ಕುನೊ ಉದ್ಯಾನವನದಲ್ಲಿ ಮೃತ ಚೀತಾಗಳ ಸಂಖ್ಯೆ 9ಕ್ಕೆ ಏರಿಕೆ: ‘ಧಾತ್ರಿ’ ಹೆಣ್ಣು ಚೀತಾ ಸಾವು

ಭೋಪಾಲ್ (ಮಧ್ಯಪ್ರದೇಶ):ಚೀತಾ ಯೋಜನೆಯಡಿಯಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಎರಡು ಬ್ಯಾಚ್‌ಗಳಲ್ಲಿ ಒಟ್ಟು 20 ಚೀತಾಗಳನ್ನು ತರಿಸಿಕೊಳ್ಳಲಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ ಐದು ಹೆಣ್ಣು ಮತ್ತು ಮೂರು ಗಂಡು ಸೇರಿ ಎಂಟು ಚೀತಾಗಳು ಹಾಗೂ ಈ ವರ್ಷದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಸ್ಥಳಾಂತರ ಮಾಡಲಾಗಿದೆ. ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಚೀತಾಗಳನ್ನು ಇರಿಸಲಾಗಿದೆ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿದೆ. ಇದರೊಂದಿಗೆ ಮಾರ್ಚ್‌ ತಿಂಗಳಿಂದ ಇದುವರೆಗೆ ಮೃತಪಟ್ಟ ಚೀತಾಗಳ […]

ಭೂಮಿಯ ಕಕ್ಷೆ ತೊರೆದು ಚಂದ್ರನ ಕಕ್ಷೆಗೆ ಜಿಗಿದ ಚಂದ್ರಯಾನ: ಮುಂದಿನ ನಿಲ್ದಾಣ ಚಂದ್ರನ ಅಂಗಳ

ಶ್ರೀಹರಿಕೋಟಾ: ಇಲ್ಲಿನ ಉಪಗ್ರಹ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾದ ಹದಿನೈದು ದಿನಗಳ ನಂತರ, ಚಂದ್ರಯಾನ -3 ಭೂಮಿಯ ಸುತ್ತ ತನ್ನ ಕಕ್ಷೆಯನ್ನು ಪೂರ್ಣಗೊಳಿಸಿದೆ ಮತ್ತು ಮಿಷನ್‌ನ ಮುಂದಿನ ಹಂತಕ್ಕೆ ಚಂದ್ರನ ಕಡೆಗೆ ಹೊರಟಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ತಡರಾತ್ರಿ ಘೋಷಿಸಿದೆ. ISTRAC ನಲ್ಲಿ ನಡೆಸಿದ ಯಶಸ್ವಿ ಪೆರಿಜಿ-ಫೈರಿಂಗ್, ಇಸ್ರೋ(ISRO) ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್‌ಲೂನಾರ್ ಕಕ್ಷೆಗೆ ನೂಕಿದೆ. ಇನ್ನು ಮುಂದಿನ ನಿಲ್ದಾಣ ಚಂದ್ರ. ಇದು ಚಂದ್ರನತ್ತ ಆಗಮಿಸುತ್ತಿದ್ದಂತೆ, ಚಂದ್ರ-ಕಕ್ಷೆಯ ಒಳಸೇರಿಸುವಿಕೆಯನ್ನು (LOI) ಆಗಸ್ಟ್ […]

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇಂದು ಕೊನೆ ದಿನ: ದಾಖಲೆಯ 6 ಕೋಟಿಗೂ ಹೆಚ್ಚು ಐಟಿಆರ್ ಸಲ್ಲಿಕೆ

ನವದೆಹಲಿ: ಹಣಕಾಸು ವರ್ಷ 2022-23ಕ್ಕೆ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸಲು ಜುಲೈ 31 ಕೊನೆ ದಿನವಾಗಿದ್ದು ಮತ್ತು ಗಡು ವಿಸ್ತರಣೆಯಾಗುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸುಳಿವು ನೀಡಲಾಗಿಲ್ಲ. ಆದಾಯ ತೆರಿಗೆ ಇಲಾಖೆಯ ಮಾಹಿತಿ ಪ್ರಕಾರ, ಇದುವರೆಗೆ 6 ಕೋಟಿಗೂ ಹೆಚ್ಚು ಐಟಿಆರ್ ದಾಖಲಾಗಿದೆ. ಭಾನುವಾರದಂದು ಸರಿ ಸುಮಾರು 27 ಲಕ್ಷ ಐಟಿಆರ್ ಗಳನ್ನು ಫೈಲ್ ಮಾಡಲಾಗಿದೆ. ಐಟಿಆರ್ ಫೈಲಿಂಗ್, ತೆರಿಗೆ ಪಾವತಿಗಳು ಮತ್ತು ಸಂಬಂಧಿತ ಸೇವೆಗಳಲ್ಲಿ ತೆರಿಗೆದಾರರಿಗೆ ಸಹಾಯ ಮಾಡಲು ಅದರ ಹೆಲ್ಪ್‌ಡೆಸ್ಕ್ 24×7 […]

ಮುಂಬೈ: ಚಲಿಸುತ್ತಿದ್ದ ರೈಲಿನಲ್ಲಿ ನಾಲ್ವರನ್ನು ಗುಂಡಿಕ್ಕಿ ಕೊಂದ ರೈಲ್ವೇ ರಕ್ಷಣಾ ಪಡೆ ಕಾನ್‌ಸ್ಟೆಬಲ್

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ಚಲಿಸುತ್ತಿದ್ದ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಕಾನ್‌ಸ್ಟೆಬಲ್ ಸೋಮವಾರ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಳಗಿನ ಜಾವ 5 ಗಂಟೆಯ ನಂತರ, ಕಾನ್ಸ್‌ಟೇಬಲ್ ತನ್ನ ಸ್ವಯಂಚಾಲಿತ ಆಯುಧದಿಂದ ಗುಂಡು ಹಾರಿಸಿ ರೈಲಿನಲ್ಲಿದ್ದ ಆರ್‌ಪಿಎಫ್ ಎಎಸ್‌ಐ ಮತ್ತು ಇತರ ಮೂವರು ಪ್ರಯಾಣಿಕರನ್ನು ಕೊಂದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪಾಲ್ಘರ್ ಮುಂಬೈನಿಂದ ಸುಮಾರು 100 ಕಿಮೀ ದೂರದಲ್ಲಿದೆ. […]

ರಾಜಸ್ಥಾನ, ಮಧ್ಯಪ್ರದೇಶ, ಉತ್ತರಪ್ರದೇಶದಲ್ಲಿ ಭಾರತದ 486 ಅತ್ಯಮೂಲ್ಯ ಪುರಾತನ ವಸ್ತುಗಳು ಕಳವು

ನವದೆಹಲಿ: ಕಳುವಾದ ಪುರಾತನ ವಸ್ತುಗಳನ್ನು ಮರಳಿ ದೇಶಕ್ಕೆ ತರುವ ಪ್ರಯತ್ನದ ನಡುವೆ ಇನ್ನೂ 486 ಐತಿಹಾಸಿಕ ವಸ್ತುಗಳು ಮಾಯವಾಗಿವೆ ಎಂಬ ಅಚ್ಚರಿಯ ಅಂಶ ಹೊರಬಿದ್ದಿದೆ. ಅದರಲ್ಲೂ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದಲ್ಲಿ ಹೆಚ್ಚಿನ ಪುರಾತನ ವಸ್ತುಗಳು ಕಾಣೆಯಾಗಿವೆ ಎಂದು ಭಾರತದ ಪುರಾತತ್ವ ಸರ್ವೇಕ್ಷಣಾ ಇಲಾಖೆ ನೀಡಿದ ಅಂಕಿಅಂಶದಲ್ಲಿ ಗೊತ್ತಾಗಿದೆ.ಭಾರತ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ರಾಷ್ಟ್ರ. ದೇಶದ ಐತಿಹ್ಯವನ್ನು ಹೇಳುವ ಅತ್ಯಮೂಲ್ಯ ಪುರಾತನ ವಸ್ತುಗಳು ಕಳ್ಳತನವಾಗಿದ್ದು, ಅವುಗಳನ್ನು ಮರಳಿ ಪಡೆಯವ ಪ್ರಕ್ರಿಯೆ ನಡೆಯುತ್ತಿದೆ. ಆದಾಗ್ಯೂ, ಇನ್ನೂ 486 ಅತ್ಯಮೂಲ್ಯ […]