ಲಾಭ 2 ಕೋಟಿ ರೂ. ,Zomato ಆದಾಯ 2,416 ಕೋಟಿ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಕಂಪನಿಯು 2 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, 2,416 ಕೋಟಿ ರೂಪಾಯಿ ಆದಾಯ ಬಂದಿದೆ ಎಂದು Zomato ಹೇಳಿಕೊಂಡಿದೆ.ಆದಾಯವು ಹಿಂದಿನ ವರ್ಷಕ್ಕಿಂತ ಶೇಕಡಾ 70.9 ರಷ್ಟು ಹೆಚ್ಚಾಗಿದೆ. ಹಣಕಾಸು ವರ್ಷ 2024 ರಲ್ಲಿ ತ್ರೈಮಾಸಿಕ ನಿವ್ವಳ ಲಾಭ ಗಳಿಸುವ ಬಗ್ಗೆ ಜೊಮ್ಯಾಟೊ ಆಶಾವಾದಿಯಾಗಿದೆ. ಕಂಪನಿಯು ತನ್ನ ಗೆಲುವಿನ ಸರಣಿಯನ್ನು ಮುಂದುವರಿಸಲು ಆಶಿಸುತ್ತಿದೆ. “…ನಮ್ಮ ವ್ಯವಹಾರವು ಮುಂದೆ ಲಾಭದಾಯಕವಾಗಿ ಮುಂದುವರಿಯಲಿದೆ ಎಂದು ನಾವು ನಿರೀಕ್ಷಿಸುತ್ತೇವೆ. ನಾವು ಕನಿಷ್ಠ ಮುಂದಿನ […]

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಮೊದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು. ಸಿದ್ದರಾಮಯ್ಯ ಅವರು ಮರದಲ್ಲಿ ತಯಾರಿಸಿದ ಆನೆಯ ವಿಗ್ರಹ ಮತ್ತು ಹಾರವನ್ನು ಪ್ರಧಾನಿ ಮೋದಿ ಅವರಿಗೆ ನೀಡಿದರು. ಪಿಎಂಒ ಟ್ವೀಟ್ ಮಾಡಿರುವ ಚಿತ್ರದಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕದ ಸಾಂಪ್ರದಾಯಿಕ ಪೇಟ ಮತ್ತು ಶಾಲನ್ನು ತೊಟ್ಟಿದ್ದಾರೆ. ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ […]

ಕುನೊ ಉದ್ಯಾನವನದಲ್ಲಿ ಮೃತ ಚೀತಾಗಳ ಸಂಖ್ಯೆ 9ಕ್ಕೆ ಏರಿಕೆ: ‘ಧಾತ್ರಿ’ ಹೆಣ್ಣು ಚೀತಾ ಸಾವು

ಭೋಪಾಲ್ (ಮಧ್ಯಪ್ರದೇಶ):ಚೀತಾ ಯೋಜನೆಯಡಿಯಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಎರಡು ಬ್ಯಾಚ್‌ಗಳಲ್ಲಿ ಒಟ್ಟು 20 ಚೀತಾಗಳನ್ನು ತರಿಸಿಕೊಳ್ಳಲಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ ಐದು ಹೆಣ್ಣು ಮತ್ತು ಮೂರು ಗಂಡು ಸೇರಿ ಎಂಟು ಚೀತಾಗಳು ಹಾಗೂ ಈ ವರ್ಷದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಸ್ಥಳಾಂತರ ಮಾಡಲಾಗಿದೆ. ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಚೀತಾಗಳನ್ನು ಇರಿಸಲಾಗಿದೆ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿದೆ. ಇದರೊಂದಿಗೆ ಮಾರ್ಚ್‌ ತಿಂಗಳಿಂದ ಇದುವರೆಗೆ ಮೃತಪಟ್ಟ ಚೀತಾಗಳ […]

ಭೂಮಿಯ ಕಕ್ಷೆ ತೊರೆದು ಚಂದ್ರನ ಕಕ್ಷೆಗೆ ಜಿಗಿದ ಚಂದ್ರಯಾನ: ಮುಂದಿನ ನಿಲ್ದಾಣ ಚಂದ್ರನ ಅಂಗಳ

ಶ್ರೀಹರಿಕೋಟಾ: ಇಲ್ಲಿನ ಉಪಗ್ರಹ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾದ ಹದಿನೈದು ದಿನಗಳ ನಂತರ, ಚಂದ್ರಯಾನ -3 ಭೂಮಿಯ ಸುತ್ತ ತನ್ನ ಕಕ್ಷೆಯನ್ನು ಪೂರ್ಣಗೊಳಿಸಿದೆ ಮತ್ತು ಮಿಷನ್‌ನ ಮುಂದಿನ ಹಂತಕ್ಕೆ ಚಂದ್ರನ ಕಡೆಗೆ ಹೊರಟಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ತಡರಾತ್ರಿ ಘೋಷಿಸಿದೆ. ISTRAC ನಲ್ಲಿ ನಡೆಸಿದ ಯಶಸ್ವಿ ಪೆರಿಜಿ-ಫೈರಿಂಗ್, ಇಸ್ರೋ(ISRO) ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್‌ಲೂನಾರ್ ಕಕ್ಷೆಗೆ ನೂಕಿದೆ. ಇನ್ನು ಮುಂದಿನ ನಿಲ್ದಾಣ ಚಂದ್ರ. ಇದು ಚಂದ್ರನತ್ತ ಆಗಮಿಸುತ್ತಿದ್ದಂತೆ, ಚಂದ್ರ-ಕಕ್ಷೆಯ ಒಳಸೇರಿಸುವಿಕೆಯನ್ನು (LOI) ಆಗಸ್ಟ್ […]

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇಂದು ಕೊನೆ ದಿನ: ದಾಖಲೆಯ 6 ಕೋಟಿಗೂ ಹೆಚ್ಚು ಐಟಿಆರ್ ಸಲ್ಲಿಕೆ

ನವದೆಹಲಿ: ಹಣಕಾಸು ವರ್ಷ 2022-23ಕ್ಕೆ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸಲು ಜುಲೈ 31 ಕೊನೆ ದಿನವಾಗಿದ್ದು ಮತ್ತು ಗಡು ವಿಸ್ತರಣೆಯಾಗುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸುಳಿವು ನೀಡಲಾಗಿಲ್ಲ. ಆದಾಯ ತೆರಿಗೆ ಇಲಾಖೆಯ ಮಾಹಿತಿ ಪ್ರಕಾರ, ಇದುವರೆಗೆ 6 ಕೋಟಿಗೂ ಹೆಚ್ಚು ಐಟಿಆರ್ ದಾಖಲಾಗಿದೆ. ಭಾನುವಾರದಂದು ಸರಿ ಸುಮಾರು 27 ಲಕ್ಷ ಐಟಿಆರ್ ಗಳನ್ನು ಫೈಲ್ ಮಾಡಲಾಗಿದೆ. ಐಟಿಆರ್ ಫೈಲಿಂಗ್, ತೆರಿಗೆ ಪಾವತಿಗಳು ಮತ್ತು ಸಂಬಂಧಿತ ಸೇವೆಗಳಲ್ಲಿ ತೆರಿಗೆದಾರರಿಗೆ ಸಹಾಯ ಮಾಡಲು ಅದರ ಹೆಲ್ಪ್‌ಡೆಸ್ಕ್ 24×7 […]