ವಿಕ್ರಮ್ ಲ್ಯಾಂಡರ್ ನಿಗದಿಯಂತೆಯೇ ಎಲ್ಲ ನಡೆಯಲಿದೆ: ಪ್ಲಾನ್ ಬಿ ಇಲ್ಲ ಇಸ್ರೋ ಸ್ಪಷ್ಟನೆ

ಚಂದ್ರಯಾನ -3 ರ ಯೋಜನೆಯಂತೆಯೇ ಎಲ್ಲವೂ ನಡೆಯಲಿದೆ. ಬುಧವಾರ ನಿಗದಿಯಾದಂತೆ ವಿಕ್ರಮ್ ಚಂದ್ರನ ಅಂಗಳದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲು ಇಸ್ರೋ ಸನ್ನದ್ದವಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವುದೇ ಪ್ಲಾನ್ ಬಿ ಹೊಂದಿಲ್ಲ ಎಂದು ಇಸ್ರೋದ ಉನ್ನತ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.ವಿಕ್ರಂ ಸಾಪ್ಟ್ ಲ್ಯಾಂಡಿಂಗ್ನಲ್ಲಿ ಯಾವುದೇ ಮುಂದೂಡಿಕೆ ಅಥವಾ ಪ್ಲಾನ್ ಬಿ ಪ್ಲಾನ್ ಅನ್ನು ಇಸ್ರೋ ಹೊಂದಿಲ್ಲ ಎಂದು ಈ ಅಧಿಕಾರಿ ಹೇಳಿದ್ದಾರೆ. ” ಆರಂಭದಲ್ಲಿ ಯೋಜಿಸಿದಂತೆ ಬುಧವಾರ ಸಂಜೆ ಲ್ಯಾಂಡಿಂಗ್ ಆಗಲಿದೆ ಎಂದು ಭಾರತೀಯ ಬಾಹ್ಯಾಕಾಶ […]
ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರ ಆ.31 ರಿಂದ ಕಾರ್ಯಾರಂಭ

ದೇವನಹಳ್ಳಿ (ಬೆಂಗಳೂರು ಗ್ರಾ) : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಅನ್ನು ಅತ್ಯಾಧುನಿಕ ತಂತ್ರಜ್ಞಾನದಿಂದ ನಿರ್ಮಾಣ ಮಾಡಲಾಗಿದ್ದು, ಕಳೆದ ಜನವರಿ 15ರಿಂದ ಕೆಲವು ವಿಮಾನಗಳ ಹಾರಾಟ ಮಾತ್ರ ಶುರುವಾಗಿತ್ತು.ಆಗಸ್ಟ್ 31 ರಿಂದ ಕೆಂಪೇಗೌಡ ವಿಮಾನ ನಿಲ್ದಾಣ ಟರ್ಮಿನಲ್ 2ರಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಡೆಯಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.ಆದರೆ ಆಗಸ್ಟ್ 31ರಿಂದ ಹೊಸ ಟರ್ಮಿನಲ್ನಿಂದ ದೇಶೀಯ ಹಾಗೂ ಅಂತಾರಾಷ್ಟ್ರೀಯ ಎಲ್ಲಾ ವಿಮಾನಗಳ ಹಾರಾಟ ನಡೆಯಲಿದೆ. ದೇಶೀಯ ವಿಮಾನಯಾನ ನಡೆಸುವ […]
ಚುನಾವಣಾ ಆಯೋಗಕ್ಕೆ ಸಚಿನ್ ತೆಂಡೂಲ್ಕರ್ ‘ರಾಷ್ಟ್ರೀಯ ರಾಯಭಾರಿ’ : ಮತದಾನ ಹೆಚ್ಚಿಸಲು ಕ್ರಮ

ನವದೆಹಲಿ: 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಚಿನ್ ಮತದಾನ ಜಾಗೃತಿ ಮೂಡಿಸಲು ಕೇಂದ್ರ ಚುನಾವಣಾ ಆಯೋಗದೊಂದಿಗೆ ಕೈ ಜೋಡಿಸಿದ್ದಾರೆ. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ದೇಶದ ನಾಗರಿಕರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲಿದ್ದಾರೆ. ‘ಶತಕಗಳ ಶತಕ’ ಗಳಿಸಿದ ಮಹೋನ್ನತ ದಾಖಲೆ ಹೊಂದಿರುವ ಸಚಿನ್, ಮುಂದಿನ ಚುನಾವಣೆಯಲ್ಲಿ ಯುವ ಮತ್ತು ಮೊದಲ ವೋಟರ್ಗಳಿಗೆ ಸ್ಫೂರ್ತಿ ತುಂಬಲಿದ್ದಾರೆ.ಭಾರತ ಕ್ರಿಕೆಟ್ ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್ ಎಂಬುದೊಂದು ದೊಡ್ಡ ಅಧ್ಯಾಯ. ಕೋಟ್ಯಂತರ ಅಭಿಮಾನಿಗಳ ಕಣ್ಮಣಿ. ಸಚಿನ್ ಆಟವನ್ನು ನೋಡಿ ಬೆಳೆದವರು ಇಂದು […]
ಪ್ರಧಾನ ಮಂತ್ರಿ ಕಚೇರಿಯಿಂದ ಉನ್ನತ ಮಟ್ಟದ ಸಭೆ: ಹೊಸ ಕೋವಿಡ್ ಉಪತಳಿ ಪತ್ತೆ

ನವದೆಹಲಿ: ಕೋವಿಡ್ 19 ಬಳಿಕ ಅದರ ಉಪತಳಿಗಳು ಪತ್ತೆಯಾಗುತ್ತಲೇ ಇದೆ.ಇದೀಗ ಸಾರ್ಸ್ ಕೋವ್ 2ನ ಹೊಸ ಉಪತಳಿ ಪತ್ತೆಯಾಗಿದೆ. ಪ್ರಧಾನ ಮಂತ್ರಿ ಅವರ ಪ್ರಧಾನ ಕಾರ್ಯದರ್ಶಿಯಾದ ಪಿಕೆ ಮಿಶ್ರಾ, ನೇತೃತ್ವದಲ್ಲಿ ಸಂಬಂಧಿಸಿದ ಅಧಿಕಾರಿಗಳಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಜಾಗತಿಕ ಮತ್ತು ರಾಷ್ಟ್ರ ಮಟ್ಟದಲ್ಲಿನ ಕೋವಿಡ್ ಪರಿಸ್ಥಿತಿಗಳ ಕುರಿತು ಅವಲೋಕನ ನಡೆಸಲಾಯಿತು. ಇದೇ ವೇಳೆ, ಹೊಸ ಉಪ ತಳಿಯು ಸಾರ್ವಜನಿಕ ಆರೋಗ್ಯದ ಮೇಲೆ ಬೀರುವ ಪರಿಣಾಮ ಕುರಿತು ಚರ್ಚಿಸಲಾಯಿತು.ಬ್ರಿಟನ್, ಯುರೋಪ್ ಸೇರಿದಂತೆ ಹಲವೆಡೆ ಪತ್ತೆಯಾಗಿರುವ ಈ ಹೊಸ […]
ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರ ಆರೋಗ್ಯ ತೊಂದರೆ ಎದುರಾದ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

ನಾಗ್ಪುರ (ಮಹಾರಾಷ್ಟ್ರ): ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರ ಆರೋಗ್ಯ ಹಠಾತ್ ಹದಗೆಟ್ಟು ತೀವ್ರ ತೊಂದರೆ ಎದುರಾದ ಹಿನ್ನೆಲೆಯಲ್ಲಿ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಮುಂಬೈ – ರಾಂಚಿ ಇಂಡಿಗೋ ವಿಮಾನವನ್ನು ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಪ್ರಯಾಣಿಕರೊಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದರಿಂದ ಅವರು ಮೃತಪಟ್ಟಿದ್ದಾರೆ. ಮುಂಬೈನಿಂದ ರಾಂಚಿಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರು ರಕ್ತ ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ತುರ್ತು ಲ್ಯಾಂಡಿಂಗ್ ಅನಿವಾರ್ಯವಾಯಿತು. ಪ್ರಯಾಣಿಕನನ್ನು ದೇವಾನಂದ್ ತಿವಾರಿ ಎಂದು ಗುರುತಿಸಲಾಗಿದ್ದು, […]