ರೈಲಿನಲ್ಲಿ ಪ್ರಯಾಣಿಸಿ ರಾಹುಲ್ ಗಾಂಧಿ ಘೋಷಣೆ : ‘ನಾವು ಅಧಿಕಾರಕ್ಕೆ ಬಂದರೆ ಜಾತಿ ಸಮೀಕ್ಷೆ ಖಂಡಿತ’

ನವದೆಹಲಿ: ಛತ್ತೀಸ್ಗಢ ವಿಧಾನಸಭೆ ಚುನಾವಣೆ ಶೀಘ್ರವೇ ನಡೆಯಲಿದ್ದು, ಪಕ್ಷದ ನಾಯಕ ರಾಹುಲ್ ಗಾಂಧಿ ಬಿಲಾಸ್ಪುರದಲ್ಲಿ ಪ್ರಚಾರ ಕಾರ್ಯ ಮಾಡಿದರು. ಜಾತಿ ಗಣತಿ ವಿಚಾರಕ್ಕೆ ಕೇಂದ್ರ ಸರ್ಕಾರ ಮತ್ತು ವಿಪಕ್ಷಗಳ ಮಧ್ಯೆ ಆಗಾಗ್ಗೆ ವಾಗ್ವಾದ ನಡೆಯುತ್ತಿರುತ್ತದೆ. ಅದೇ ವಿಚಾರವನ್ನು ಮತ್ತೆ ಪ್ರಸ್ತಾಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ, ಜಾತಿ ಗಣತಿಯನ್ನು ಮಾಡಿಸಿ, ಅದರ ವರದಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಘೋಷಣೆ ಮಾಡಿದರು. . ಛತ್ತೀಸ್ಗಢದ ಬಿಲಾಸ್ಪುರದಲ್ಲಿ ಸೋಮವಾರ ಆಯೋಜಿಸಿದ್ದ ‘ಆವಾಸ್ ನ್ಯಾಯ ಸಮ್ಮೇಳನ’ದಲ್ಲಿ […]
₹60,000 ಕೋಟಿ ‘ಗೃಹ ಸಾಲ ಸಬ್ಸಿಡಿ ಯೋಜನೆ’ಗೆ ಸರ್ಕಾರ ಗ್ರೀನ್ ಸಿಗ್ನಲ್: ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ : ಕಳೆದ ತಿಂಗಳು, ಚುನಾವಣೆಗೆ ಮುಂಚಿತವಾಗಿ ಹಣದುಬ್ಬರವನ್ನ ನಿಯಂತ್ರಿಸಲು ಸರ್ಕಾರವು ಕುಟುಂಬಗಳಿಗೆ ಅಡುಗೆ ಅನಿಲ ಬೆಲೆಯನ್ನ ಸುಮಾರು 18 ಪ್ರತಿಶತದಷ್ಟು ಕಡಿತಗೊಳಿಸಿತು.ಈ ವರ್ಷದ ಕೊನೆಯಲ್ಲಿ ಪ್ರಮುಖ ರಾಜ್ಯ ಚುನಾವಣೆಗಳು ಮತ್ತು 2024ರ ಮಧ್ಯದಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಬ್ಯಾಂಕುಗಳು ಒಂದೆರಡು ತಿಂಗಳಲ್ಲಿ ಈ ಯೋಜನೆಯನ್ನ ಹೊರತರುವ ಸಾಧ್ಯತೆಯಿದೆ. ಮುಂದಿನ ಐದು ವರ್ಷಗಳಲ್ಲಿ ಸಣ್ಣ ನಗರ ವಸತಿಗಳಿಗೆ ಸಬ್ಸಿಡಿ ಸಾಲಗಳನ್ನ ಒದಗಿಸಲು 60,000 ಕೋಟಿ (7.2 ಬಿಲಿಯನ್ ಡಾಲರ್) ಖರ್ಚು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ […]
ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ: ಹೈದರಾಬಾದ್-ಬೆಂಗಳೂರು ಮಾರ್ಗಕ್ಕೂ ರೈಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಈ ರೈಲುಗಳ ಪ್ರಾರಂಭವು 11 ರಾಜ್ಯಗಳ ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುತ್ತದೆ. ಪ್ರಧಾನಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ಇವು ವಂದೇ ಭಾರತ್ ರೈಲುಗಳ ಪ್ರಾರಂಭದಿಂದ ಪ್ರಯೋಜನ ಪಡೆಯುವ ರಾಜ್ಯಗಳು. ಈ ವಂದೇ […]
ಎನ್ಐಎ : ಖಲಿಸ್ತಾನಿ ಉಗ್ರ ಪನ್ನುಗೆ ಸೇರಿದ ಕೃಷಿ ಭೂಮಿ, ಮನೆ ಮುಟ್ಟುಗೋಲು

ಚಂಡೀಗಢ (ಪಂಜಾಬ್): ಖಲಿಸ್ತಾನ ಪರ ನಾಯಕ, ನಿಷೇಧಿತ ಸಿಖ್ ಫಾರ್ ಜಸ್ಟಿಸ್ (ಎಸ್ಎಫ್ಜೆ) ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುವಿಗೆ ಸೇರಿದ ಸ್ಥಿರಾಸ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮುಟ್ಟುಗೋಲು ಹಾಕಿದೆ.ಶನಿವಾರ ಚಂಡೀಗಢ ಮತ್ತು ಅಮೃತಸರದಲ್ಲಿ ಸ್ಥಿರಾಸ್ತಿಗಳ ಜಪ್ತಿ ನೋಟಿಸ್ಅನ್ನು ಎನ್ಐಎ ಅಂಟಿಸಿದೆ.ಪಂಜಾಬ್ನ ಅಮೃತಸರ ಹಾಗೂ ಚಂಡೀಗಢದಲ್ಲಿ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುವಿಗೆ ಸೇರಿದ ಕೃಷಿ ಭೂಮಿ ಹಾಗೂ ಮನೆಯನ್ನು ಎನ್ಐಎ ಮುಟ್ಟುಗೋಲು ಹಾಕಿದೆ. ”ಎನ್ಐಎ ಪ್ರಕರಣದಲ್ಲಿ ಘೋಷಿತ ಅಪರಾಧಿ ಗುರುಪತ್ವಂತ್ ಸಿಂಗ್ ಪನ್ನು ಒಡೆತನದ […]
ಜಾನುವಾರು ಕಳ್ಳಸಾಗಣೆ ವೇಳೆ ಬಿಎಸ್ಎಫ್ ಗುಂಡಿಗೆ ಓರ್ವ ಬಲಿ

ಜಾನುವಾರು ಕಳ್ಳಸಾಗಣೆ ವೇಳೆ ಬಿಎಸ್ಎಫ್ ಗುಂಡಿಗೆ ಓರ್ವ ಬಲಿದಕ್ಷಿಣ ಸಲ್ಮಾರಾ ಮಂಕಾಚಾರ್ (ಅಸ್ಸಾಂ) : ಬಾಂಗ್ಲಾದೇಶಕ್ಕೆ ಜಾನುವಾರುಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಗುಂಡಿಕ್ಕಿ ಕೊಂದಿರುವ ಘಟನೆ ಅಸ್ಸಾಂನ ದಕ್ಷಿಣ ಸಲ್ಮಾರಾ ಮಂಕಾಚಾರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂಡೋ-ಬಾಂಗ್ಲಾದೇಶ ಗಡಿಯ ಖರುವಾಬಂಧಾ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಭಾರತದಿಂದ ಅಸ್ಸಾಂಗೆ ಜಾನುವಾರು ಕಳ್ಳಸಾಗಣೆ ಮಾಡುತ್ತಿದ್ದ ಶಂಕೆಯ ಮೇಲೆ […]