ದಿವಾಳಿ ಪಾಕಿಸ್ತಾನಕ್ಕೆ ನೆರೆಹೊರೆ ಕಿರಿಕಿರಿ: ಅಫಘಾನಿಸ್ಥಾನದಿಂದ ನುಸುಳುಕೋರ ಬಾಧೆ; ವಿದ್ಯುತ್ ಬಿಲ್ ಬಾಕಿ ಪಾವತಿಗೆ ದುಂಬಾಲು ಬಿದ್ದ ಚೀನಾ

ಇಸ್ಲಾಮಾಬಾದ್: ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಂಧನದ ನಂತರ ಮೇ 9 ರಂದು ದೇಶವನ್ನು ಬೆಚ್ಚಿಬೀಳಿಸಿದ ಭಾರೀ ಹಿಂಸಾಚಾರದ ಹಿನ್ನೆಲೆಯಲ್ಲಿ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಅಕ್ರಮವಾಗಿ ತಂಗಿರುವ ಆಫ್ಘನ್ ಪ್ರಜೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಪಾಕಿಸ್ತಾನದ ಆಂತರಿಕ ಸಚಿವಾಲಯ ನಿರ್ಧರಿಸಿದೆ. ಪಾಕ್ ನ ವಿದೇಶಿ ಕಾಯಿದೆಯಡಿಯಲ್ಲಿ ಈಗ ವಿಚಾರಣೆಗೆ ಒಳಪಟ್ಟಿರುವ 200 ಕ್ಕೂ ಹೆಚ್ಚು ಆಫ್ಘನ್ನರನ್ನು ಪೊಲೀಸರು ಬಂಧಿಸಿದ್ದಾರೆ. ದೇಶದ ಆಂತರಿಕ ಸಚಿವಾಲಯವು ಇಸ್ಲಾಮಾಬಾದ್‌ನಲ್ಲಿರುವ ಎಲ್ಲಾ ಆಫ್ಘನ್ ವಸಾಹತುಗಳ ಲೆಕ್ಕಪರಿಶೋಧನೆಯನ್ನು ಬಯಸುತ್ತಿದೆ ಎನ್ನಲಾಗಿದ್ದು ಇದು ನೆರೆಯ […]

ಕೇಂದ್ರ ವನ ಧನ್ ಯೋಜನೆಯ ಉಪಕ್ರಮದಡಿ ಮಾರುಕಟ್ಟೆಗೆ ಬರಲಿದೆ ಮಾಲವೇದನ್ ಬುಡಕಟ್ಟು ಜನಾಂಗ ತಯಾರಿಸುವ ಜೇನು ನೆಲ್ಲಿಕಾಯಿ

ತಿರುವನಂತಪುರ: ಸ್ಥಳೀಯ ಸಮುದಾಯವನ್ನು ಅದರಲ್ಲೂ ವಿಶೇಷವಾಗಿ ಬುಡಕಟ್ಟು ಜನರನ್ನು ಒಳಗೊಳ್ಳುವ ದೃಷ್ಟಿಯಿಂದ, ಕೇಂದ್ರ ಸರ್ಕಾರವು ವನ್ ಧನ್ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಬುಡಕಟ್ಟು ಜನಾಂಗದವರು ಉದ್ಯಮಿಗಳಾಗುವ ಮೂಲಕ ಆರ್ಥಿಕವಾಗಿ ಸಬಲರಾಗಲು ಸರ್ಕಾರವು ಸಹಾಯ ಮಾಡುತ್ತಿದೆ. ಈ ಯೋಜನೆಯ ಅಂತರ್ಗತ ಇದೀಗ ಕೇರಳದ ರನ್ನಿ ಪ್ರದೇಶದ ಮಾಲವೇದನ್ ಬುಡಕಟ್ಟು ಜನಾಂಗದವರು ತಯಾರಿಸಿದ ಜನಪ್ರಿಯ ಜೇನು ನೆಲ್ಲಿಕಾಯಿ ಕೇರಳ ರಾಜ್ಯದಾದ್ಯಂತ ಲಭ್ಯವಿರಲಿದೆ. ಚಿತ್ತಾರದ ಓಲಿಕಲ್ಲು ಕುಗ್ರಾಮದಲ್ಲಿ ವಾಸವಾಗಿರುವ ಈ ಬುಡಕಟ್ಟು ಜನಾಂಗದವರು ಹಲವು ವರ್ಷಗಳಿಂದ ತಯಾರಿಸುವ ಈ […]

ಮುಂಬೈ : ಭಾರತದ ಪ್ರಪ್ರಥಮ ಸಮುದ್ರದೊಳಗಿನ ರೈಲ್ವೆ ಸುರಂಗದ ಕೆಲಸ ಶೀಘ್ರದಲ್ಲೇ ಪ್ರಾರಂಭ

ಮುಂಬೈ: ಇಲ್ಲಿನ ಥಾಣೆ ಖಾರಿ ಮೂಲಕ 21 ಕಿಮೀ ಉದ್ದದ ಸುರಂಗ ನಿರ್ಮಾಣಕ್ಕಾಗಿ ನ್ಯಾಷನಲ್ ಹೈ-ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಎಚ್‌ಎಸ್‌ಆರ್‌ಸಿಎಲ್) ಅಫ್ಕಾನ್ಸ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್‌ನೊಂದಿಗೆ ಗುರುವಾರ ಒಪ್ಪಂದಕ್ಕೆ ಸಹಿ ಹಾಕುವುದರೊಂದಿಗೆ ಭಾರತದ ಮೊದಲ ಸಮುದ್ರದೊಳಗಿನ 7ಕಿಮೀ ಉದ್ದದ ರೈಲ್ವೆ ಸುರಂಗದ ಕೆಲಸ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ಸುರಂಗವು ಮುಂಬೈ-ಅಹಮದಾಬಾದ್ ಬುಲೆಟ್ ಟ್ರೈನ್ ಯೋಜನೆಯ ಭಾಗವಾಗಿದೆ. ಥಾಣೆ ಖಾರಿಯಲ್ಲಿ ದೇಶದ ಮೊದಲ ಸಮುದ್ರದೊಳಗಿನ ಅವಳಿ-ರೈಲು ಸುರಂಗವನ್ನು ಒಳಗೊಂಡಿರುವ 21 ಕಿಮೀ ಸುರಂಗದ ನಿರ್ಮಾಣವು ಮುಂಬೈ-ಅಹಮದಾಬಾದ್ ಹೈಸ್ಪೀಡ್ […]

ಅಮೆರಿಕದ COVID ಸಂಯೋಜಕ ಹುದ್ದೆಯಿಂದ ಡಾ.ಆಶಿಶ್ ಝಾ ಮರಳಿ ಡೀನ್ ಹುದ್ದೆಗೆ

ಷಿಂಗ್ಟನ್ (ಅಮೆರಿಕ): ಭಾರತೀಯ – ಅಮೆರಿಕನ್ ವೈದ್ಯ ಡಾ. ಆಶಿಶ್ ಝಾ ಅವರು ಜೂನ್ ಅಂತ್ಯದ ವೇಳೆಗೆ ತಮ್ಮ ಹುದ್ದೆ COVID-19 ಸಂಯೋಜಕ ಹುದ್ದೆಯನ್ನು ತೊರೆದು, ಹಿಂದಿನ ಡೀನ್​ ಹುದ್ದೆಗೆ ಮರಳಲಿದ್ದಾರೆ ಎಂದು ಅಧ್ಯಕ್ಷ ಜೋ ಬೈಡನ್​ ತಿಳಿಸಿದ್ದಾರೆ. ಅಮೆರಿಕದ COVID-19 ಸಂಯೋಜಕ (response coordinator) ಭಾರತೀಯ – ಅಮೆರಿಕನ್ ವೈದ್ಯ ಡಾ ಆಶಿಶ್ ಝಾ ಅವರು ಜೂನ್ ಅಂತ್ಯದ ವೇಳೆಗೆ ತಮ್ಮ ಹುದ್ದೆಯನ್ನು ತೊರೆಯಲಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಅಧ್ಯಕ್ಷ ಜೋ ಬೈಡನ್​ ತಿಳಿಸಿದ್ದಾರೆ. 52 […]

ಕರ್ನಾಟಕದ ಗ್ರಾಮವೂ ಈ ಪಟ್ಟಿಯಲ್ಲಿದೆ – ಭಾರತದ 10 ಸುಂದರ ಹಳ್ಳಿಗಳಿಗೆ ಭೇಟಿ ಕೊಡಲಿದ್ದಾರೆ ಆನಂದ್ ಮಹೀಂದ್ರಾ

ಅವರು ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ಭಾರತದ 10 ಅತ್ಯಂತ ಸುಂದರವಾದ ಹಳ್ಳಿಗಳನ್ನು ಪಟ್ಟಿ ಮಾಡಲಾಗಿದೆ. ಹಿಮಾಚಲ ಪ್ರದೇಶದ ಕಲ್ಪಾ ಹಳ್ಳಿಯಿಂದ ಮೇಘಾಲಯದ ಮಾವ್ಲಿನ್ನಾಂಗ್‌ವರೆಗಿನ ಹಳ್ಳಿಗಳ ಚಿತ್ರಗಳು ಈ ಲಿಸ್ಟ್​​ನಲ್ಲಿದೆ.ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಶೇರ್​ ಮಾಡಿರುವ ಸುಂದರ 10 ಹಳ್ಳಿಗಳ ಲಿಸ್ಟ್ ನೆಟ್ಟಿಗರ ಗಮನ ಸೆಳೆದಿದೆ. ಉದ್ಯಮಿ ಆನಂದ್ ಮಹೀಂದ್ರಾ ಅವರು ಕಲರ್ಸ್ ಆಫ್ ಭಾರತ್ಎಂಬ ಟ್ವಿಟರ್ ಪೇಜ್​​ ಪೋಸ್ಟ್ ಅನ್ನು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಶೇರ್ ಮಾಡಿದ್ದಾರೆ ನೀವು ಕೇವಲ ಪ್ರವಾಸಿ ತಾಣಗಳಿಗೆ ಭೇಟಿ ಕೊಡುವುದು ಮಾತ್ರವಲ್ಲದೇ, […]