ್ಲಿ ಸಿದ್ಧವಾಗುತ್ತಿವೆ ಸಾವಿರಾರು ತ್ರಿವರ್ಣ ಧ್ವಜಗಳು : ರಾಷ್ಟ್ರ ಧ್ವಜಗಳಿಗೆ ಭಾರೀ ಬೇಡಿಕೆ

ಹುಬ್ಬಳ್ಳಿ: ರಾಷ್ಟ್ರಧ್ವಜ ತಯಾರಿಕೆಗೆ ಭಾರತೀಯ ಮಾನಕ ಸಂಸ್ಥೆ (ಬಿಐಎಸ್)ಯಿಂದ ಮಾನ್ಯತೆ ಪಡೆದ ದೇಶದ ಏಕೈಕ ಸಂಸ್ಥೆ ಎಂದರೆ ಅದು ಹುಬ್ಬಳ್ಳಿಯ ಬೆಂಗೇರಿಯ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ. ಕೋವಿಡ್ ನಂತರ ಮತ್ತೆ ಇಲ್ಲಿನ ರಾಷ್ಟ್ರಧ್ವಜಗಳಿಗೆ ದೇಶಾದ್ಯಂತ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆ ಸಂಸ್ಥೆಯು ಈ ವರ್ಷ ಮೂರು ಕೋಟಿ ರೂಪಾಯಿ ವಹಿವಾಟು ನಡೆಸುವ ನಿರೀಕ್ಷೆಯನ್ನು ಹೊಂದಿದೆ. ಈ ಹಿಂದಿನ ದಿನಗಳಿಗೆ ಹೋಲಿಕೆ ‌ಮಾಡಿದರೆ ರಾಷ್ಟ್ರಧ್ವಜಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಪ್ರತಿ ವರ್ಷದಿಂದ ವರ್ಷಕ್ಕೆ ಚೇತರಿಕೆಯನ್ನು ಕಂಡಿದೆ. ಕಳೆದ […]

ಚಂದ್ರಯಾನ-3 ಬಾಹ್ಯಾಕಾಶ ನೌಕೆಯಿಂದ ಚಂದ್ರನ ಚಿತ್ರವನ್ನು ಹಂಚಿಕೊಂಡ ಇಸ್ರೋ

ಆಗಸ್ಟ್ 5 ರಂದು ಚಂದ್ರನ ಆರ್ಬಿಟ್ ಅಳವಡಿಕೆಯ (LOI) ಸಮಯದಲ್ಲಿ ಚಂದ್ರಯಾನ-3 ಬಾಹ್ಯಾಕಾಶ ನೌಕೆಯಿಂದ ವೀಕ್ಷಿಸಿದ ಚಂದ್ರನ ಚಿತ್ರವನ್ನು ಇಸ್ರೋ ಹಂಚಿಕೊಂಡಿದೆ. ಶನಿವಾರದಂದು ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಕಕ್ಷೆಯನ್ನು ಪ್ರವೇಶಿಸಿದೆ. https://twitter.com/i/status/1688215948531015681